July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಶ್ರೀ ವಿಶ್ವಕರ್ಮ ಸೇವಾ ಸಂಘ ಹಾಗೂ ಕಾಳಿಕಾಂಬ ಮಹಿಳಾ ಮಂಡಳಿಯ ಮಹಾಸಭೆ , ಶ್ರೀ ವಿಶ್ವಕರ್ಮ ಪೂಜೆ

ವೇಣೂರು: ಶ್ರೀ ವಿಶ್ವಕರ್ಮ ಸೇವಾ ಸಂಘ ವೇಣೂರು ಹಾಗೂ ಕಾಳಿಕಾಂಬ ಮಹಿಳಾ ಮಂಡಳಿ ವೇಣೂರು ಇದರ 33 ನೇ ವರ್ಷದ ಮಹಾ ಸಭೆ ಹಾಗೂ ವಿಶ್ವಕರ್ಮ ಪೂಜೆಯು ಎ.27 ರಂದು ಜರಗಿತು.

ವಾರ್ಷಿಕ ಸಭಾ ಕಾರ್ಯಕ್ರಮದಲ್ಲಿ ಮೂಡುಬಿದ್ರಿ ಶ್ರೀ ಗುರುಮಠ ಕಾಳಿಕಾಂಬ ದೇವಸ್ಥಾನ ಆಡಳಿತ ಮುಖ್ಯಸ್ಥ ಎಂ.ಕೆ ಬಾಲಕೃಷ್ಣ ಆಚಾರ್ಯ ಉಳಿಯ ಅಧ್ಯಕ್ಷತೆ ವಹಿಸಿಕೊಂಡು ಮಾತನಾಡಿ ವೇಣೂರಿನ ಸಮಸ್ತ ವಿಶ್ವಕರ್ಮ ಬಂಧುಗಳ ಪರಿಶ್ರಮಕ್ಕೆ ಇನ್ನು ಮುಂದೆ ಈ ಕಟ್ಟಡವು ಆದಷ್ಟು ಬೇಗ ಸಭಾಂಗಣವಾಗಿ ನಿರ್ಮಾಣವಾಗಲಿ ಎಂದು ಶುಭ ಹಾರೈಸಿದರು.

ಸದಾನಂದ ಆಚಾರ್ಯ ಯಕ್ಷ ತೀರ್ಥ ಕಲಾ ಸೇವೆ ನೂರಾಳ್ ಬೆಟ್ಟು ಇವರು ಮುಖ್ಯ ಅತಿಥಿಗಳಾಗಿ ಮಾತನಾಡಿ ನಮ್ಮ ಸಮಾಜದ ಬಂಧುಗಳು ಆಚಾರ ಹಾಗೂ ವಿಚಾರಗಳಲ್ಲಿ ನಮ್ಮ ಸಮಾಜದ ಘನತೆ ಗೌರವವನ್ನು ಉಳಿಸಿದರೆ ನಾವು ನಂಬಿದ ದೇವರು ನಮ್ಮನ್ನು ಕೈ ಬಿಡುವುದಿಲ್ಲ ಎಂದು ಸಲಹೆ ನೀಡಿದರು. ಹಾಗೆಯೇ ಪದಗ್ರಹಣ ಕಾರ್ಯಕ್ರಮದಲ್ಲಿ ನೂತನ ಸಾಲಿನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಕೈರೋಳಿ ಸತೀಶ್ ಆಚಾರ್ಯರವರು ಆಯ್ಕೆಯಾದರು. ಅಭ್ಯಾಗತರನ್ನು ಸಭೆಯ ಗೌರವ ಅಧ್ಯಕ್ಷ ಖಂಡಿಗ ಶ್ರೀಧರ ಆಚಾರ್ಯರವರು ಹಾಗೂ ಅಧ್ಯಕ್ಷ ರವೀಂದ್ರ ಆಚಾರ್ಯರವರು ಸ್ಮರಣಿಕೆಯನ್ನು ನೀಡಿ ಗೌರವಿಸಿದರು. ಸಂಘದ ಉಪಾಧ್ಯಕ್ಷ ಸೀತಾರಾಮ ಆಚಾರ್ಯ ಸ್ವಾಗತಿಸಿ ಪ್ರಸ್ತಾವನೆ ಗೈದರು. ಜೊತೆ ಕಾರ್ಯದರ್ಶಿ ಬಿ ಹರಿಶ್ಚಂದ್ರ ಆಚಾರ್ಯ ಲೆಕ್ಕಪತ್ರ ಮಂಡಿಸಿ ಕಾರ್ಯಕ್ರಮವನ್ನು ನಿರೂಪಿಸಿದರು. ನೂತನ ಅಧ್ಯಕ್ಷ ಸತೀಶ್ ಆಚಾರ್ಯಧನ್ಯವಾದವಿತ್ತರು.

Related posts

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.229.55 ಕೋಟಿ ವ್ಯವಹಾರ-ರೂ.82.10 ಲಕ್ಷ ಲಾಭ- ಶೇ 10.50 ಡಿವಿಡೆಂಡ್

Suddi Udaya

ಕಲ್ಮಂಜ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಸನ್: ಅತ್ಯುತ್ತಮ ವಲಯ ಪ್ರಶಸ್ತಿಯಲ್ಲಿ ಬೆಳ್ತಂಗಡಿ ವಲಯ ತೃತೀಯ ಸ್ಥಾನ

Suddi Udaya

ಕುದ್ಯಾಡಿ ಸ.ಪ್ರಾ. ಶಾಲೆಯ ಅಗತ್ಯತೆಗೆ ಟೀಂ ಅಭಯಹಸ್ತ ಬೆಳ್ತಂಗಡಿ ವತಿಯಿಂದ ಆರ್ಥಿಕ ಸಹಕಾರ

Suddi Udaya

ಶ್ರೀ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಉಜಿರೆಯಲ್ಲಿ ಭವ್ಯ ಸ್ವಾಗತ: ಶ್ರೀಗಳಿಂದ ಜನಾರ್ದನ ದೇವರ ದರ್ಶನ,ಸ್ವಾಮೀಜಿಯವರಿಗೆ ಪೌರ ಸನ್ಮಾನ: ಕೇರಳ ಶೈಲಿಯ ಚಂಡೆ ವಾದನ, ವಯೊಲಿನ್, 22 ತಂಡಗಳಿಂದ ಭಜನೆ, ಸ್ಯಾಕ್ಸೋಫೋನ್ ವಾದನದೊಂದಿಗೆ ಮೆರವಣಿಗೆ

Suddi Udaya

ಎಸ್.ಐ.ಟಿ ತನಿಖೆಯ ತಡೆಯಾಜ್ಞೆ ತೆರವು ಮಾಡಿದ ಹೈಕೋರ್ಟ್

Suddi Udaya
error: Content is protected !!