23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೈತರ ಕೃಷಿ ಪಂಪು ಸೆಟ್ ಸ್ಥಾವರಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಶಾಸಕ ಹರೀಶ್ ಪೂಂಜರಿಗೆ ಮನವಿ

ಬೆಳ್ತಂಗಡಿ: ಕರ್ನಾಟಕ ಸರಕಾರದ ವ್ಯಾಪ್ತಿಯಲ್ಲಿ ಮೆಸ್ಕಾಂ ಇಲಾಖೆಯು ರೈತರ ಕೃಷಿ ಪಂಪು ಸೆಟ್ ಸ್ಥಾವರಗಳಿಗೆ ಹೆಚ್ಚುವರಿ 15000/- ಠೇವಣಿ ವಿಧಿಸುವ ಯೋಜನೆ ಹಾಕಿಕೊಂಡಿದ್ದು, ಈಗಾಗಲೇ ಅಂದಾಜು ಪಟ್ಟಿ ತಯಾರಿಸಿ ಕಾರ್ಯದೇಶವಾದ ಯಾವುದೇ ಪಂಪು ಸೆಟ್ಟುಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುತ್ತಿಲ್ಲ. ಆದ್ದರಿಂದ ಬೆಳ್ತಂಗಡಿ ತಾಲೂಕಿನ ಕೃಷಿಕ ಬಂಧುಗಳು ಶಾಸಕ ಹರೀಶ್ ಪೂಂಜಾ ಅವರನ್ನು ಭೇಟಿಯಾಗಿ , ತಮ್ಮ ಮನವಿಯನ್ನು ಅರ್ಪಿಸಿದರು.

ಕೃಷಿಕರು ಈಗಾಗಲೇ ಬ್ಯಾಂಕುಗಳಿಂದ ಸಾಲ ಮಾಡಿ ಅಡಿಕೆ ಹಾಗೂ ತೆಂಗು ಇನ್ನಿತರ ಕೃಷಿ ಅಭಿವೃದ್ಧಿ ಮಾಡಿದ್ದು, ಕೃಷಿ ಪಂಪು ಸೆಟ್ಟುಗಳಿಗೆ ವಿದ್ಯುತ್ ಸಂಪರ್ಕ ಸಿಗದೇ ಬಸವಳಿದಿದ್ದಾರೆ. ಈ ಮೊದಲು ಇಲಾಖೆ ನೀಡಿದ ಇಂಟಿಮೇಶನ್ ಪ್ರಕಾರ ಠೇವಣಿ ಪಾವತಿಸಿದ್ದು, ಇದೀಗ ಹೆಚ್ಚುವರಿ 15 ಸಾವಿರ ಮೊತ್ತವನ್ನು ಪಾವತಿಸಲು ಮೆಸ್ಕಾಂ ಇಲಾಖೆ ತಿಳಿಸಿರುತ್ತದೆ. ಈ ಬಗ್ಗೆ ಇಲಾಖೆ ಹಾಗೂ ಸರಕಾರದ ಮಟ್ಟದಲ್ಲಿ ಆಗ್ರಹಿಸಿ ರೈತರ ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸಬೇಕಾಗಿ ಶಾಸಕರಿಗೆ ತಾಲೂಕಿನ ಕೃಷಿಕರ ಪರವಾಗಿ ಮನವಿ ಸಲ್ಲಿಸಲಾಯಿತು. ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಶಾಸಕರು ತಾಲೂಕಿನ ಕೃಷಿಕರಿಗೆ ಭರವಸೆ ನೀಡಿದರು.

Related posts

ರಾಜ್ಯ ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ಖಂಡಿಸಿ ನಾವೂರು ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಕೊಕ್ಕಡದ ಅಂಗಡಿಯಿಂದ ರೂ.2 ಲಕ್ಷ ಹಣ ಕಳ್ಳತನ ಪ್ರಕರಣ: ಆರೋಪಿಗಳಿಬ್ಬರ ಬಂಧನ

Suddi Udaya

ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ನಲ್ಲಿ ಧರ್ಮಾಧ್ಯಕ್ಷರ ರಜತ ಸಂಭ್ರಮದ ಭವ್ಯಾಚರಣೆ

Suddi Udaya

ದಿಡುಪೆ ಮಸ್ಜಿದುಲ್ ಹಿದಾಯ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಡಿ.ಬಿ ಇಸ್ಮಾಯಿಲ್ ಮುಸ್ಲಿಯಾರ್ ಪುನರಾಯ್ಕೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್‌ನ ಆಶ್ರಯ ಸಮಿತಿಗೆ ಸದಸ್ಯರ ನೇಮಕ

Suddi Udaya
error: Content is protected !!