23.3 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಮೇ. 7 : ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣಾ ಶಿಬಿರ

ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೇ.7 ರಂದು ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಆದೇಶದಂತೆ, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣಾ ಶಿಬಿರ ಆಯೋಜಿಸಲಾಗಿದೆ.


ಡಾ. ನಾಯಕ್ಸ್ ಫರ್ಟಿಲಿಟಿ ಕ್ಲಿನಿಕ್ ಮತ್ತು ಐವಿಎಫ್ ಸೆಂಟರ್ ಸಹಯೋಗದಲ್ಲಿ ನಡೆಯುವ ಈ ಶಿಬಿರದಲ್ಲಿ ಸ್ತ್ರೀರೋಗ ತಪಾಸಣೆ, ಬಂಜೆತನ ತಪಾಸಣೆ, ಮುಟ್ಟಿನ ಅಸ್ವಸ್ಥತೆಗಳು, ಮೂತ್ರನಾಳದ ಸೋಂಕು ತಪಾಸಣೆ, ಸ್ತನದ ತಪಾಸಣೆ, ಗರ್ಭಾಶಯದ ತಪಾಸಣೆ, ಮಹಿಳೆಯರ ಕ್ಯಾನ್ಸರ್ ಮುಂತಾದ ತಪಾಸಣೆಗಳನ್ನು ಉಚಿತವಾಗಿ ಮಾಡಲಾಗುವುದು.

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞರುಗಳಾದ ಡಾ. ಸ್ವರ್ಣಲತಾ, ಡಾ. ಪ್ರಿಯಾಂಕ ಜಯದೇವ್, ಡಾ. ಅನ್ವಿತಾ ಶತಾನಂ ಪ್ರಸಾದ್ ರಾವ್ ಹಾಗೂ ಸಂತಾನೋತ್ಪತ್ತಿ ಔಷಧ ಕನ್ಸಲ್ಟೆಂಟ್ ಆಗಿರುವ ಡಾ. ಪ್ರಮೋದ ಲಕ್ಷ್ಮಣ್ ಈ ಶಿಬಿರದಲ್ಲಿ ಮಹಿಳೆಯರ ರೋಗ ಮತ್ತು ಬಂಜೆತನ ತಪಾಸಣೆ ನಡೆಸಲಿದ್ದಾರೆ. ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯುವ ಈ ಶಿಬಿರದಲ್ಲಿ ವೈದ್ಯರ ಸಮಾಲೋಚನೆ ಉಚಿತ, ಸ್ಕ್ಯಾನಿಂಗ್ 50%, ಔಷಧದಲ್ಲಿ 10%, ಒಳರೋಗಿ ವಿಭಾಗದಲ್ಲಿ 10%, ರಕ್ತಪರೀಕ್ಷೆ ಮತ್ತು ರೇಡಿಯಾಲಜಿಯಲ್ಲಿ 20% ರಿಯಾಯಿತಿ ದೊರೆಯಲಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ ಎಂ. ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ: ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ ನಿಧನ

Suddi Udaya

ಕೊಯ್ಯೂರು ಬಿಜೆಪಿ ಶಕ್ತಿ ಕೇಂದ್ರದ 157ನೇ ಬೂತು ವತಿಯಿಂದ ಗುರು ಪೂರ್ಣಿಮೆ ಆಚರಣೆ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ : ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್ ಕಾಲೇಜಿನಲ್ಲಿ ‘ಆಟಿಡೊಂಜಿ ದಿನ’

Suddi Udaya

ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಮುಂಡಾಜೆ ಗ್ರಾ.ಪಂ ಪಿಡಿಓ ರಾಜ್ಯಮಟ್ಟಕ್ಕೆ ಆಯ್ಕೆ: ಮಹಿಳೆಯರ ಕಲಾತ್ಮಕ ವೈಯಕ್ತಿಕ ಯೋಗಾಸನ,ಸಾಂಪ್ರದಾಯಿಕ ವೈಯಕ್ತಿಕ ಯೋಗಾಸನದಲ್ಲಿ ಪ್ರಶಸ್ತಿ

Suddi Udaya

ಮೇ 28: ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಿಲಾಮಯ ಧ್ವಜಸ್ತಂಭ

Suddi Udaya
error: Content is protected !!