27.4 C
ಪುತ್ತೂರು, ಬೆಳ್ತಂಗಡಿ
April 30, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನುಮಾನ್ ಜಯಂತಿ ಆಚರಣೆ



ಶಿಶಿಲ : ಹನುಮಂತ ಸ್ವಾಮಿ ಭಕ್ತಿಗೆ ಆದರ್ಶ. ಆತ ಅತೀ ಧೈರ್ಯವಂತ. ಯಾವುದೇ ಕಾರ್ಯ ಸಾಧಿಸಬೇಕಾದಲ್ಲಿ ಅದನ್ನು ಸಾಧಿಸುವಂತ ಪರಾಕ್ರಮಿ. ಶ್ರೀರಾಮನ ಸೇವಕ. ದುಷ್ಟ ಶಕ್ತಿಗಳನ್ನು ನಿಗ್ರಹಿಸಿದ ವೀರ ಪುರುಷ. ಆತನ ಆರಾಧನೆ ಪರಿಣಾಮ ನಮಗೂ ರಾಷ್ಟ್ರಕ್ಕೂ ಶಕ್ತಿ ತುಂಬಲಿ ಎಂದು ಶ್ರೀ ಅರಿಕೆಗುಡ್ದೆ ವನದುರ್ಗಾ ದೇವಾಲಯ ಅಧ್ಯಕ್ಷ ಪ್ರಕಾಶ‌ ಪಿಲಿಕಬೆ ತಿಳಿಸಿದ್ದರು.

ಅವರು ಶಿಶಿಲ ಶಿವಕೀರ್ತಿ ನಿಲಯದಲ್ಲಿ ನಡೆದ ಶ್ರೀ ಆಂಜನೇಯ ಜಯಂತಿ ಕಾರ್ಯಕಾರ್ಯಕ್ರಮ ಉದ್ಘಾಟನೆ ಮಾಡಿ ಶುಭ ಹಾರೈಸಿದರು.


ಮುಖ್ಯ ಅತಿಥಿಯಾಗಿ ಜೀವ ವಿಮಾ ಬೆಳ್ತಂಗಡಿ ಅಧಿಕಾರಿ ಉದಯಶಂಕರ ಅರಸಿನಮಕ್ಕಿ ಮಾತನಾಡಿ ಹನುಮನ ಶಕ್ತಿ ಎಲ್ಲಾ ಭಾರತೀಯ ಪ್ರಜೆಗೂ ಬರಲಿ. ಅವರ ಆದರ್ಶ ಮೈಗೂಡಿಸಿಕೊಂಡು ಬರುವಾ ಎಂದು ಶುಭಾಶಯ ತಿಳಿಸಿದರು.
ಈ ಸಂದರ್ಭದಲ್ಲಿ ಕಾಸರಗೋಡು ಹಿರಿಯ ಭಜನಾ ಪಟು ಹರಿದಾಸ ಜಯಾನಂದ ಕಾಸರಗೋಡು ‌ಮತ್ತು ಭಜನಾ ಸಾಧಕ ಬಾಲಕೃಷ್ಣ ಪಂಜ ಅವರನ್ನು ಮನೆಯ ಪರವಾಗಿ ಜಯರಾಮ ನೆಲ್ಲಿತ್ತಾಯ ಮತ್ತು ಶ್ರೀ ಮತಿ ರೇಖಾ ಜಯರಾಮ ನೆಲ್ಲಿತ್ತಾಯ ಅಭಿನಂದನೆ ‌ಮಾಡಿದರು.


ರಾಘವೇಂದ್ರ ಕಿಗ್ಗ ಉಪಸ್ಥಿತರಿದ್ದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧ ಭಜನಾ ಮಂಡಳಿಯ ಭಜಕರು ಭಾಗವಹಿಸಿ ಆಕರ್ಷಕ ಕುಣಿತ ಭಜನೆ ನೆರವೇರಿಸಿದರು.
ಬಿಳಿನೆಲೆ ಭಜನಾ‌ ಮಂಡಳಿಯ ಸುಂದರ ಮತ್ತು ತಂಡದವರಿಂದ ಮತ್ತು ಹರಿದಾಸ ಕಾಸರಗೋಡು ಜಯಾನಂದ ಅವರ ತಂಡ ಭಜನಾ ಕಾರ್ಯಕ್ರಮ ನಡೆಸಿದ್ದರು.


ಕಾರ್ಯಕ್ರಮದಲ್ಲಿ ಬೆಳ್ತಂಗಡಿ , ಪುತ್ತೂರು, ಕಾಸರಗೋಡು ವಿವಿಧ ಭಜನಾ ತಂಡದವರು ಭಾಗವಹಿಸಿದ್ದರು.
ಭಾಗವಹಿಸಿದ ಎಲ್ಲರಿಗೂ ಶಿವಕೀರ್ತಿ ನಿಲಯದ ಜಯರಾಮ ನೆಲ್ಲಿತ್ತಾಯ ದಂಪತಿಗಳು ಮನೆಯವರೂ ಎಲ್ಲರೂ ಅಭಿನಂದನೆ ತಿಳಿಸಿದ್ದರು.

Related posts

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಎಸ್‌ಡಿಪಿಐ ತೆಂಕಕಾರಂದೂರು ವತಿಯಿಂದ ಪೆರಲ್ದಾರಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧ. ಗ್ರಾ. ಯೋ. ಸಮುದಾಯ ಅಭಿವೃದ್ಧಿ ವತಿಯಿಂದ ರೂ.25 ಸಾವಿರ ಆರ್ಥಿಕ ನೆರವು

Suddi Udaya

ಉಜಿರೆ: ಶಾರದಾ ಕುಟುಂಬ ವಿಕಸನ ಮಂಡಳಿ ವತಿಯಿಂದ ‘ವಿದ್ಯಾರ್ಥಿ ಸಬಲೀಕರಣ ಮತ್ತು ರಕ್ಷಾನಿಧಿ’ ಕಾರ್ಯಯಾನ ಉದ್ಘಾಟನೆ

Suddi Udaya

ಸ್ಟಾರ್ ಲೈನ್ ಆಂ.ಮಾ. ಶಾಲೆ ರಝ ಗಾರ್ಡನ್ ಮಂಜೊಟ್ಟಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮಾ.30 ರಂದು ವೇಣೂರು-ಪೆರ್ಮುಡ ಸೂರ್ಯ- ಚಂದ್ರ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Suddi Udaya
error: Content is protected !!