25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೈತರ ಕೃಷಿ ಪಂಪು ಸೆಟ್ ಸ್ಥಾವರಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಶಾಸಕ ಹರೀಶ್ ಪೂಂಜರಿಗೆ ಮನವಿ

ಬೆಳ್ತಂಗಡಿ: ಕರ್ನಾಟಕ ಸರಕಾರದ ವ್ಯಾಪ್ತಿಯಲ್ಲಿ ಮೆಸ್ಕಾಂ ಇಲಾಖೆಯು ರೈತರ ಕೃಷಿ ಪಂಪು ಸೆಟ್ ಸ್ಥಾವರಗಳಿಗೆ ಹೆಚ್ಚುವರಿ 15000/- ಠೇವಣಿ ವಿಧಿಸುವ ಯೋಜನೆ ಹಾಕಿಕೊಂಡಿದ್ದು, ಈಗಾಗಲೇ ಅಂದಾಜು ಪಟ್ಟಿ ತಯಾರಿಸಿ ಕಾರ್ಯದೇಶವಾದ ಯಾವುದೇ ಪಂಪು ಸೆಟ್ಟುಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುತ್ತಿಲ್ಲ. ಆದ್ದರಿಂದ ಬೆಳ್ತಂಗಡಿ ತಾಲೂಕಿನ ಕೃಷಿಕ ಬಂಧುಗಳು ಶಾಸಕ ಹರೀಶ್ ಪೂಂಜಾ ಅವರನ್ನು ಭೇಟಿಯಾಗಿ , ತಮ್ಮ ಮನವಿಯನ್ನು ಅರ್ಪಿಸಿದರು.

ಕೃಷಿಕರು ಈಗಾಗಲೇ ಬ್ಯಾಂಕುಗಳಿಂದ ಸಾಲ ಮಾಡಿ ಅಡಿಕೆ ಹಾಗೂ ತೆಂಗು ಇನ್ನಿತರ ಕೃಷಿ ಅಭಿವೃದ್ಧಿ ಮಾಡಿದ್ದು, ಕೃಷಿ ಪಂಪು ಸೆಟ್ಟುಗಳಿಗೆ ವಿದ್ಯುತ್ ಸಂಪರ್ಕ ಸಿಗದೇ ಬಸವಳಿದಿದ್ದಾರೆ. ಈ ಮೊದಲು ಇಲಾಖೆ ನೀಡಿದ ಇಂಟಿಮೇಶನ್ ಪ್ರಕಾರ ಠೇವಣಿ ಪಾವತಿಸಿದ್ದು, ಇದೀಗ ಹೆಚ್ಚುವರಿ 15 ಸಾವಿರ ಮೊತ್ತವನ್ನು ಪಾವತಿಸಲು ಮೆಸ್ಕಾಂ ಇಲಾಖೆ ತಿಳಿಸಿರುತ್ತದೆ. ಈ ಬಗ್ಗೆ ಇಲಾಖೆ ಹಾಗೂ ಸರಕಾರದ ಮಟ್ಟದಲ್ಲಿ ಆಗ್ರಹಿಸಿ ರೈತರ ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸಬೇಕಾಗಿ ಶಾಸಕರಿಗೆ ತಾಲೂಕಿನ ಕೃಷಿಕರ ಪರವಾಗಿ ಮನವಿ ಸಲ್ಲಿಸಲಾಯಿತು. ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಶಾಸಕರು ತಾಲೂಕಿನ ಕೃಷಿಕರಿಗೆ ಭರವಸೆ ನೀಡಿದರು.

Related posts

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘದಿಂದ ಕಿರಣ್ ಚಂದ್ರ ಪುಷ್ಪಗಿರಿ ರವರ ಭೇಟಿ

Suddi Udaya

ಮುಂಡಾಜೆ ಶ್ರೀ ಸನ್ಯಾ ಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಮೇಲಂತಬೆಟ್ಟು: ಬೈಕ್ ಗಳೆರಡು ಮುಖಾಮುಖಿ ಡಿಕ್ಕಿ: ನಾಲ್ವರಿಗೆ ಗಂಭೀರ ಗಾಯ

Suddi Udaya

ಮದ್ದಡ್ಕ ತೋಟಗಾರಿಕೆ ಇಲಾಖೆಯ ಆವರಣ ಗೋಡೆ ಕುಸಿತ

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಕಕ್ಕಿಂಜೆ ಸ.ಪ್ರೌ. ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ದಿನಾಚರಣೆ

Suddi Udaya
error: Content is protected !!