23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ

ಕೊಕ್ಕಡ: ಶ್ರೀ ಕೃಷ್ಣ ಭಜನಾ ಮಂದಿರ ಸೇವಾ ಟ್ರಸ್ಟ್ ಉಪ್ಪಾರಪಳಿಕೆ, ಶ್ರದ್ಧಾ ಗೆಳೆಯರ ಬಳಗ ಉಪ್ಪಾರಪಳಿಕೆ ಹಾಗೂ ಶ್ರೀ ಕೃಷ್ಣ ಭಜನಾ ಮಂದಿರ ಪ್ರಾರಂಭೋತ್ಸವ ಸಮಿತಿಯ ಜಂಟಿ ಆಶ್ರಯದಲ್ಲಿ ಉಪ್ಪಾರಪಳಿಕೆಯಲ್ಲಿ ನವೀಕೃತ ಶ್ರೀ ಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ ಕಾರ್ಯಕ್ರಮವು ಎ. 30ರಂದು ನಡೆಯಿತು.


ಬೆಳಿಗ್ಗೆ ಗಣಹೋಮ, ನವೀಕೃತ ಭಜನಾ ಮಂದಿರದ ಪ್ರಾರಂಭೋತ್ಸವ, ಬಳಿಕ ಸಾಮೂಹಿಕ ಹನುಮಾನ್ ಚಾಲಿಸ್ ಪಠಣ, ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು.

ಶ್ರೀ ಕೃಷ್ಣ ಭಜನಾ ಮಂದಿರದ ಲೋಕಾರ್ಪಣೆ ಪ್ರಯುಕ್ತ ಪ್ರಕೃತಿ ಲೀಫ್ ಕಪ್ ಇಂಡಸ್ಟ್ರೀಸ್ ಉಪ್ಪಾರಪಳಿಕೆ ಇವರಿಂದ ಅಡಿಕೆ ಹಾಳೆತಟ್ಟೆಯಿಂದಲೇ ನಿರ್ಮಿಸಿದ ದ್ವಾರ

ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಭಜನಾ ಮಂದಿರ ಸೇವಾ ಟ್ರಸ್ಟ್ ಗೌರವಾಧ್ಯಕ್ಷ ಯೋಗೀಶ್ ಆಲಂಬಿಲ, ಶ್ರೀ ಕೃಷ್ಣ ಭಜನಾ ಮಂದಿರ ಪ್ರಾರಂಭೋತ್ಸವ ಸಮಿತಿಯ ಅಧ್ಯಕ್ಷ ಬಾಲಕೃಷ್ಣ ಬಳಕ್ಕ, ಕಾರ್ಯದರ್ಶಿ ಶಿವಾನಂದ ಸಂಕೇಶ, ಶ್ರದ್ಧಾ ಗೆಳೆಯರ ಬಳಗದ ಅಧ್ಯಕ್ಷ ಶ್ರೀಧರ್ ದೇರಾಜೆ, ಶ್ರೀ ಕೃಷ್ಣ ಭಜನಾ ಮಂದಿರ ಸೇವಾ ಟ್ರಸ್ಟ್ ಕಾರ್ಯದರ್ಶಿ ಶ್ರೀಧರ್ ಬಳಕ್ಕ ಹಾಗೂ ಸಮಿತಿಗಳ ಸಂಚಾಲಕರು, ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.


ಸಂಜೆ ಗಂಟೆ 4 ರಿಂದ ಆಹ್ವಾನಿತ ಭಜನಾ ತಂಡಗಳಿAದ ಕುಣಿತ ಭಜನೋತ್ಸವ, 7 ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ, ರಾತ್ರಿ ಅನ್ನಸಂತರ್ಪಣೆ ನಡೆಯಲಿದೆ.
ರಾತ್ರಿ ಗಂಟೆ 9.30 ರಿಂದ ಚಿದಾನಂದ ಅದ್ಯಪಾಡಿ ನಿರ್ದೇಶನದ ವಿಧಾತ್ರೀ ಕಲಾವಿದೆರ್ ಕೈಕಂಬ ಕುಡ್ಲ (ರಿ) ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಇವರ ಸಲಹೆ ಸಹಕಾರದೊಂದಿಗೆ ವಿಭಿನ್ನ ಶೈಲಿಯಲ್ಲಿ ‘ದೈವರಾಜೆ ಶ್ರೀ ಬಬ್ಬು ಸ್ವಾಮಿ’ ಭಕ್ತಿಪ್ರದಾನ ತುಳು ನಾಟಕ ನಡೆಯಲಿದೆ.

Related posts

ಮುಂಡಾಜೆ :ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಯಕ್ಷಗಾನ ಸಂಘಗಳಿಂದ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗಳಿಗೆ ಗೌರವಾರ್ಪಣೆ

Suddi Udaya

ಕರಾಟೆ ಚಾಂಪಿಯನ್ಶಿಪ್: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ಶಹೀರ್ ಅನಸ್ ಕುಮಿಟೆ ಯಲ್ಲಿ ಚಿನ್ನ ಹಾಗೂ ಕಟಾದಲ್ಲಿ ಬೆಳ್ಳಿ ಪದಕ

Suddi Udaya

ಮಾಜಿ ಪ್ರಧಾನಿ ಡಾ. ಮನ್ ಮೋಹನ್ ಸಿಂಗ್ ವಿಧಿವಶ

Suddi Udaya

ಮುಂಡಾಜೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅ.ಪ್ರೌ. ಶಾಲೆ ಮತ್ತು ಪ. ಪೂ. ಕಾಲೇಜಿನಲ್ಲಿ ಹಣ್ಣಿನ ಗಿಡಗಳ ನಾಟಿ

Suddi Udaya

ಗುರುವಾಯನಕೆರೆ ಸ. ಹಿ. ಪ್ರಾ. ಶಾಲೆಗೆ ಪುತ್ತೂರು ಸಹಾಯಕ ಆಯುಕ್ತ ಶ್ರವಣ್ ಕುಮಾರ್ ಭೇಟಿ

Suddi Udaya
error: Content is protected !!