23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನುಮಾನ್ ಜಯಂತಿ ಆಚರಣೆ



ಶಿಶಿಲ : ಹನುಮಂತ ಸ್ವಾಮಿ ಭಕ್ತಿಗೆ ಆದರ್ಶ. ಆತ ಅತೀ ಧೈರ್ಯವಂತ. ಯಾವುದೇ ಕಾರ್ಯ ಸಾಧಿಸಬೇಕಾದಲ್ಲಿ ಅದನ್ನು ಸಾಧಿಸುವಂತ ಪರಾಕ್ರಮಿ. ಶ್ರೀರಾಮನ ಸೇವಕ. ದುಷ್ಟ ಶಕ್ತಿಗಳನ್ನು ನಿಗ್ರಹಿಸಿದ ವೀರ ಪುರುಷ. ಆತನ ಆರಾಧನೆ ಪರಿಣಾಮ ನಮಗೂ ರಾಷ್ಟ್ರಕ್ಕೂ ಶಕ್ತಿ ತುಂಬಲಿ ಎಂದು ಶ್ರೀ ಅರಿಕೆಗುಡ್ದೆ ವನದುರ್ಗಾ ದೇವಾಲಯ ಅಧ್ಯಕ್ಷ ಪ್ರಕಾಶ‌ ಪಿಲಿಕಬೆ ತಿಳಿಸಿದ್ದರು.

ಅವರು ಶಿಶಿಲ ಶಿವಕೀರ್ತಿ ನಿಲಯದಲ್ಲಿ ನಡೆದ ಶ್ರೀ ಆಂಜನೇಯ ಜಯಂತಿ ಕಾರ್ಯಕಾರ್ಯಕ್ರಮ ಉದ್ಘಾಟನೆ ಮಾಡಿ ಶುಭ ಹಾರೈಸಿದರು.


ಮುಖ್ಯ ಅತಿಥಿಯಾಗಿ ಜೀವ ವಿಮಾ ಬೆಳ್ತಂಗಡಿ ಅಧಿಕಾರಿ ಉದಯಶಂಕರ ಅರಸಿನಮಕ್ಕಿ ಮಾತನಾಡಿ ಹನುಮನ ಶಕ್ತಿ ಎಲ್ಲಾ ಭಾರತೀಯ ಪ್ರಜೆಗೂ ಬರಲಿ. ಅವರ ಆದರ್ಶ ಮೈಗೂಡಿಸಿಕೊಂಡು ಬರುವಾ ಎಂದು ಶುಭಾಶಯ ತಿಳಿಸಿದರು.
ಈ ಸಂದರ್ಭದಲ್ಲಿ ಕಾಸರಗೋಡು ಹಿರಿಯ ಭಜನಾ ಪಟು ಹರಿದಾಸ ಜಯಾನಂದ ಕಾಸರಗೋಡು ‌ಮತ್ತು ಭಜನಾ ಸಾಧಕ ಬಾಲಕೃಷ್ಣ ಪಂಜ ಅವರನ್ನು ಮನೆಯ ಪರವಾಗಿ ಜಯರಾಮ ನೆಲ್ಲಿತ್ತಾಯ ಮತ್ತು ಶ್ರೀ ಮತಿ ರೇಖಾ ಜಯರಾಮ ನೆಲ್ಲಿತ್ತಾಯ ಅಭಿನಂದನೆ ‌ಮಾಡಿದರು.


ರಾಘವೇಂದ್ರ ಕಿಗ್ಗ ಉಪಸ್ಥಿತರಿದ್ದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧ ಭಜನಾ ಮಂಡಳಿಯ ಭಜಕರು ಭಾಗವಹಿಸಿ ಆಕರ್ಷಕ ಕುಣಿತ ಭಜನೆ ನೆರವೇರಿಸಿದರು.
ಬಿಳಿನೆಲೆ ಭಜನಾ‌ ಮಂಡಳಿಯ ಸುಂದರ ಮತ್ತು ತಂಡದವರಿಂದ ಮತ್ತು ಹರಿದಾಸ ಕಾಸರಗೋಡು ಜಯಾನಂದ ಅವರ ತಂಡ ಭಜನಾ ಕಾರ್ಯಕ್ರಮ ನಡೆಸಿದ್ದರು.


ಕಾರ್ಯಕ್ರಮದಲ್ಲಿ ಬೆಳ್ತಂಗಡಿ , ಪುತ್ತೂರು, ಕಾಸರಗೋಡು ವಿವಿಧ ಭಜನಾ ತಂಡದವರು ಭಾಗವಹಿಸಿದ್ದರು.
ಭಾಗವಹಿಸಿದ ಎಲ್ಲರಿಗೂ ಶಿವಕೀರ್ತಿ ನಿಲಯದ ಜಯರಾಮ ನೆಲ್ಲಿತ್ತಾಯ ದಂಪತಿಗಳು ಮನೆಯವರೂ ಎಲ್ಲರೂ ಅಭಿನಂದನೆ ತಿಳಿಸಿದ್ದರು.

Related posts

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯರ್ಥಿಗಳಿಗೆ 12ರಲ್ಲಿ 12 ಭರ್ಜರಿ ಜಯ

Suddi Udaya

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಜ್ಞಾಪನಾ ಶಕ್ತಿ ಪರೀಕ್ಷೆ ಸ್ಪರ್ಧೆ

Suddi Udaya

ಕಳೆಂಜ : ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಕಾಯರ್ತಡ್ಕ ಕುಲಾಡಿ ಸಂಪರ್ಕ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿ ಪೂರ್ಣ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿನಲ್ಲಿ ವನಮಹೋತ್ಸವ ಕಾರ್ಯಕ್ರಮ

Suddi Udaya

ಕುಕ್ಕಾವು ಕೊಪ್ಪಂದಗುಂಡಿಯಲ್ಲಿ ರಸ್ತೆಗೆ ಬಿದ್ದ ಮರ: ದ್ವಿಚಕ್ರ ಸವಾರರಿಗೆ ಗಾಯ

Suddi Udaya

ಕರಾಯ ಮೂರ್ತೆದಾರ ಸೇವಾ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ

Suddi Udaya
error: Content is protected !!