24.6 C
ಪುತ್ತೂರು, ಬೆಳ್ತಂಗಡಿ
June 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೇಂದ್ರದ ಜನ ಗಣತಿಯ ಜೊತೆ ಜಾತಿ ಗಣತಿ ಸ್ವಾಗತಾರ್ಹ : ರಕ್ಷಿತ್ ಶಿವರಾಂ

ಬೆಳ್ತಂಗಡಿ: ಬಿಜೆಪಿಗರು ಅರ್ಥವಿಲ್ಲದ ಟೀಕೆಗಳನ್ನು ಮಾಡುತ್ತಲೇ ನಮ್ಮ ಕರ್ನಾಟಕ ಕಾಂಗ್ರೆಸ್ ಪಕ್ಷವು ಘೋಷಣೆ ಮಾಡಿದ್ದ ಗ್ಯಾರಂಟಿ ಯೋಜನೆಗಳನ್ನು ಅನುಸರಿಸಿದರು. ಈಗ ಅದೇ ರೀತಿಯಲ್ಲಿ ಜಾತಿ ಗಣತಿಯನ್ನು ವಿರೋಧಿಸುತ್ತಿದ್ದ ಇವರು ಈಗ ಜಾತಿ ಗಣತಿಯನ್ನು ಮಾಡುವುದಾಗಿ ಘೋಷಿಸಿದ್ದಾರೆ.

ಅಂದಹಾಗೆ ಜಾತಿ ಗಣತಿಯು ಜಾತಿಗಳ ನಡುವೆ ಒಡಕು ಮೂಡಿಸುತ್ತದೆ ಎಂಬ ಬಾಲಿಷವಾದ ಹೇಳಿಕೆ ನೀಡಿದ್ದ ರಾಜ್ಯ ಬಿಜೆಪಿಯ ನಾಯಕರು ಮತ್ತು ಅವರ ಮಿತ್ರ ಪಕ್ಷ ಈಗ ಏನು ಹೇಳುತ್ತದೆ ಎಂಬ ಕುತೂಹಲ.

ಇನ್ನೊಂದು ಪ್ರಮುಖ ಅಂಶವೆಂದರೆ ಕಾಂಗ್ರೆಸ್ ಪಕ್ಷದ ಹಲವು ಯೋಜನೆ ಮತ್ತು ಯೋಚನೆಗಳನ್ನು ಬಿಜೆಪಿಗರು ಅನುಸರಿಸಿದ್ದಾರೆ.

ಪ್ರಧಾನಿಗಳು ಜಾತಿ ಗಣತಿ ಘೋಷಣೆಯನ್ನು ಬಿಹಾರದ ಚುನಾವಣೆಯ ಆಚೆಗೂ ತೆಗೆದುಕೊಂಡು ಹೋಗಿ ಅದಕ್ಕೆ ತಾರ್ಕಿಕ ಅಂತ್ಯ ಒದಗಿಸಬೇಕು ಮತ್ತು ಜನ ಸಮುದಾಯಗಳ ಸಾಮಾಜಿಕ ಮತ್ತು ಆರ್ಥಿಕ ಪರಿಸ್ಥಿತಿಯ ಆಧಾರದಲ್ಲಿ ಅವರಿಗೆ ನ್ಯಾಯ ಹಂಚಿಕೆ ಮಾಡಬೇಕೆಂದು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

Related posts

ವಾಯ್ಸ್ ಆಫ್ ಮಲ್ನಾಡ್ ಏರ್ಪಡಿಸಿದ್ದ ಗಾಯನ ಸ್ಪರ್ಧೆಯಲ್ಲಿ ಫೈನಲ್ ಹಂತ ತಲುಪಿದ ಬಂದಾರುವಿನ ಕುಸುಮ ಎಂ ಎಸ್

Suddi Udaya

ಶಟಲ್ ಬ್ಯಾಡ್ಮಿಂಟನ್: ಉಜಿರೆ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿ ವಿನೀತ್ ಪ್ರಥಮ ಸ್ಥಾನ

Suddi Udaya

ವೇಣೂರು: ಪೆರಿಂಜೆ ನಿವಾಸಿ ಪಿ.ಉಸ್ಮಾನ್ ನಿಧನ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

Suddi Udaya

ಧರ್ಮಸ್ಥಳ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆಯ ಶ್ರೀ ರಾಮ ಮಂದಿರದ ಉದ್ಘಾಟನೆಯ ಆಹ್ವಾನ ಪತ್ರಿಕೆ

Suddi Udaya

ಮಚ್ಚಿನ ಸ. ಪ್ರೌ.ಶಾಲೆಯ ಸಮಾಜ ವಿಜ್ಞಾನ ಶಿಕ್ಷಕ ಯೋಗಿಶ್. ಎಸ್ ರವರಿಗೆ ಬೀಳ್ಕೊಡುಗೆ

Suddi Udaya
error: Content is protected !!