24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು ಮೂಲ್ಯರ ಯಾನೆ ಕುಲಾಲರ ಸಂಘ ಮತ್ತು ಕುಲಾಲರ ಕ್ರೀಡಾ ಕೂಟ ಸಮಿತಿ ಆಶ್ರಯದಲ್ಲಿ ವಲಯ ಮಟ್ಟದ ಸ್ವಜಾತಿ ಬಾಂಧವರ ಕ್ರೀಡಾಕೂಟ

ನಾವೂರು : ಮೂಲ್ಯರ ಯಾನೆ ಕುಲಾಲರ ಸಂಘ ನಾವೂರು ಮತ್ತು ಕುಲಾಲರ ಕ್ರೀಡಾ ಕೂಟ ಸಮಿತಿ ನಾವೂರು ಇದರ ಜಂಟಿ ಆಶ್ರಯದಲ್ಲಿ ವಲಯ ಮಟ್ಟದ ಸ್ವಜಾತಿ ಬಾಂಧವರ ಕ್ರೀಡಾಕೂಟವು ಎ. 27 ರಂದು ನಾವೂರು ಕೊಡಿಯೇಲು ಗದ್ದೆಯಲ್ಲಿ ಜರುಗಿತು.

ಉದ್ಘಾಟನೆಯನ್ನು ಕುಶಾಲಪ್ಪ ಮೂಲ್ಯ ಕೊಡಿಯೇಲು ನೆರವೇರಿಸಿ ಶುಭ ಹಾರೈಸಿದರು. ಕ್ರೀಡಾಕೂಟ ಸಮಿತಿಯ ಅಧ್ಯಕ್ಷ ಪ್ರದೀಪ್ ಕರ್ಮಿನಡ್ಕ ಇವರ ಅಧ್ಯಕ್ಷತೆಯಲ್ಲಿ ನಡೆದ ಉದ್ಘಾಟನ ವೇದಿಕೆಯಲ್ಲಿ ಸದಾನಂದ ಮೂಲ್ಯ ನಾವೂರು, ಹರೀಶ್ ಕಾರಿಂಜ, ಶ್ರೀಮತಿ ಜಯಂತಿ ಕಣಾಲು, ಗ್ರಾ.ಪಂ ಸದಸ್ಯರುಗಳಾದ ಶ್ರೀಮತಿ ವೇದಾವತಿ, ಶ್ರೀಮತಿ ಪ್ರಿಯಾ ಲಕ್ಷ್ಮಣ್ ಹಾಗೂ ಗುರಿಕಾರರುಗಳಾದ ಸುಂದರ ಮೂಲ್ಯ ಭೀಮಂಡೆ ಮತ್ತು ಡಾಕಯ್ಯ ಮೂಲ್ಯ ಕಣಾಲು ಉಪಸ್ಥಿತರಿದ್ದರು.

ವಿಜಯ್ ಕುಲಾಲ್ ಸುದೇಬರಿ ಸ್ವಾಗಿತಿಸಿ , ಮಹೇಶ್ ಕುಲಾಲ್ ನಾವೂರು ವಂದಿಸಿದ ಕಾರ್ಯಕ್ರಮವನ್ನು ಕುಮಾರಿ ಪ್ರಿಯಾ ಕಾರಿಂಜ ನಿರೂಪಿಸಿದರು. ನಂತರ ವಿವಿಧ ಆಟೋಟ ಕಾರ್ಯಕ್ರಮವು ನಡೆದಿದ್ದು ಸಾಯಂಕಾಲ ಹಿರಿಯರ ಸಮ್ಮುಖದಲ್ಲಿ ಪ್ರಶಸ್ತಿ ವಿತರಣಾ ಕಾರ್ಯಕ್ರಮದೊಂದಿಗೆ ಕ್ರೀಡಾಕೂಟವು ಅತ್ಯಂತ ಯಶಸ್ವಿಯೊಂದಿಗೆ ಸಂಪನ್ನಗೊಂಡಿತು. ಧರ್ಣಪ್ಪ ಮೂಲ್ಯ ನಾವೂರು ಇವರ ಮಾರ್ಗದರ್ಶನದಲ್ಲಿ ಕ್ರೀಡಾಕೂಟ ಸಮಿತಿಯ ಎಲ್ಲ ಸದಸ್ಯರು ಕ್ರೀಡಾಕೂಟದಲ್ಲಿ ಭಾಗವಹಿಸಿ ಸಹಕರಿಸಿದರು.

Related posts

ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ಪ್ರಾರ್ಥನ ಶೆಟ್ಟಿ ರಾಜ್ಯಕ್ಕೆ ಎರಡನೇ ಸ್ಥಾನ, ವಾಣಿಜ್ಯ ವಿಭಾಗದಲ್ಲಿ ಪ್ರೇರಣ ರಾಮಚಂದ್ರ ಹೆಗಡೆ ರಾಜ್ಯಕ್ಕೆ ತೃತೀಯ ಸ್ಥಾನ

Suddi Udaya

ಅಳದಂಗಡಿ: ಇತ್ತೀಚೆಗೆ ಭಾರಿ ಗಾಳಿ , ಮಳೆಗೆ ಕುಸಿತಗೊಂಡ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ: ತಾತ್ಕಾಲಿಕ ಮನೆ ದುರಸ್ತಿಗೆ ನೆರವು

Suddi Udaya

ಕುಂದಾಪುರ : ಚಾಲಕನ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತ: ಪಡಂಗಡಿ ನಡಿಬೆಟ್ಟು ನೇಮಿರಾಜ ಶೆಟ್ಟಿಯವರ ಮೊಮ್ಮಗ ಪ್ರದ್ಯೋತ್ ಮೃತ್ಯು

Suddi Udaya

ವೇಣೂರು: ನಿವೃತ್ತ ಶಿಕ್ಷಕರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

Suddi Udaya

ಅಪಘಾತದಲ್ಲಿ ಮೃತರಾದ ನಾವೂರು ಚಂದ್ರಹಾಸ ರವರ ಕುಟುಂಬಕ್ಕೆ ನೆರವಾಗುವಂತೆ ಮನವಿ

Suddi Udaya

ತೆಕ್ಕಾರು- ಬಾರ್ಯ ಗಡಿಭಾಗದ ಸರಳಿಕಟ್ಟೆಯಿಂದ ಕಲ್ಲೇರಿ-ಗೋದಾಮುಗುಡ್ಡೆಯವರೆಗೆ ಸಂಪೂರ್ಣ ಹದಗೆಟ್ಟ ರಸ್ತೆ

Suddi Udaya
error: Content is protected !!