23.5 C
ಪುತ್ತೂರು, ಬೆಳ್ತಂಗಡಿ
June 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ: ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಕಳವು

ಬೆಳ್ತಂಗಡಿ : ಲಾಯಿಲ ಟಿ.ಬಿ ಕ್ರಾಸ್ ಬಳಿ ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಅನ್ನು ಕಳ್ಳತನ ಮಾಡಿದ ಘಟನೆ ನಡೆದಿದ್ದು ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.

ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಟಿ.ಬಿ ಕ್ರಾಸ್ ಹಳೆಪೇಟೆ ನಿವಾಸಿ ವರದರಾಜ ಹೆಗ್ಡೆ ಎಂಬವರ ಮನೆಯ ಅಂಗಳದಿಂದಲೇ ಬೈಕ್ ಕಳ್ಳತನವಾಗಿದೆ. ವರದರಾಜ ಹೆಗ್ಡೆ ಅವರು ಸೇಲ್ಸ್ ಮ್ಯಾ‌ನ್ ಕೆಲಸ ಮಾಡಿಕೊಂಡಿದ್ದು ಏ.25ರಂದು ಕೆಲಸ ಮುಗಿಸಿ ಬಂದು ರಾತ್ರಿಯ ವೇಳೆ ಮನೆಯ ಹೊರಗೆ ಶೆಡ್ ನಲ್ಲಿ ತನ್ನ ಕೆ.ಎ 70 E 1651ನಂಬರಿನ ಸುಜುಕಿ ಕಂಪೆನಿಯ ಮೋಟಾರ್ ಸೈಕಲ್ ಅನ್ನು ನಿಲ್ಲಿಸಿದ್ದರು. ಏ.26ರಂದು ಬೆಳಗ್ಗೆ ಎದ್ದು ನೋಡಿದಾಗ ಬೈಕ್ ನಾಪತ್ತೆಯಾಗಿತ್ತು. ನೆರಕರೆಯಲ್ಲಿ ಹುಡುಕಾಡಿದರೂ ಬೈಕ್ ಪತ್ತೆಯಾಗದ ಹಿನ್ನಲೆಯಲ್ಲಿ ಬೆಳ್ತಂಗಡಿ ಪೊಲೀಸರಿಗೆ ಏ.26 ರಂದು ದೂರು ನೀಡಲಾಗಿದ್ದು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲಾ ವಾರ್ಷಿಕೋತ್ಸವ

Suddi Udaya

ಕೊಕ್ಕಡ ಅಮೃತ ಗ್ರಾ.ಪಂ. ನಿಂದ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಭಾರತೀಯ ಜೈನ್ ಮಿಲನ್ ನ ಕೆನಡಾ ಘಟಕವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೆಬಿನಾರ್ ಮೂಲಕ ಉದ್ಘಾಟನೆ

Suddi Udaya

ರೋಟರಿ ಮಂಗಳೂರು ಪೂರ್ವದ ಅಧ್ಯಕ್ಷರಾಗಿ ಜಯರಾಮ್ ಶೆಟ್ಟಿ ಮುಂಡಾಡಿಗುತ್ತು ಆಯ್ಕೆ

Suddi Udaya

ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ ಉಜಿರೆ ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಸೇವಾಯಜ್ಞ’

Suddi Udaya

ಪಟ್ರಮೆ: ಉಳಿಯಬೀಡುನಲ್ಲಿ ‘ಭರತ ಬಾಹುಬಲಿ’ ತಾಳಮದ್ದಲೆ

Suddi Udaya
error: Content is protected !!