25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು ಮೂಲ್ಯರ ಯಾನೆ ಕುಲಾಲರ ಸಂಘ ಮತ್ತು ಕುಲಾಲರ ಕ್ರೀಡಾ ಕೂಟ ಸಮಿತಿ ಆಶ್ರಯದಲ್ಲಿ ವಲಯ ಮಟ್ಟದ ಸ್ವಜಾತಿ ಬಾಂಧವರ ಕ್ರೀಡಾಕೂಟ

ನಾವೂರು : ಮೂಲ್ಯರ ಯಾನೆ ಕುಲಾಲರ ಸಂಘ ನಾವೂರು ಮತ್ತು ಕುಲಾಲರ ಕ್ರೀಡಾ ಕೂಟ ಸಮಿತಿ ನಾವೂರು ಇದರ ಜಂಟಿ ಆಶ್ರಯದಲ್ಲಿ ವಲಯ ಮಟ್ಟದ ಸ್ವಜಾತಿ ಬಾಂಧವರ ಕ್ರೀಡಾಕೂಟವು ಎ. 27 ರಂದು ನಾವೂರು ಕೊಡಿಯೇಲು ಗದ್ದೆಯಲ್ಲಿ ಜರುಗಿತು.

ಉದ್ಘಾಟನೆಯನ್ನು ಕುಶಾಲಪ್ಪ ಮೂಲ್ಯ ಕೊಡಿಯೇಲು ನೆರವೇರಿಸಿ ಶುಭ ಹಾರೈಸಿದರು. ಕ್ರೀಡಾಕೂಟ ಸಮಿತಿಯ ಅಧ್ಯಕ್ಷ ಪ್ರದೀಪ್ ಕರ್ಮಿನಡ್ಕ ಇವರ ಅಧ್ಯಕ್ಷತೆಯಲ್ಲಿ ನಡೆದ ಉದ್ಘಾಟನ ವೇದಿಕೆಯಲ್ಲಿ ಸದಾನಂದ ಮೂಲ್ಯ ನಾವೂರು, ಹರೀಶ್ ಕಾರಿಂಜ, ಶ್ರೀಮತಿ ಜಯಂತಿ ಕಣಾಲು, ಗ್ರಾ.ಪಂ ಸದಸ್ಯರುಗಳಾದ ಶ್ರೀಮತಿ ವೇದಾವತಿ, ಶ್ರೀಮತಿ ಪ್ರಿಯಾ ಲಕ್ಷ್ಮಣ್ ಹಾಗೂ ಗುರಿಕಾರರುಗಳಾದ ಸುಂದರ ಮೂಲ್ಯ ಭೀಮಂಡೆ ಮತ್ತು ಡಾಕಯ್ಯ ಮೂಲ್ಯ ಕಣಾಲು ಉಪಸ್ಥಿತರಿದ್ದರು.

ವಿಜಯ್ ಕುಲಾಲ್ ಸುದೇಬರಿ ಸ್ವಾಗಿತಿಸಿ , ಮಹೇಶ್ ಕುಲಾಲ್ ನಾವೂರು ವಂದಿಸಿದ ಕಾರ್ಯಕ್ರಮವನ್ನು ಕುಮಾರಿ ಪ್ರಿಯಾ ಕಾರಿಂಜ ನಿರೂಪಿಸಿದರು. ನಂತರ ವಿವಿಧ ಆಟೋಟ ಕಾರ್ಯಕ್ರಮವು ನಡೆದಿದ್ದು ಸಾಯಂಕಾಲ ಹಿರಿಯರ ಸಮ್ಮುಖದಲ್ಲಿ ಪ್ರಶಸ್ತಿ ವಿತರಣಾ ಕಾರ್ಯಕ್ರಮದೊಂದಿಗೆ ಕ್ರೀಡಾಕೂಟವು ಅತ್ಯಂತ ಯಶಸ್ವಿಯೊಂದಿಗೆ ಸಂಪನ್ನಗೊಂಡಿತು. ಧರ್ಣಪ್ಪ ಮೂಲ್ಯ ನಾವೂರು ಇವರ ಮಾರ್ಗದರ್ಶನದಲ್ಲಿ ಕ್ರೀಡಾಕೂಟ ಸಮಿತಿಯ ಎಲ್ಲ ಸದಸ್ಯರು ಕ್ರೀಡಾಕೂಟದಲ್ಲಿ ಭಾಗವಹಿಸಿ ಸಹಕರಿಸಿದರು.

Related posts

ಬೆಳ್ತಂಗಡಿ: ಚುನಾವಣೆ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿ : 24 ಗಂಟೆಯೂ ಸಂಚರಿಸುವ ವಾಹನಗಳ ಪರಿಶೀಲನೆ

Suddi Udaya

ಗೇರುಕಟ್ಟೆ: ಸ್ನೇಹ ಸಂಗಮ ಆಟೋ-ಚಾಲಕ ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ಅರಸಿನಮಕ್ಕಿ: ಕೋಡಿಯಡ್ಕ ನಿವಾಸಿ ಲಕ್ಷ್ಮಿ ಅಮ್ಮ ನಿಧನ

Suddi Udaya

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ: ಮುಂಡೂರು ಶಾಲೆಯ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಕೆ.ಬಿ. ಆಯ್ಕೆ

Suddi Udaya

ಪರೀಕ್ಷೆಗೆ ಸಂಬಂಧಿಸಿದ ಗೊಂದಲಗಳನ್ನು ಪರಿಹರಿಸಲು ಕೂಡಲೇ ಕ್ರಮಕೈಗೊಳ್ಳುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಗೆ ಆಗ್ರಹ

Suddi Udaya
error: Content is protected !!