22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ

ಕೊಕ್ಕಡ: ಶ್ರೀ ಕೃಷ್ಣ ಭಜನಾ ಮಂದಿರ ಸೇವಾ ಟ್ರಸ್ಟ್ ಉಪ್ಪಾರಪಳಿಕೆ, ಶ್ರದ್ಧಾ ಗೆಳೆಯರ ಬಳಗ ಉಪ್ಪಾರಪಳಿಕೆ ಹಾಗೂ ಶ್ರೀ ಕೃಷ್ಣ ಭಜನಾ ಮಂದಿರ ಪ್ರಾರಂಭೋತ್ಸವ ಸಮಿತಿಯ ಜಂಟಿ ಆಶ್ರಯದಲ್ಲಿ ಉಪ್ಪಾರಪಳಿಕೆಯಲ್ಲಿ ನವೀಕೃತ ಶ್ರೀ ಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ ಕಾರ್ಯಕ್ರಮವು ಎ. 30ರಂದು ನಡೆಯಿತು.


ಬೆಳಿಗ್ಗೆ ಗಣಹೋಮ, ನವೀಕೃತ ಭಜನಾ ಮಂದಿರದ ಪ್ರಾರಂಭೋತ್ಸವ, ಬಳಿಕ ಸಾಮೂಹಿಕ ಹನುಮಾನ್ ಚಾಲಿಸ್ ಪಠಣ, ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು.

ಶ್ರೀ ಕೃಷ್ಣ ಭಜನಾ ಮಂದಿರದ ಲೋಕಾರ್ಪಣೆ ಪ್ರಯುಕ್ತ ಪ್ರಕೃತಿ ಲೀಫ್ ಕಪ್ ಇಂಡಸ್ಟ್ರೀಸ್ ಉಪ್ಪಾರಪಳಿಕೆ ಇವರಿಂದ ಅಡಿಕೆ ಹಾಳೆತಟ್ಟೆಯಿಂದಲೇ ನಿರ್ಮಿಸಿದ ದ್ವಾರ

ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಭಜನಾ ಮಂದಿರ ಸೇವಾ ಟ್ರಸ್ಟ್ ಗೌರವಾಧ್ಯಕ್ಷ ಯೋಗೀಶ್ ಆಲಂಬಿಲ, ಶ್ರೀ ಕೃಷ್ಣ ಭಜನಾ ಮಂದಿರ ಪ್ರಾರಂಭೋತ್ಸವ ಸಮಿತಿಯ ಅಧ್ಯಕ್ಷ ಬಾಲಕೃಷ್ಣ ಬಳಕ್ಕ, ಕಾರ್ಯದರ್ಶಿ ಶಿವಾನಂದ ಸಂಕೇಶ, ಶ್ರದ್ಧಾ ಗೆಳೆಯರ ಬಳಗದ ಅಧ್ಯಕ್ಷ ಶ್ರೀಧರ್ ದೇರಾಜೆ, ಶ್ರೀ ಕೃಷ್ಣ ಭಜನಾ ಮಂದಿರ ಸೇವಾ ಟ್ರಸ್ಟ್ ಕಾರ್ಯದರ್ಶಿ ಶ್ರೀಧರ್ ಬಳಕ್ಕ ಹಾಗೂ ಸಮಿತಿಗಳ ಸಂಚಾಲಕರು, ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.


ಸಂಜೆ ಗಂಟೆ 4 ರಿಂದ ಆಹ್ವಾನಿತ ಭಜನಾ ತಂಡಗಳಿAದ ಕುಣಿತ ಭಜನೋತ್ಸವ, 7 ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ, ರಾತ್ರಿ ಅನ್ನಸಂತರ್ಪಣೆ ನಡೆಯಲಿದೆ.
ರಾತ್ರಿ ಗಂಟೆ 9.30 ರಿಂದ ಚಿದಾನಂದ ಅದ್ಯಪಾಡಿ ನಿರ್ದೇಶನದ ವಿಧಾತ್ರೀ ಕಲಾವಿದೆರ್ ಕೈಕಂಬ ಕುಡ್ಲ (ರಿ) ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಇವರ ಸಲಹೆ ಸಹಕಾರದೊಂದಿಗೆ ವಿಭಿನ್ನ ಶೈಲಿಯಲ್ಲಿ ‘ದೈವರಾಜೆ ಶ್ರೀ ಬಬ್ಬು ಸ್ವಾಮಿ’ ಭಕ್ತಿಪ್ರದಾನ ತುಳು ನಾಟಕ ನಡೆಯಲಿದೆ.

Related posts

ಕೊಕ್ಕಡ ಶ್ರೀ ಕ್ಷೇ. ಧ.ಗ್ರಾ. ಯೋಜನೆಯ ಉಪ್ಪಾರಪಳಿಕೆ ಕಾರ್ಯಕ್ಷೇತ್ರದಲ್ಲಿ ವಿಶ್ವಜ್ಯೋತಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಬೆಳ್ತಂಗಡಿ ಶೋರೂಂ ನಲ್ಲಿ ಚಿನ್ನದ ಮತ್ತು ಬೆಳ್ಳಿಯ ನಾಣ್ಯ ಗೆದ್ದ ಅದೃಷ್ಟವಂತರು

Suddi Udaya

ಸ್ತುತಿರವರ ಹುಟ್ಟುಹಬ್ಬದ ಪ್ರಯುಕ್ತ ಉರುಂಬಿದೊಟ್ಟು ಅಂಗನವಾಡಿಯ ಸುತ್ತ ಗಿಡಗಂಟಿಗಳ ಸ್ವಚ್ಛತೆ ಹಾಗೂ ತೆಂಗಿನ ಗಿಡ ನೆಡುವ ಮೂಲಕ ಆಚರಣೆ

Suddi Udaya

ಕೊಕ್ರಾಡಿಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾರಂಭೋತ್ಸವ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಸಮಾರೋಪ ಸಮಾರಂಭ

Suddi Udaya
error: Content is protected !!