22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು ಮೂಲ್ಯರ ಯಾನೆ ಕುಲಾಲರ ಸಂಘ ಮತ್ತು ಕುಲಾಲರ ಕ್ರೀಡಾ ಕೂಟ ಸಮಿತಿ ಆಶ್ರಯದಲ್ಲಿ ವಲಯ ಮಟ್ಟದ ಸ್ವಜಾತಿ ಬಾಂಧವರ ಕ್ರೀಡಾಕೂಟ

ನಾವೂರು : ಮೂಲ್ಯರ ಯಾನೆ ಕುಲಾಲರ ಸಂಘ ನಾವೂರು ಮತ್ತು ಕುಲಾಲರ ಕ್ರೀಡಾ ಕೂಟ ಸಮಿತಿ ನಾವೂರು ಇದರ ಜಂಟಿ ಆಶ್ರಯದಲ್ಲಿ ವಲಯ ಮಟ್ಟದ ಸ್ವಜಾತಿ ಬಾಂಧವರ ಕ್ರೀಡಾಕೂಟವು ಎ. 27 ರಂದು ನಾವೂರು ಕೊಡಿಯೇಲು ಗದ್ದೆಯಲ್ಲಿ ಜರುಗಿತು.

ಉದ್ಘಾಟನೆಯನ್ನು ಕುಶಾಲಪ್ಪ ಮೂಲ್ಯ ಕೊಡಿಯೇಲು ನೆರವೇರಿಸಿ ಶುಭ ಹಾರೈಸಿದರು. ಕ್ರೀಡಾಕೂಟ ಸಮಿತಿಯ ಅಧ್ಯಕ್ಷ ಪ್ರದೀಪ್ ಕರ್ಮಿನಡ್ಕ ಇವರ ಅಧ್ಯಕ್ಷತೆಯಲ್ಲಿ ನಡೆದ ಉದ್ಘಾಟನ ವೇದಿಕೆಯಲ್ಲಿ ಸದಾನಂದ ಮೂಲ್ಯ ನಾವೂರು, ಹರೀಶ್ ಕಾರಿಂಜ, ಶ್ರೀಮತಿ ಜಯಂತಿ ಕಣಾಲು, ಗ್ರಾ.ಪಂ ಸದಸ್ಯರುಗಳಾದ ಶ್ರೀಮತಿ ವೇದಾವತಿ, ಶ್ರೀಮತಿ ಪ್ರಿಯಾ ಲಕ್ಷ್ಮಣ್ ಹಾಗೂ ಗುರಿಕಾರರುಗಳಾದ ಸುಂದರ ಮೂಲ್ಯ ಭೀಮಂಡೆ ಮತ್ತು ಡಾಕಯ್ಯ ಮೂಲ್ಯ ಕಣಾಲು ಉಪಸ್ಥಿತರಿದ್ದರು.

ವಿಜಯ್ ಕುಲಾಲ್ ಸುದೇಬರಿ ಸ್ವಾಗಿತಿಸಿ , ಮಹೇಶ್ ಕುಲಾಲ್ ನಾವೂರು ವಂದಿಸಿದ ಕಾರ್ಯಕ್ರಮವನ್ನು ಕುಮಾರಿ ಪ್ರಿಯಾ ಕಾರಿಂಜ ನಿರೂಪಿಸಿದರು. ನಂತರ ವಿವಿಧ ಆಟೋಟ ಕಾರ್ಯಕ್ರಮವು ನಡೆದಿದ್ದು ಸಾಯಂಕಾಲ ಹಿರಿಯರ ಸಮ್ಮುಖದಲ್ಲಿ ಪ್ರಶಸ್ತಿ ವಿತರಣಾ ಕಾರ್ಯಕ್ರಮದೊಂದಿಗೆ ಕ್ರೀಡಾಕೂಟವು ಅತ್ಯಂತ ಯಶಸ್ವಿಯೊಂದಿಗೆ ಸಂಪನ್ನಗೊಂಡಿತು. ಧರ್ಣಪ್ಪ ಮೂಲ್ಯ ನಾವೂರು ಇವರ ಮಾರ್ಗದರ್ಶನದಲ್ಲಿ ಕ್ರೀಡಾಕೂಟ ಸಮಿತಿಯ ಎಲ್ಲ ಸದಸ್ಯರು ಕ್ರೀಡಾಕೂಟದಲ್ಲಿ ಭಾಗವಹಿಸಿ ಸಹಕರಿಸಿದರು.

Related posts

ನಾಳೆ (ನ.8): ಬೆಳ್ತಂಗಡಿ ತಾಲೂಕಿನಲ್ಲಿ ಪ್ರಥಮ ಬಾರಿಗೆ ಪ್ರಖ್ಯಾತ ಪ್ಲೈವುಡ್ ಮಳಿಗೆ “ಆನ್‌ಪ್ಲೈ” ಶುಭಾರಂಭ

Suddi Udaya

ಕಡಿರುದ್ಯಾವರ :ಡೆಂಗ್ಯೂ ಜ್ವರದ ಬಗ್ಗೆ ಜನ ಜಾಗೃತಿ ಅಭಿಯಾನ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮ

Suddi Udaya

ದೈವ ನರ್ತಕ ಡಾ.ರವೀಶ್ ಪಡುಮಲೆಯವರಿಗೆ ಬಂಬ್ರಾಣ‌ ಮುಗೇರ್ ತರವಾಡು ಮನೆಯಲ್ಲಿ ಗೌರವ ಸನ್ಮಾನ

Suddi Udaya

ಬೆಳ್ತಂಗಡಿ ಮಹಿಳಾ ವೃಂದದ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನೇತ್ರಾ ಅಶೋಕ್, ಪ್ರ.ಕಾರ್ಯದರ್ಶಿಯಾಗಿ ಪ್ರೀತಿ ರತೀಶ್ ರಾವ್, ಕೋಶಾಧಿಕಾರಿಯಾಗಿ ರೇಖಾ ಸುಧೀರ್ ರಾವ್

Suddi Udaya

ಚಿನ್ನಯ್ಯ ಸಹೋದರಿ ಎಸ್.ಐ.ಟಿ ಕಚೇರಿಗೆ ಹಾಜರು

Suddi Udaya
error: Content is protected !!