25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೇಂದ್ರದ ಜನ ಗಣತಿಯ ಜೊತೆ ಜಾತಿ ಗಣತಿ ಸ್ವಾಗತಾರ್ಹ : ರಕ್ಷಿತ್ ಶಿವರಾಂ

ಬೆಳ್ತಂಗಡಿ: ಬಿಜೆಪಿಗರು ಅರ್ಥವಿಲ್ಲದ ಟೀಕೆಗಳನ್ನು ಮಾಡುತ್ತಲೇ ನಮ್ಮ ಕರ್ನಾಟಕ ಕಾಂಗ್ರೆಸ್ ಪಕ್ಷವು ಘೋಷಣೆ ಮಾಡಿದ್ದ ಗ್ಯಾರಂಟಿ ಯೋಜನೆಗಳನ್ನು ಅನುಸರಿಸಿದರು. ಈಗ ಅದೇ ರೀತಿಯಲ್ಲಿ ಜಾತಿ ಗಣತಿಯನ್ನು ವಿರೋಧಿಸುತ್ತಿದ್ದ ಇವರು ಈಗ ಜಾತಿ ಗಣತಿಯನ್ನು ಮಾಡುವುದಾಗಿ ಘೋಷಿಸಿದ್ದಾರೆ.

ಅಂದಹಾಗೆ ಜಾತಿ ಗಣತಿಯು ಜಾತಿಗಳ ನಡುವೆ ಒಡಕು ಮೂಡಿಸುತ್ತದೆ ಎಂಬ ಬಾಲಿಷವಾದ ಹೇಳಿಕೆ ನೀಡಿದ್ದ ರಾಜ್ಯ ಬಿಜೆಪಿಯ ನಾಯಕರು ಮತ್ತು ಅವರ ಮಿತ್ರ ಪಕ್ಷ ಈಗ ಏನು ಹೇಳುತ್ತದೆ ಎಂಬ ಕುತೂಹಲ.

ಇನ್ನೊಂದು ಪ್ರಮುಖ ಅಂಶವೆಂದರೆ ಕಾಂಗ್ರೆಸ್ ಪಕ್ಷದ ಹಲವು ಯೋಜನೆ ಮತ್ತು ಯೋಚನೆಗಳನ್ನು ಬಿಜೆಪಿಗರು ಅನುಸರಿಸಿದ್ದಾರೆ.

ಪ್ರಧಾನಿಗಳು ಜಾತಿ ಗಣತಿ ಘೋಷಣೆಯನ್ನು ಬಿಹಾರದ ಚುನಾವಣೆಯ ಆಚೆಗೂ ತೆಗೆದುಕೊಂಡು ಹೋಗಿ ಅದಕ್ಕೆ ತಾರ್ಕಿಕ ಅಂತ್ಯ ಒದಗಿಸಬೇಕು ಮತ್ತು ಜನ ಸಮುದಾಯಗಳ ಸಾಮಾಜಿಕ ಮತ್ತು ಆರ್ಥಿಕ ಪರಿಸ್ಥಿತಿಯ ಆಧಾರದಲ್ಲಿ ಅವರಿಗೆ ನ್ಯಾಯ ಹಂಚಿಕೆ ಮಾಡಬೇಕೆಂದು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

Related posts

ಬೆಳ್ತಂಗಡಿ ಯೋಜನೆಯ ಸೇವಾಪ್ರತಿನಿಧಿಗಳ ಪ್ರಗತಿ ಪರಿಶೀಲನಾ ಸಭೆ

Suddi Udaya

ಬೆಳ್ತಂಗಡಿ: ಸವಣಾಲುವಿನಲ್ಲಿ ಬೋನಿಗೆ ಬಿದ್ದ ಚಿರತೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

Suddi Udaya

ಮೈರೋಳ್ತಡ್ಕ ಸ.ಉ. ಶಾಲೆಗೆ ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ವತಿಯಿಂದ ಶುದ್ಧ ನೀರಿನ ಘಟಕ ಕೊಡುಗೆ

Suddi Udaya

ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಸದಸ್ಯ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಸೌಜನ್ಯ ಪ್ರಕರಣ ವಿಚಾರಣೆ ಜು.21 ಕ್ಕೆ ಮುಂದೂಡಿಕೆ

Suddi Udaya
error: Content is protected !!