25 C
ಪುತ್ತೂರು, ಬೆಳ್ತಂಗಡಿ
May 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆಯಲ್ಲಿ “ಆರ್ವಿಕ್” ಜ್ಯುವೆಲ್ಲರ್ಸ್ & ವರ್ಕ್ಸ್ ಶುಭಾರಂಭ

ಗುರುವಾಯನಕೆರೆ: ಇಲ್ಲಿಯ ನಿಸರ್ಗ ಆರ್ಕೇಡ್ ಕಾಂಪ್ಲೆಕ್ಸ್ನಲ್ಲಿ ಪ್ರಭಾಕರ್ ಆಚಾರ್ಯರವರ ಮಾಲಕತ್ವದ “ಆರ್ವಿಕ್” ಜ್ಯುವೆಲ್ಲರ್ಸ್ & ವರ್ಕ್ಸ್ ನೂತನ ಮಳಿಗೆ ಮೇ 1ರಂದು ಶುಭಾರಂಭಗೊಂಡಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳಾಲು ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ರವರು ಉದ್ಘಾಟಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಹೆಜಮಾಡಿ ದುರ್ಗಶ್ರೀ ಜುವೆಲ್ಲರ್‍ಸ್ ನ ಮಾಲಕ ಸುಂದರ ಬಿ., ಉಜಿರೆ ಶ್ರೀ ಶಾರದ ಮತ್ತು ಶಾಂತರಾಮ ಜುವೆಲ್ಲರ್‍ಸ್ ಮಾಲಕ ಆನಂದ ಆಚಾರ್ಯ , ಗುರುವಾಯನಕೆರೆ ನಿಸರ್ಗ ಕರ್ಟನ್ & ವಾಲ್ ಪೇಪರ್ ಮಾಲಕ ನಾಗೇಶ್ ಕೋಟ್ಯಾನ್ ಬರಾಯ ಉಪಸ್ಥಿತರಿದ್ದು, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಸಹೋದರರಾದ ಉಜಿರೆ ಶುಭ ಜುವೆಲ್ಲರ್‍ಸ್ ನ ಮಾಲಕ ಸುಧಾಕರ ಆಚಾರ್ಯ, ದಿವಾಕರ ಆಚಾರ್ಯ, ತಾಯಿ ಲಲಿತಾ ಈಶ್ವರಪ್ಪ ಆಚಾರ್ಯ ಹಾಗೂ ಬಂಧು ಮಿತ್ರರು ಉಪಸ್ಥಿತರಿದ್ದರು. ಬಂದಂತಹ ಅತಿಥಿ ಗಣ್ಯರನ್ನು ಮಾಲಕ ಪ್ರಭಾಕರ ಆಚಾರ್ಯ ಹಾಗೂ ಶ್ರೀಮತಿ ಉಮಾ ಪ್ರಭಾಕರ ಆಚಾರ್ಯ ಸ್ವಾಗತಿಸಿ ಸತ್ಕರಿಸಿದರು.


916 ಹಾಲ್‌ಮಾರ್ಕ್ ಚಿನ್ನ-ಬೆಳ್ಳಿ ಆಭರಣ ತಯಾರಕರು ಮತ್ತು ಮಾರಾಟಗಾರರು ಆಭರಣಗಳ ಒಪ್ಪ, ಗಿಫ್ಟ್ ಐಟಂಗಳು, ದೈವ ದೇವರುಗಳ ಮೂರ್ತಿಗಳು, ಹರಕೆಯ ಸಾಧನಗಳು ಹಾಗೂ ಇತರ ಎಲ್ಲಾ ರೀತಿಯ ಚಿನ್ನ-ಬೆಳ್ಳಿಯ ಆಭರಣಗಳು ಮಳಿಗೆಯಲ್ಲಿ ಲಭ್ಯವಿರುತ್ತದೆ ಎಂದು ಮಾಲಕ ಪ್ರಭಾಕರ ಆಚಾರ್ಯ ತಿಳಿಸಿರುತ್ತಾರೆ.

Related posts

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಕಾಂಗ್ರೆಸ್‌ ಮುಖಂಡರು

Suddi Udaya

ಸಿಯೋನ್ ಆಶ್ರಮದಲ್ಲಿ ಉಚಿತ ಶ್ರವಣದೋಷ ತಪಾಸಣಾ ಶಿಬಿರ

Suddi Udaya

ಮೂಡುಕೋಡಿ: ಕೊಪ್ಪದಬಾಕಿಮಾರು ಶ್ರೀ ಸತ್ಯ ಸಾರಮಾನಿ ದೈವಸ್ಥಾನ ಟ್ರಸ್ಟ್ ವತಿಯಿಂದ ದೇಲoಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಮೃತ್ಯುoಜಯ ಹೋಮ

Suddi Udaya

ಹಣ ದ್ವಿಗುಣ ಮಾಡುವುದಾಗಿ ಮೋಸ ಮಾಡಿದ ಪ್ರಕರಣ: ನೊಂದ ಮಹಿಳೆ ವೀಟಾ ಮರೀನಾ ಡಿಸೋಜ ನದಿಗೆ ಹಾರಿ ಆತ್ಮಹತ್ಯೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ವಿದ್ಯಾರ್ಥಿಗಳ ಖೋ ಖೋ ಪಂದ್ಯಾಟ ಉದ್ಘಾಟನೆ

Suddi Udaya

ನಡ ಗ್ರಾ.ಪಂ. ವ್ಯಾಪ್ತಿಯಲ್ಲಿ ಉಚಿತ ರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya
error: Content is protected !!