July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನುಮಾನ್ ಜಯಂತಿ ಆಚರಣೆ



ಶಿಶಿಲ : ಹನುಮಂತ ಸ್ವಾಮಿ ಭಕ್ತಿಗೆ ಆದರ್ಶ. ಆತ ಅತೀ ಧೈರ್ಯವಂತ. ಯಾವುದೇ ಕಾರ್ಯ ಸಾಧಿಸಬೇಕಾದಲ್ಲಿ ಅದನ್ನು ಸಾಧಿಸುವಂತ ಪರಾಕ್ರಮಿ. ಶ್ರೀರಾಮನ ಸೇವಕ. ದುಷ್ಟ ಶಕ್ತಿಗಳನ್ನು ನಿಗ್ರಹಿಸಿದ ವೀರ ಪುರುಷ. ಆತನ ಆರಾಧನೆ ಪರಿಣಾಮ ನಮಗೂ ರಾಷ್ಟ್ರಕ್ಕೂ ಶಕ್ತಿ ತುಂಬಲಿ ಎಂದು ಶ್ರೀ ಅರಿಕೆಗುಡ್ದೆ ವನದುರ್ಗಾ ದೇವಾಲಯ ಅಧ್ಯಕ್ಷ ಪ್ರಕಾಶ‌ ಪಿಲಿಕಬೆ ತಿಳಿಸಿದ್ದರು.

ಅವರು ಶಿಶಿಲ ಶಿವಕೀರ್ತಿ ನಿಲಯದಲ್ಲಿ ನಡೆದ ಶ್ರೀ ಆಂಜನೇಯ ಜಯಂತಿ ಕಾರ್ಯಕಾರ್ಯಕ್ರಮ ಉದ್ಘಾಟನೆ ಮಾಡಿ ಶುಭ ಹಾರೈಸಿದರು.


ಮುಖ್ಯ ಅತಿಥಿಯಾಗಿ ಜೀವ ವಿಮಾ ಬೆಳ್ತಂಗಡಿ ಅಧಿಕಾರಿ ಉದಯಶಂಕರ ಅರಸಿನಮಕ್ಕಿ ಮಾತನಾಡಿ ಹನುಮನ ಶಕ್ತಿ ಎಲ್ಲಾ ಭಾರತೀಯ ಪ್ರಜೆಗೂ ಬರಲಿ. ಅವರ ಆದರ್ಶ ಮೈಗೂಡಿಸಿಕೊಂಡು ಬರುವಾ ಎಂದು ಶುಭಾಶಯ ತಿಳಿಸಿದರು.
ಈ ಸಂದರ್ಭದಲ್ಲಿ ಕಾಸರಗೋಡು ಹಿರಿಯ ಭಜನಾ ಪಟು ಹರಿದಾಸ ಜಯಾನಂದ ಕಾಸರಗೋಡು ‌ಮತ್ತು ಭಜನಾ ಸಾಧಕ ಬಾಲಕೃಷ್ಣ ಪಂಜ ಅವರನ್ನು ಮನೆಯ ಪರವಾಗಿ ಜಯರಾಮ ನೆಲ್ಲಿತ್ತಾಯ ಮತ್ತು ಶ್ರೀ ಮತಿ ರೇಖಾ ಜಯರಾಮ ನೆಲ್ಲಿತ್ತಾಯ ಅಭಿನಂದನೆ ‌ಮಾಡಿದರು.


ರಾಘವೇಂದ್ರ ಕಿಗ್ಗ ಉಪಸ್ಥಿತರಿದ್ದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧ ಭಜನಾ ಮಂಡಳಿಯ ಭಜಕರು ಭಾಗವಹಿಸಿ ಆಕರ್ಷಕ ಕುಣಿತ ಭಜನೆ ನೆರವೇರಿಸಿದರು.
ಬಿಳಿನೆಲೆ ಭಜನಾ‌ ಮಂಡಳಿಯ ಸುಂದರ ಮತ್ತು ತಂಡದವರಿಂದ ಮತ್ತು ಹರಿದಾಸ ಕಾಸರಗೋಡು ಜಯಾನಂದ ಅವರ ತಂಡ ಭಜನಾ ಕಾರ್ಯಕ್ರಮ ನಡೆಸಿದ್ದರು.


ಕಾರ್ಯಕ್ರಮದಲ್ಲಿ ಬೆಳ್ತಂಗಡಿ , ಪುತ್ತೂರು, ಕಾಸರಗೋಡು ವಿವಿಧ ಭಜನಾ ತಂಡದವರು ಭಾಗವಹಿಸಿದ್ದರು.
ಭಾಗವಹಿಸಿದ ಎಲ್ಲರಿಗೂ ಶಿವಕೀರ್ತಿ ನಿಲಯದ ಜಯರಾಮ ನೆಲ್ಲಿತ್ತಾಯ ದಂಪತಿಗಳು ಮನೆಯವರೂ ಎಲ್ಲರೂ ಅಭಿನಂದನೆ ತಿಳಿಸಿದ್ದರು.

Related posts

ಆ.1: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5000 ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya

ಪಡಂಗಡಿ ಕಾರ್ಯನ ಮುಟ್ಟಿಯವರಿಗೆ ಸಂತೋಷ್ ಕುಮಾರ್ ಜೈನ್ ರವರ ನೇತೃತ್ವದಲ್ಲಿ ದಿನಸಿ ಸಾಮಾಗ್ರಿ ವಿತರಣೆ

Suddi Udaya

ದಿಡುಪೆ -ಎಳನೀರು ರಸ್ತೆ ಅಭಿವೃದ್ಧಿ ಬೆಳ್ತಂಗಡಿ- ಮೂಡಿಗೆರೆ ಶಾಸಕರುಗಳಿಂದ ಪರಿಶೀಲನೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ವನ್ಯಜೀವಿ ವಿಭಾಗದ ಅಧಿಕಾರಿಗಳ ಉಪಸ್ಥಿತಿ

Suddi Udaya

ಶ್ರೀರಾಮ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ವಂಚನೆ ಪ್ರಕರಣ:ಸೊಸೈಟಿಯಲ್ಲಿ ಎರಡು ದಿನದ ಸಿಐಡಿ ಶೋಧ ಅಂತ್ಯ

Suddi Udaya

ಚಿನ್ನ ಪಾಲಿಶ್ ಮಾಡುವ ನೆಪದಲ್ಲಿ ವಂಚನೆ ಪ್ರಕರಣ: ಬಿಹಾರದ ಆರೋಪಿಯನ್ನು ಹೆಡೆಮುರಿ ಕಟ್ಟಿದ ವೇಣೂರು ಪೊಲೀಸರು

Suddi Udaya
error: Content is protected !!