25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೈಂದೂರಿನಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರ ಪುನಶ್ಚೇತನ ಕೇಂದ್ರ ಸೇವಾಧಾಮಕ್ಕೆ ಭೂಮಿ ಪೂಜೆ

ಬೈಂದೂರು : ಸಮೃದ್ಧ ಬೈಂದೂರು ಪರಿಕಲ್ಪನೆಯ ಸೇವಾ ಸೇತು ಯೋಜನೆಯಡಿಯಲ್ಲಿ ಸೇವಾಭಾರತಿ (ರಿ.)ಕನ್ಯಾಡಿ ಸಹಯೋಗದೊಂದಿಗೆ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನೂತನ ಪುನಶ್ಚೇತನ ಕೇಂದ್ರ ಸೇವಾಧಾಮ ಇದರ ಭೂಮಿ ಪೂಜೆ ಕಾರ್ಯಕ್ರಮ ಏಪ್ರಿಲ್ 28 ರಂದು ಬೈಂದೂರಿನ ಪಡುವರಿ ಗ್ರಾಮದ ಹೇನಬೇರು ಇಲ್ಲಿ ನಡೆಯಿತು.

ಮಾನ್ಯ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಭೂಮಿ ಪೂಜೆಯನ್ನು ನೆರವೇರಿಸಿ ಈ ಒಂದು ಕೇಂದ್ರ ಬೈಂದೂರಿನ 37 ಮಂದಿ ದಿವ್ಯಾಂಗರ ಬಾಳಲ್ಲಿ ಆಶಾಕಿರಣವಾಗಲಿ. ರಾಜಕೀಯದ ಜೊತೆ ಜೊತೆಗೆ ಇನ್ನೊಬ್ಬರ ನೋವಿಗೆ ನಾವು ಸ್ಪಂದಿಸುವುದು ಸಹ ಮಹತ್ತರವಾದ ಕೆಲಸವಾಗಿದೆ . ಬೈಂದೂರಿನಲ್ಲಿ ಆಗುವಂತಹ ಈ ಒತ್ತಡ ಗಾಯ ನಿರ್ವಹಣೆ ಮತ್ತು ಪುನಶ್ವೇತನ ಕೇಂದ್ರವನ್ನು ಕರ್ನಾಟಕದಲ್ಲಿ 2ನೇ ಕೇಂದ್ರವನ್ನಾಗಿ ಪ್ರಾರಂಭಿಸಲಿದ್ದೇವೆ ಈ ಒಂದು ಕೆಲಸವನ್ನು ಮಾಡಲು ಬಹಳ ಸಂತೋಷ ಇದೆ ಎಂದು ಶುಭಹಾರೈಸಿದರು.

ಈ ಸಂದರ್ಭದಲ್ಲಿ ಸಮೃದ್ಧ ಜನ ಸೇವಾ ಚಾರಿಟೇಬಲ್ ಟ್ರಸ್ಟ್ ನ ಪ್ರಮುಖರಾದ ಬಿಎಸ್ ಸುರೇಶ್ ಶೆಟ್ಟಿ, ಬರವಾಡಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಸುರೇಶ್, ಶಿರೂರು ಹಿರಿಯ ವೈದ್ಯಾಧಿಕಾರಿಗಳು ಡಾ. ಕೆ ಪಿ ನಬಿಯಾರ್, ಬೈಂದೂರು ಆರೋಗ್ಯ ಭಾರತಿ ಉಪಾಧ್ಯಕ್ಷರು ಡಾ. ಎ ಎಸ್ ಉಡುಪ ಸೇವಾಧಾಮ ಸಂಸ್ಥಾಪಕರು ಕೆ ವಿನಾಯಕ ರಾವ್ ಮತ್ತು ಸೇವಾಭಾರತಿ ಕಾರ್ಯದರ್ಶಿ ಬಾಲಕೃಷ್ಣ ಉಪಸ್ಥಿತರಿದ್ದರು.

Related posts

ಸ್ಪಂದನ ಪಾಲಿಕ್ಲಿನಿಕ್ ವತಿಯಿಂದ ಮನೆ ಬಾಗಿಲಿಗೆ ಬಂದು ರಕ್ತದ ಸ್ಯಾಂಪಲ್ ಸಂಗ್ರಹಿಸುವ ವ್ಯವಸ್ಥೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ದೇವದಾಸ್ ಶೆಟ್ಟಿ, ಕಾರ್ಯದರ್ಶಿ ಕಿರಣ್‌ ಕುಮಾರ್ ಶೆಟ್ಟಿ, ಕೋಶಾಧಿಕಾರಿ ಅಮಿತಾನಂದ ಹೆಗ್ಡೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ವತಿಯಿಂದ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಬೆಳ್ತಂಗಡಿ: ರಾಮನಗರ ನಿವಾಸಿ ಉಪಾಲಕ್ಷಿ ನಿಧನ

Suddi Udaya

ಮುಂಡೂರು ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ: ಎರಡು ಕರುಗಳು ಮೃತ್ಯು

Suddi Udaya

ನಾಳ: ಆಟೋ ಮಾಲಕ ಚಾಲಕ ಜಾರಪ್ಪ ಶೆಟ್ಟಿ ನಿಧನ

Suddi Udaya
error: Content is protected !!