22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆಯಲ್ಲಿ “ಆರ್ವಿಕ್” ಜ್ಯುವೆಲ್ಲರ್ಸ್ & ವರ್ಕ್ಸ್ ಶುಭಾರಂಭ

ಗುರುವಾಯನಕೆರೆ: ಇಲ್ಲಿಯ ನಿಸರ್ಗ ಆರ್ಕೇಡ್ ಕಾಂಪ್ಲೆಕ್ಸ್ನಲ್ಲಿ ಪ್ರಭಾಕರ್ ಆಚಾರ್ಯರವರ ಮಾಲಕತ್ವದ “ಆರ್ವಿಕ್” ಜ್ಯುವೆಲ್ಲರ್ಸ್ & ವರ್ಕ್ಸ್ ನೂತನ ಮಳಿಗೆ ಮೇ 1ರಂದು ಶುಭಾರಂಭಗೊಂಡಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳಾಲು ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ರವರು ಉದ್ಘಾಟಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಹೆಜಮಾಡಿ ದುರ್ಗಶ್ರೀ ಜುವೆಲ್ಲರ್‍ಸ್ ನ ಮಾಲಕ ಸುಂದರ ಬಿ., ಉಜಿರೆ ಶ್ರೀ ಶಾರದ ಮತ್ತು ಶಾಂತರಾಮ ಜುವೆಲ್ಲರ್‍ಸ್ ಮಾಲಕ ಆನಂದ ಆಚಾರ್ಯ , ಗುರುವಾಯನಕೆರೆ ನಿಸರ್ಗ ಕರ್ಟನ್ & ವಾಲ್ ಪೇಪರ್ ಮಾಲಕ ನಾಗೇಶ್ ಕೋಟ್ಯಾನ್ ಬರಾಯ ಉಪಸ್ಥಿತರಿದ್ದು, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಸಹೋದರರಾದ ಉಜಿರೆ ಶುಭ ಜುವೆಲ್ಲರ್‍ಸ್ ನ ಮಾಲಕ ಸುಧಾಕರ ಆಚಾರ್ಯ, ದಿವಾಕರ ಆಚಾರ್ಯ, ತಾಯಿ ಲಲಿತಾ ಈಶ್ವರಪ್ಪ ಆಚಾರ್ಯ ಹಾಗೂ ಬಂಧು ಮಿತ್ರರು ಉಪಸ್ಥಿತರಿದ್ದರು. ಬಂದಂತಹ ಅತಿಥಿ ಗಣ್ಯರನ್ನು ಮಾಲಕ ಪ್ರಭಾಕರ ಆಚಾರ್ಯ ಹಾಗೂ ಶ್ರೀಮತಿ ಉಮಾ ಪ್ರಭಾಕರ ಆಚಾರ್ಯ ಸ್ವಾಗತಿಸಿ ಸತ್ಕರಿಸಿದರು.


916 ಹಾಲ್‌ಮಾರ್ಕ್ ಚಿನ್ನ-ಬೆಳ್ಳಿ ಆಭರಣ ತಯಾರಕರು ಮತ್ತು ಮಾರಾಟಗಾರರು ಆಭರಣಗಳ ಒಪ್ಪ, ಗಿಫ್ಟ್ ಐಟಂಗಳು, ದೈವ ದೇವರುಗಳ ಮೂರ್ತಿಗಳು, ಹರಕೆಯ ಸಾಧನಗಳು ಹಾಗೂ ಇತರ ಎಲ್ಲಾ ರೀತಿಯ ಚಿನ್ನ-ಬೆಳ್ಳಿಯ ಆಭರಣಗಳು ಮಳಿಗೆಯಲ್ಲಿ ಲಭ್ಯವಿರುತ್ತದೆ ಎಂದು ಮಾಲಕ ಪ್ರಭಾಕರ ಆಚಾರ್ಯ ತಿಳಿಸಿರುತ್ತಾರೆ.

Related posts

ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಧ್ವಜಸ್ತಂಬ ಪ್ರತಿಷ್ಠಾ ಬ್ರಹ್ಮಕಲಶ ಮಹೋತ್ಸವ ಹಾಗೂ ಪ್ರತಿಷ್ಠಾ ದಿನಾಚರಣೆ, ವಾರ್ಷಿಕ ಜಾತ್ರೆ ರಥೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡಾಜೆ: ನಿಡಿಗಲ್ ಬಳಿ ರಸ್ತೆಯಲ್ಲೆ ಹೂತು ಹೋದ ವಾಹನಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

Suddi Udaya

ಗಾಂಜಾ ಸೇವನೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya

ಅಸೌಖ್ಯದಿಂದ ಬಳಲಿ ರಸ್ತೆ ಬದಿಯಲ್ಲಿ ಅನಾಥವಾಗಿ ಬಿದ್ದ ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ ನ.ಪಂ ಉಪಾಧ್ಯಕ್ಷ ಮತ್ತಿತರರು

Suddi Udaya

ರಾಜಕೇಸರಿ ಟ್ರಸ್ಟ್ ವತಿಯಿಂದ ಪರಪಾದೆ ಶಾಲೆಯಲ್ಲಿ ಸ್ವಚ್ಛಾಲಯ ಅಭಿಯಾನ

Suddi Udaya

ಬೆಳಾಲುನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya
error: Content is protected !!