23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನುಮಾನ್ ಜಯಂತಿ ಆಚರಣೆ



ಶಿಶಿಲ : ಹನುಮಂತ ಸ್ವಾಮಿ ಭಕ್ತಿಗೆ ಆದರ್ಶ. ಆತ ಅತೀ ಧೈರ್ಯವಂತ. ಯಾವುದೇ ಕಾರ್ಯ ಸಾಧಿಸಬೇಕಾದಲ್ಲಿ ಅದನ್ನು ಸಾಧಿಸುವಂತ ಪರಾಕ್ರಮಿ. ಶ್ರೀರಾಮನ ಸೇವಕ. ದುಷ್ಟ ಶಕ್ತಿಗಳನ್ನು ನಿಗ್ರಹಿಸಿದ ವೀರ ಪುರುಷ. ಆತನ ಆರಾಧನೆ ಪರಿಣಾಮ ನಮಗೂ ರಾಷ್ಟ್ರಕ್ಕೂ ಶಕ್ತಿ ತುಂಬಲಿ ಎಂದು ಶ್ರೀ ಅರಿಕೆಗುಡ್ದೆ ವನದುರ್ಗಾ ದೇವಾಲಯ ಅಧ್ಯಕ್ಷ ಪ್ರಕಾಶ‌ ಪಿಲಿಕಬೆ ತಿಳಿಸಿದ್ದರು.

ಅವರು ಶಿಶಿಲ ಶಿವಕೀರ್ತಿ ನಿಲಯದಲ್ಲಿ ನಡೆದ ಶ್ರೀ ಆಂಜನೇಯ ಜಯಂತಿ ಕಾರ್ಯಕಾರ್ಯಕ್ರಮ ಉದ್ಘಾಟನೆ ಮಾಡಿ ಶುಭ ಹಾರೈಸಿದರು.


ಮುಖ್ಯ ಅತಿಥಿಯಾಗಿ ಜೀವ ವಿಮಾ ಬೆಳ್ತಂಗಡಿ ಅಧಿಕಾರಿ ಉದಯಶಂಕರ ಅರಸಿನಮಕ್ಕಿ ಮಾತನಾಡಿ ಹನುಮನ ಶಕ್ತಿ ಎಲ್ಲಾ ಭಾರತೀಯ ಪ್ರಜೆಗೂ ಬರಲಿ. ಅವರ ಆದರ್ಶ ಮೈಗೂಡಿಸಿಕೊಂಡು ಬರುವಾ ಎಂದು ಶುಭಾಶಯ ತಿಳಿಸಿದರು.
ಈ ಸಂದರ್ಭದಲ್ಲಿ ಕಾಸರಗೋಡು ಹಿರಿಯ ಭಜನಾ ಪಟು ಹರಿದಾಸ ಜಯಾನಂದ ಕಾಸರಗೋಡು ‌ಮತ್ತು ಭಜನಾ ಸಾಧಕ ಬಾಲಕೃಷ್ಣ ಪಂಜ ಅವರನ್ನು ಮನೆಯ ಪರವಾಗಿ ಜಯರಾಮ ನೆಲ್ಲಿತ್ತಾಯ ಮತ್ತು ಶ್ರೀ ಮತಿ ರೇಖಾ ಜಯರಾಮ ನೆಲ್ಲಿತ್ತಾಯ ಅಭಿನಂದನೆ ‌ಮಾಡಿದರು.


ರಾಘವೇಂದ್ರ ಕಿಗ್ಗ ಉಪಸ್ಥಿತರಿದ್ದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧ ಭಜನಾ ಮಂಡಳಿಯ ಭಜಕರು ಭಾಗವಹಿಸಿ ಆಕರ್ಷಕ ಕುಣಿತ ಭಜನೆ ನೆರವೇರಿಸಿದರು.
ಬಿಳಿನೆಲೆ ಭಜನಾ‌ ಮಂಡಳಿಯ ಸುಂದರ ಮತ್ತು ತಂಡದವರಿಂದ ಮತ್ತು ಹರಿದಾಸ ಕಾಸರಗೋಡು ಜಯಾನಂದ ಅವರ ತಂಡ ಭಜನಾ ಕಾರ್ಯಕ್ರಮ ನಡೆಸಿದ್ದರು.


ಕಾರ್ಯಕ್ರಮದಲ್ಲಿ ಬೆಳ್ತಂಗಡಿ , ಪುತ್ತೂರು, ಕಾಸರಗೋಡು ವಿವಿಧ ಭಜನಾ ತಂಡದವರು ಭಾಗವಹಿಸಿದ್ದರು.
ಭಾಗವಹಿಸಿದ ಎಲ್ಲರಿಗೂ ಶಿವಕೀರ್ತಿ ನಿಲಯದ ಜಯರಾಮ ನೆಲ್ಲಿತ್ತಾಯ ದಂಪತಿಗಳು ಮನೆಯವರೂ ಎಲ್ಲರೂ ಅಭಿನಂದನೆ ತಿಳಿಸಿದ್ದರು.

Related posts

ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರಾದ ಎಲ್ಲರಿಗೂ ಅಭಿನಂದನೆಗಳು – ಹರೀಶ್ ಪೂಂಜ

Suddi Udaya

ಗೇರುಕಟ್ಟೆ ಮೋಕ್ಷಧಾಮ ಹಿಂದೂ ರುದ್ರಭೂಮಿ ಲೋಕಾರ್ಪಣೆ

Suddi Udaya

ಅನೀಶ್ ಪೂಜಾರಿ ವೇಣೂರು ನಿರ್ದೇಶನದಲ್ಲಿ ಮೂಡಿ ಬರಲಿದೆ ಹೊಸ ಚಲನಚಿತ್ರ “ಪೈಕಾ”

Suddi Udaya

ವಲಯ ಮಟ್ಟದ ಪ್ರೌಢ ಶಾಲೆಗಳ ಪ್ರತಿಭಾ ಕಾರಂಜಿ: ವಾಣಿ ಆಂ.ಮಾ.ಪ್ರೌ. ಶಾಲೆಗೆ ರನ್ನರ್‍ಸ್ ಚಾಂಪಿಯನ್ ಮತ್ತು ಹಲವು ಪ್ರಶಸ್ತಿಗಳು

Suddi Udaya

ಮಾಲಾಡಿಯಲ್ಲಿ ಹಿಂದೂ ರುದ್ರಭೂಮಿ ಲೋಕಾರ್ಪಣೆ

Suddi Udaya

ಬುರುಡೆ ಚಿನ್ನಯ್ಯ ಮತ್ತೆ ಇಂದು ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya
error: Content is protected !!