ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೇಂದ್ರದ ಜನ ಗಣತಿಯ ಜೊತೆ ಜಾತಿ ಗಣತಿ ಸ್ವಾಗತಾರ್ಹ : ರಕ್ಷಿತ್ ಶಿವರಾಂ

ಬೆಳ್ತಂಗಡಿ: ಬಿಜೆಪಿಗರು ಅರ್ಥವಿಲ್ಲದ ಟೀಕೆಗಳನ್ನು ಮಾಡುತ್ತಲೇ ನಮ್ಮ ಕರ್ನಾಟಕ ಕಾಂಗ್ರೆಸ್ ಪಕ್ಷವು ಘೋಷಣೆ ಮಾಡಿದ್ದ ಗ್ಯಾರಂಟಿ ಯೋಜನೆಗಳನ್ನು ಅನುಸರಿಸಿದರು. ಈಗ ಅದೇ ರೀತಿಯಲ್ಲಿ ಜಾತಿ ಗಣತಿಯನ್ನು ವಿರೋಧಿಸುತ್ತಿದ್ದ ಇವರು ಈಗ ಜಾತಿ ಗಣತಿಯನ್ನು ಮಾಡುವುದಾಗಿ ಘೋಷಿಸಿದ್ದಾರೆ.

ಅಂದಹಾಗೆ ಜಾತಿ ಗಣತಿಯು ಜಾತಿಗಳ ನಡುವೆ ಒಡಕು ಮೂಡಿಸುತ್ತದೆ ಎಂಬ ಬಾಲಿಷವಾದ ಹೇಳಿಕೆ ನೀಡಿದ್ದ ರಾಜ್ಯ ಬಿಜೆಪಿಯ ನಾಯಕರು ಮತ್ತು ಅವರ ಮಿತ್ರ ಪಕ್ಷ ಈಗ ಏನು ಹೇಳುತ್ತದೆ ಎಂಬ ಕುತೂಹಲ.

ಇನ್ನೊಂದು ಪ್ರಮುಖ ಅಂಶವೆಂದರೆ ಕಾಂಗ್ರೆಸ್ ಪಕ್ಷದ ಹಲವು ಯೋಜನೆ ಮತ್ತು ಯೋಚನೆಗಳನ್ನು ಬಿಜೆಪಿಗರು ಅನುಸರಿಸಿದ್ದಾರೆ.

ಪ್ರಧಾನಿಗಳು ಜಾತಿ ಗಣತಿ ಘೋಷಣೆಯನ್ನು ಬಿಹಾರದ ಚುನಾವಣೆಯ ಆಚೆಗೂ ತೆಗೆದುಕೊಂಡು ಹೋಗಿ ಅದಕ್ಕೆ ತಾರ್ಕಿಕ ಅಂತ್ಯ ಒದಗಿಸಬೇಕು ಮತ್ತು ಜನ ಸಮುದಾಯಗಳ ಸಾಮಾಜಿಕ ಮತ್ತು ಆರ್ಥಿಕ ಪರಿಸ್ಥಿತಿಯ ಆಧಾರದಲ್ಲಿ ಅವರಿಗೆ ನ್ಯಾಯ ಹಂಚಿಕೆ ಮಾಡಬೇಕೆಂದು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

Related posts

ಹೊಸಂಗಡಿ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಅಕ್ಕ ಪಡೆಯ ರಚನೆ ಮತ್ತು ಉದ್ದೇಶದ ಮಾಹಿತಿ ಕಾರ್ಯಕ್ರಮ

Suddi Udaya

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜಾತಿ ವಿಚಾರವನ್ನು ಕೆದಕಿ ಅಪಮಾನಿಸಿರುವುದನ್ನು ಖಂಡಿಸಿ,ರಾಹುಲ್ ಗಾಂಧಿ ಕ್ಷಮೆ ಯಾಚಿಸುವಂತೆ ಆಗ್ರಹಿಸಿ, ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ತಹಸೀಲ್ದಾರ್ ಗೆ ಮನವಿ

Suddi Udaya

ಲಾಯಿಲ ವಲಯದ ಭಜನಾ ಪರಿಷತ್ ಅಧ್ಯಕ್ಷರಾಗಿ ಜನಾರ್ಧನ ಆಯ್ಕೆ

Suddi Udaya

ಮೋಹನ್ ಕುಮಾರ್ ನೇತೃತ್ವದಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ “ಯಶೋ-ವಿಜಯ”ಬದುಕು-ನೆನೆಪು-ಸ್ಮರಣೆ ವಿಶೇಷ ಕಾರ್ಯಕ್ರಮ

Suddi Udaya

ವಾಲಿಬಾಲ್ ಪಂದ್ಯಾಟ: ಪದ್ಮುಂಜ ಸರಕಾರಿ ಪ್ರೌಢಶಾಲಾ ಬಾಲಕರ ತಂಡ ಪ್ರಥಮ ಸ್ಥಾನ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ವೇಣೂರು: ಉಳ್ತೂರು ನೂರುಲ್ ಹುದಾ ದರ್ಸ್ ವಿದ್ಯಾರ್ಥಿ ಸಾಹಿತ್ಯ ವೇದಿಕೆಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!