September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನುಮಾನ್ ಜಯಂತಿ ಆಚರಣೆ



ಶಿಶಿಲ : ಹನುಮಂತ ಸ್ವಾಮಿ ಭಕ್ತಿಗೆ ಆದರ್ಶ. ಆತ ಅತೀ ಧೈರ್ಯವಂತ. ಯಾವುದೇ ಕಾರ್ಯ ಸಾಧಿಸಬೇಕಾದಲ್ಲಿ ಅದನ್ನು ಸಾಧಿಸುವಂತ ಪರಾಕ್ರಮಿ. ಶ್ರೀರಾಮನ ಸೇವಕ. ದುಷ್ಟ ಶಕ್ತಿಗಳನ್ನು ನಿಗ್ರಹಿಸಿದ ವೀರ ಪುರುಷ. ಆತನ ಆರಾಧನೆ ಪರಿಣಾಮ ನಮಗೂ ರಾಷ್ಟ್ರಕ್ಕೂ ಶಕ್ತಿ ತುಂಬಲಿ ಎಂದು ಶ್ರೀ ಅರಿಕೆಗುಡ್ದೆ ವನದುರ್ಗಾ ದೇವಾಲಯ ಅಧ್ಯಕ್ಷ ಪ್ರಕಾಶ‌ ಪಿಲಿಕಬೆ ತಿಳಿಸಿದ್ದರು.

ಅವರು ಶಿಶಿಲ ಶಿವಕೀರ್ತಿ ನಿಲಯದಲ್ಲಿ ನಡೆದ ಶ್ರೀ ಆಂಜನೇಯ ಜಯಂತಿ ಕಾರ್ಯಕಾರ್ಯಕ್ರಮ ಉದ್ಘಾಟನೆ ಮಾಡಿ ಶುಭ ಹಾರೈಸಿದರು.


ಮುಖ್ಯ ಅತಿಥಿಯಾಗಿ ಜೀವ ವಿಮಾ ಬೆಳ್ತಂಗಡಿ ಅಧಿಕಾರಿ ಉದಯಶಂಕರ ಅರಸಿನಮಕ್ಕಿ ಮಾತನಾಡಿ ಹನುಮನ ಶಕ್ತಿ ಎಲ್ಲಾ ಭಾರತೀಯ ಪ್ರಜೆಗೂ ಬರಲಿ. ಅವರ ಆದರ್ಶ ಮೈಗೂಡಿಸಿಕೊಂಡು ಬರುವಾ ಎಂದು ಶುಭಾಶಯ ತಿಳಿಸಿದರು.
ಈ ಸಂದರ್ಭದಲ್ಲಿ ಕಾಸರಗೋಡು ಹಿರಿಯ ಭಜನಾ ಪಟು ಹರಿದಾಸ ಜಯಾನಂದ ಕಾಸರಗೋಡು ‌ಮತ್ತು ಭಜನಾ ಸಾಧಕ ಬಾಲಕೃಷ್ಣ ಪಂಜ ಅವರನ್ನು ಮನೆಯ ಪರವಾಗಿ ಜಯರಾಮ ನೆಲ್ಲಿತ್ತಾಯ ಮತ್ತು ಶ್ರೀ ಮತಿ ರೇಖಾ ಜಯರಾಮ ನೆಲ್ಲಿತ್ತಾಯ ಅಭಿನಂದನೆ ‌ಮಾಡಿದರು.


ರಾಘವೇಂದ್ರ ಕಿಗ್ಗ ಉಪಸ್ಥಿತರಿದ್ದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧ ಭಜನಾ ಮಂಡಳಿಯ ಭಜಕರು ಭಾಗವಹಿಸಿ ಆಕರ್ಷಕ ಕುಣಿತ ಭಜನೆ ನೆರವೇರಿಸಿದರು.
ಬಿಳಿನೆಲೆ ಭಜನಾ‌ ಮಂಡಳಿಯ ಸುಂದರ ಮತ್ತು ತಂಡದವರಿಂದ ಮತ್ತು ಹರಿದಾಸ ಕಾಸರಗೋಡು ಜಯಾನಂದ ಅವರ ತಂಡ ಭಜನಾ ಕಾರ್ಯಕ್ರಮ ನಡೆಸಿದ್ದರು.


ಕಾರ್ಯಕ್ರಮದಲ್ಲಿ ಬೆಳ್ತಂಗಡಿ , ಪುತ್ತೂರು, ಕಾಸರಗೋಡು ವಿವಿಧ ಭಜನಾ ತಂಡದವರು ಭಾಗವಹಿಸಿದ್ದರು.
ಭಾಗವಹಿಸಿದ ಎಲ್ಲರಿಗೂ ಶಿವಕೀರ್ತಿ ನಿಲಯದ ಜಯರಾಮ ನೆಲ್ಲಿತ್ತಾಯ ದಂಪತಿಗಳು ಮನೆಯವರೂ ಎಲ್ಲರೂ ಅಭಿನಂದನೆ ತಿಳಿಸಿದ್ದರು.

Related posts

ಆ.25: ನಾಲ್ಕೂರು ಯುವಶಕ್ತಿ ಫ್ರೆಂಡ್ಸ್‌ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಮಕ್ಕಳಿಗೆ ತಾಲೂಕು ಮಟ್ಟದ ಮುದ್ದುಕೃಷ್ಣ ,ಬಾಲಕೃಷ್ಣ, ಕೃಷ್ಣ ವೇಷ ಸ್ಪರ್ಧೆ, ಹೆಸರು ನೊಂದಾಯಿಸಲು ಕೊ.ದಿ. ಆ. 20-2024, ಮಾಹಿತಿಗಾಗಿ 8971689755 ಸಂಪರ್ಕಿಸಿರಿ

Suddi Udaya

ಬೆಳ್ತಂಗಡಿ: ತೋಟಗಾರಿಕೆ ಇಲಾಖೆಯಲ್ಲಿ ಮೆಗಾ ಡ್ರೈವ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಅಂಡಿಂಜೆ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ: ಸಿರಿ ಧಾನ್ಯಗಳ ಬಳಕೆ ಹಾಗೂ ಆಷಾಢದಲ್ಲಿ ಒಂದು ದಿನ ಕಾರ್ಯಕ್ರಮ

Suddi Udaya

ಉಜಿರೆ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ವನಿತಾ ವಿ.ಶೆಟ್ಟಿ, ಕಾರ್ಯದರ್ಶಿಯಾಗಿ ಸುದೇಶ್ ಶೆಟ್ಟಿ ಆಯ್ಕೆ

Suddi Udaya

ರೆಖ್ಯದಲ್ಲಿ ಕಾಂಗ್ರೆಸ್ ಬೂತ್ ಮಟ್ಟದ ಸಭೆ

Suddi Udaya
error: Content is protected !!