July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು

ನಾರಾವಿ : ಇಲ್ಲಿಯ ಮಂಜುನಗರ ಮಿತ್ತೊಟ್ಟು ಎಂಬಲ್ಲಿ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಎ.30ರಂದು ನಡೆದಿದೆ.

ಘಟನೆ ವಿವರ: ನಾರಾವಿ ಗ್ರಾಮದ ಮಂಜುನಗರ ಮಿತ್ತೊಟ್ಟು ತಿರುವು ಎಂಬಲ್ಲಿ ಗುರುವಾಯನಕೆರೆ-ಕಾರ್ಕಳ ಸಾರ್ವಜನಿಕ ರಸ್ತೆಯಲ್ಲಿ ಕಾರು ಚಾಲಕ ಗಣೇಶ್‌ ಎಂಬಾತನು ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ ಕಾರು ಚಾಲನಾ ಹತೋಟಿ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಕಾರು ಜಖಂಗೊಂಡು ತಿರುಗಿ ನಿಂತಿದ್ದು, ಕಾರಿನಲ್ಲಿದ್ದ ಜೀವನ್ ಕೆ ಬಲ ಭುಜಕ್ಕೆ ಗುದ್ದಿದ ಗಾಯ ಹಾಗೂ ಶಶಾಂಕ ರವರಿಗೆ ಎದೆಗೆ ಗುದ್ದಿದ ಗಾಯವಾಗಿ, ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಆಗಷ್ಟ್ 28 : ಸೌಜನ್ಯ ಪ್ರಕರಣದ ತನಿಖೆಗೆ ಒತ್ತಾಯಿಸಿ ಚಲೋ ಬೆಳ್ತಂಗಡಿ ಮಹಾಧರಣಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಇ ಹುಂಡಿ ಉದ್ಘಾಟನೆ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಬೃಹತ್ ಪ್ರತಿಭಟನೆಗೆ ಬೆಳ್ತಂಗಡಿ ರೈತ ಮೋರ್ಚಾ ಬೆಂಬಲ

Suddi Udaya

ಬೆಳ್ತಂಗಡಿ ಜೂನಿಯರ್ ಕಾಲೇಜಿನಲ್ಲಿ ಸಿಇಟಿ ತರಬೇತಿ ಮತ್ತು ಸ್ಪೋಕನ್ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ

Suddi Udaya

ಉಜಿರೆ: ಶಾಲಾ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!