July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೈಂದೂರಿನಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರ ಪುನಶ್ಚೇತನ ಕೇಂದ್ರ ಸೇವಾಧಾಮಕ್ಕೆ ಭೂಮಿ ಪೂಜೆ

ಬೈಂದೂರು : ಸಮೃದ್ಧ ಬೈಂದೂರು ಪರಿಕಲ್ಪನೆಯ ಸೇವಾ ಸೇತು ಯೋಜನೆಯಡಿಯಲ್ಲಿ ಸೇವಾಭಾರತಿ (ರಿ.)ಕನ್ಯಾಡಿ ಸಹಯೋಗದೊಂದಿಗೆ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನೂತನ ಪುನಶ್ಚೇತನ ಕೇಂದ್ರ ಸೇವಾಧಾಮ ಇದರ ಭೂಮಿ ಪೂಜೆ ಕಾರ್ಯಕ್ರಮ ಏಪ್ರಿಲ್ 28 ರಂದು ಬೈಂದೂರಿನ ಪಡುವರಿ ಗ್ರಾಮದ ಹೇನಬೇರು ಇಲ್ಲಿ ನಡೆಯಿತು.

ಮಾನ್ಯ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಭೂಮಿ ಪೂಜೆಯನ್ನು ನೆರವೇರಿಸಿ ಈ ಒಂದು ಕೇಂದ್ರ ಬೈಂದೂರಿನ 37 ಮಂದಿ ದಿವ್ಯಾಂಗರ ಬಾಳಲ್ಲಿ ಆಶಾಕಿರಣವಾಗಲಿ. ರಾಜಕೀಯದ ಜೊತೆ ಜೊತೆಗೆ ಇನ್ನೊಬ್ಬರ ನೋವಿಗೆ ನಾವು ಸ್ಪಂದಿಸುವುದು ಸಹ ಮಹತ್ತರವಾದ ಕೆಲಸವಾಗಿದೆ . ಬೈಂದೂರಿನಲ್ಲಿ ಆಗುವಂತಹ ಈ ಒತ್ತಡ ಗಾಯ ನಿರ್ವಹಣೆ ಮತ್ತು ಪುನಶ್ವೇತನ ಕೇಂದ್ರವನ್ನು ಕರ್ನಾಟಕದಲ್ಲಿ 2ನೇ ಕೇಂದ್ರವನ್ನಾಗಿ ಪ್ರಾರಂಭಿಸಲಿದ್ದೇವೆ ಈ ಒಂದು ಕೆಲಸವನ್ನು ಮಾಡಲು ಬಹಳ ಸಂತೋಷ ಇದೆ ಎಂದು ಶುಭಹಾರೈಸಿದರು.

ಈ ಸಂದರ್ಭದಲ್ಲಿ ಸಮೃದ್ಧ ಜನ ಸೇವಾ ಚಾರಿಟೇಬಲ್ ಟ್ರಸ್ಟ್ ನ ಪ್ರಮುಖರಾದ ಬಿಎಸ್ ಸುರೇಶ್ ಶೆಟ್ಟಿ, ಬರವಾಡಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಸುರೇಶ್, ಶಿರೂರು ಹಿರಿಯ ವೈದ್ಯಾಧಿಕಾರಿಗಳು ಡಾ. ಕೆ ಪಿ ನಬಿಯಾರ್, ಬೈಂದೂರು ಆರೋಗ್ಯ ಭಾರತಿ ಉಪಾಧ್ಯಕ್ಷರು ಡಾ. ಎ ಎಸ್ ಉಡುಪ ಸೇವಾಧಾಮ ಸಂಸ್ಥಾಪಕರು ಕೆ ವಿನಾಯಕ ರಾವ್ ಮತ್ತು ಸೇವಾಭಾರತಿ ಕಾರ್ಯದರ್ಶಿ ಬಾಲಕೃಷ್ಣ ಉಪಸ್ಥಿತರಿದ್ದರು.

Related posts

ಕಳಿಯ ಗ್ರಾಮ ಪಂಚಾಯತ್ ಅರಿವು ಕೇಂದ್ರದ ಸಭೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್‌ವೈಎಸ್ ಬೆಳ್ತಂಗಡಿ ಝೋನ್ ನಿಂದ ತಹಶೀಲ್ದಾರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಶಿಬಾಜೆ : ಭಂಡಿಹೊಳೆ ಶ್ರೀಹರಿ ದಾಮಲೆ ನಿಧನ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ದೇಹ ಮತ್ತು ಮನಸ್ಸಿನ ಹೊಂದಾಣಿಕೆ” ಕಾರ್ಯಾಗಾರ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ನ ಯೋಜನಾಧಿಕಾರಿ ಅವನೀಶ್ ಪಿ ರವರಿಗೆ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ರಾಜ್ಯ ಘಟಕದ ವತಿಯಿಂದ ಸನ್ಮಾನ

Suddi Udaya

ಕಾಶಿಪಟ್ಣ ದಾರುನ್ನೂರು ಎಜುಕೇಶನ್ ಸೆಂಟರ್‌ಗೆ ರೂ.1 ಕೋಟಿ ಅನುದಾನ ಮಂಜೂರು

Suddi Udaya
error: Content is protected !!