September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಡ್ಡಂದಡ್ಕ: ಶ್ರೀ ವೆಂಕಟೇಶ್ವರ ಪ್ಯೂಲ್ ಸರ್ವಿಸ್ ಶುಭಾರಂಭ

ಹೊಸಂಗಡಿ: ಇಲ್ಲಿಯ ಪಡ್ಡಂದಡ್ಕ ಎಂಬಲ್ಲಿ ನೂತನವಾಗಿ ಪ್ರಾರಂಭಗೊಂಡ ಶ್ರೀ ವೆಂಕಟೇಶ್ವರ ಪ್ಯೂಲ್ ಸರ್ವಿಸ್ ಇದರ ಉದ್ಘಾಟನಾ ಸಮಾರಂಭವು ಎ.30ರಂದು ನೆರವೇರಿತು.


ಉಡುಪಿ ಕಟಪಾಡಿ-ಪಡುಕುತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀಪೀಠದ ಪರಮಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳು ಉದ್ಘಾಟಿಸಿ ಆಶೀರ್ವಚನ ನೀಡಿದರು.


ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಪಡ್ಯಾರಬೆಟ್ಟದ ಅನುವಂಶೀಯ ಆಡಳಿತ ಮೊಕ್ತೇಸರ ಎ. ಜೀವಂಧರ್ ಕುಮಾರ್, ಪಡ್ಡಂದಡ್ಕ ಜುಮ್ಮಾ ಮಸೀದಿ ಖತೀಬರು ಬಹು| ಖಲಂದರ್ ಬಾಖವಿ, ತಾ.ಪಂ. ಮಾಜಿ ಸದಸ್ಯ ವಿಜಯ ಗೌಡ ವೇಣೂರು ಭಾಗವಹಿಸಿದರು.
ವೇದಿಕೆಯಲ್ಲಿ ಆನಂದ ಆಚಾರ್ಯ, ಶ್ರೀಧರ ಆಚಾರ್ಯ, ಸುಂದರ ಆಚಾರ್ಯ, ಯೋಗೀಶ್ ಆಚಾರ್ಯ ಮಂಗಳೂರು, ಕೇಶವ ಆಚಾರ್ಯ ಮುಂಬೈ, ಆರ್.ಕೆ ಶಬೀರ್, ರೋಶನ್ ಉಪಸ್ಥಿತರಿದ್ದರು.


ಮಾಲಕರಾದ ಚೈತ್ರಾ ಸಂದೀಪ್ ಆಚಾರ್ಯ ರವರು ಅತಿಥಿಗಳನ್ನು ಸತ್ಕರಿಸಿ ಗೌರವಿಸಿದರು. ವಿಜಯ ಗೌಡ ಕಾರ್ಯಕ್ರಮ ನಿರೂಪಿಸಿದರು. ಪತ್ರಕರ್ತ ಹೆಚ್. ಮಹಮ್ಮದ್ ಸ್ವಾಗತಿಸಿ, ವಂದಿಸಿದರು.

ಗ್ರಾಹಕರಿಗೆ ಲಕ್ಕಿ ಕೂಪನ್:
ರೂ.3೦೦ ಪೆಟ್ರೋಲ್ ಖರೀದಿಗೆ ಲಕ್ಕಿ ಕೂಪನ್ ಹಾಗೂ ರೂ.1,000 ಡಿಸೇಲ್ ಖರೀದಿಗೆ ಲಕ್ಕಿ ಕೂಪನ್ ನೀಡಲಾಗುವುದು.
ಪ್ರಥಮ ಬಹುಮಾನ – ಸ್ಮಾರ್ಟ್ ಫೋನ್
ದ್ವಿತೀಯ ಬಹುಮಾನ – ಲ್ಯಾಪ್ ಟಾಪ್
ತೃತೀಯ ಬಹುಮಾನ – ಎಲ್.ಇ.ಡಿ. ಟಿವಿ
ಡ್ರಾ ದಿನಾಂಕ : 22 ಅಕ್ಟೋಬರ್ 2025

Related posts

ಮೇದೋಜಿರಕ ಗ್ರಂಥಿ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದ ಉಪನ್ಯಾಸಕ ನಂದಕುಮಾರ್ ಚಿಕಿತ್ಸೆಗೆ ಸ್ಪಂದಿಸದೆ ನಿಧನ

Suddi Udaya

ಬೆಳ್ತಂಗಡಿ: ವಿಶ್ವಕರ್ಮಾಭ್ಯುದಯ ಸಭಾ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಕೊಕ್ಕಡ ಶ್ರೀ ಕ್ಷೇ. ಧ.ಗ್ರಾ. ಯೋಜನೆಯ ಉಪ್ಪಾರಪಳಿಕೆ ಕಾರ್ಯಕ್ಷೇತ್ರದಲ್ಲಿ ವಿಶ್ವಜ್ಯೋತಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ನೇತೃತ್ವದಲ್ಲಿ ಗೀತೆ ಜತೆ ಸಾಹಿತ್ಯ ಸಾಂಗತ್ಯ ಉಪನ್ಯಾಸ ಮಾಲಿಕೆಯ ಎರಡನೆಯ ಅಧ್ಯಾಯ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ, ರೋವರ್ಸ್ – ರೇಂಜರ್ಸ್ ಘಟಕ ಹಾಗೂ ವಾಣಿಜ್ಯ ಸಂಘದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಫೆ 27-ಮಾ 02: ಗುರುವಾಯನಕೆರೆ ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಕಾರ್ಯಕ್ರಮ

Suddi Udaya
error: Content is protected !!