September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಸಂಗಾತಿ ನಗರದಲ್ಲಿ ವಿದ್ಯುತ್ ಕಂಬದ ಮೇಲೆ ಬಿದ್ದು ರಸ್ತೆಗೆ ಅಡ್ಡಲಾಗಿ ಉರುಳಿದ 3 ಮರಗಳು

ಲಾಯಿಲ: ಎ.30 ರಂದು ಸುರಿದ ಭಾರಿ ಗಾಳಿ ಮಳೆಯಿಂದಾಗಿ ಲಾಯಿಲ ಗ್ರಾಮದ ಸಂಗಾತಿನಗರ ಎಂಬಲ್ಲಿ ಬೃಹದಾಕಾರದ ಮೂರು ಮರಗಳು ವಿದ್ಯುತ್ ಕಂಬದ ಮೇಲೆ ಬಿದ್ದು ಅಪಾರ ಹಾನಿಯಾಗುದರ ಜೊತೆಗೆ ರಸ್ತೆಗೆ ಅಡ್ದಲಾಗಿ ಬಿದ್ದ ಘಟನೆ ನಡೆದಿದೆ.

ವಿಷಯ ತಿಳಿದ ಕೂಡಲೆ ಗ್ರಾಮ ಪಂಚಾಯಿತಿ ಸದಸ್ಯರಾದ ಅರವಿಂದ್ ಹಾಗೂ ಗಣೇಶ್ ಇವರು ತಕ್ಷಣ ಸ್ಪಂದಿಸಿ ಮೆಸ್ಕಾಂ ಇಲಾಖೆ ಅಧಿಕಾರಿಗಳಿಗೆ ಸಂಪರ್ಕಿಸಿ ಕೂಡಲೇ ಪಂಚಾಯತ್ ಮುಖಾಂತರ ಮರ ಕಟ್ಟಿಂಗ್ ಮಾಡುವವರನ್ನು ತರಿಸಿ ರಸ್ತೆಗೆ ಅಡ್ಡಲಾಗಿ ಬಿದ್ದಿದ ಮರವನ್ನು ತೆರವುಗೊಳಿಸಿದ್ದಾರೆ. ತಕ್ಷಣ ಸ್ಪಂದಿಸಿದ ಇವರ ಈ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


ಈ ತೆರವು ಕಾರ್ಯದಲ್ಲಿ ನಿವೃತ್ತ ಸೈನಿಕರಾದ ಉಮೇಶ್, ವರದಿಗಾರರಾದ ಉದಯ ಲಾಯಿಲ, ಉದ್ಯಮಿಗಳಾದ ಅಶೋಕ್ ಶೆಟ್ಟಿ ಅರುಣ್, ಜೋಶಿಲ್ ಹಾಗೂ ಇನ್ನಿತರರು ಸಹಕರಿಸಿದ್ದಾರೆ.

Related posts

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ನ.13: ಬೆಳ್ತಂಗಡಿಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ ಕಾರ್ಯಕ್ರಮ

Suddi Udaya

ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಜೆಸ್ವಿನ್ ಪಾಲಾಟಿಗೆ ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ಗೌರವ

Suddi Udaya

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

Suddi Udaya

ವೇಣೂರು: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಮಂತ್ರಿ ಮಂಡಲ ರಚನೆ

Suddi Udaya

ನಾಲ್ಕೂರು: ಸೂಳಬೆಟ್ಟು ಮುರಳೀಧರ ಗೋಖಲೆ ರವರ ಮನೆಗೆ ಎಡತೊರೆ ಶ್ರೀ ಶಂಕರ ಭಾರತಿ ಶ್ರೀಗಳವರ ಭೇಟಿ: ಸ್ತೋತ್ರ ಪಾಠಶಾಲೆಗೆ ಚಾಲನೆ

Suddi Udaya
error: Content is protected !!