32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೈತರ ಕೃಷಿ ಪಂಪು ಸೆಟ್ ಸ್ಥಾವರಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಶಾಸಕ ಹರೀಶ್ ಪೂಂಜರಿಗೆ ಮನವಿ

ಬೆಳ್ತಂಗಡಿ: ಕರ್ನಾಟಕ ಸರಕಾರದ ವ್ಯಾಪ್ತಿಯಲ್ಲಿ ಮೆಸ್ಕಾಂ ಇಲಾಖೆಯು ರೈತರ ಕೃಷಿ ಪಂಪು ಸೆಟ್ ಸ್ಥಾವರಗಳಿಗೆ ಹೆಚ್ಚುವರಿ 15000/- ಠೇವಣಿ ವಿಧಿಸುವ ಯೋಜನೆ ಹಾಕಿಕೊಂಡಿದ್ದು, ಈಗಾಗಲೇ ಅಂದಾಜು ಪಟ್ಟಿ ತಯಾರಿಸಿ ಕಾರ್ಯದೇಶವಾದ ಯಾವುದೇ ಪಂಪು ಸೆಟ್ಟುಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುತ್ತಿಲ್ಲ. ಆದ್ದರಿಂದ ಬೆಳ್ತಂಗಡಿ ತಾಲೂಕಿನ ಕೃಷಿಕ ಬಂಧುಗಳು ಶಾಸಕ ಹರೀಶ್ ಪೂಂಜಾ ಅವರನ್ನು ಭೇಟಿಯಾಗಿ , ತಮ್ಮ ಮನವಿಯನ್ನು ಅರ್ಪಿಸಿದರು.

ಕೃಷಿಕರು ಈಗಾಗಲೇ ಬ್ಯಾಂಕುಗಳಿಂದ ಸಾಲ ಮಾಡಿ ಅಡಿಕೆ ಹಾಗೂ ತೆಂಗು ಇನ್ನಿತರ ಕೃಷಿ ಅಭಿವೃದ್ಧಿ ಮಾಡಿದ್ದು, ಕೃಷಿ ಪಂಪು ಸೆಟ್ಟುಗಳಿಗೆ ವಿದ್ಯುತ್ ಸಂಪರ್ಕ ಸಿಗದೇ ಬಸವಳಿದಿದ್ದಾರೆ. ಈ ಮೊದಲು ಇಲಾಖೆ ನೀಡಿದ ಇಂಟಿಮೇಶನ್ ಪ್ರಕಾರ ಠೇವಣಿ ಪಾವತಿಸಿದ್ದು, ಇದೀಗ ಹೆಚ್ಚುವರಿ 15 ಸಾವಿರ ಮೊತ್ತವನ್ನು ಪಾವತಿಸಲು ಮೆಸ್ಕಾಂ ಇಲಾಖೆ ತಿಳಿಸಿರುತ್ತದೆ. ಈ ಬಗ್ಗೆ ಇಲಾಖೆ ಹಾಗೂ ಸರಕಾರದ ಮಟ್ಟದಲ್ಲಿ ಆಗ್ರಹಿಸಿ ರೈತರ ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸಬೇಕಾಗಿ ಶಾಸಕರಿಗೆ ತಾಲೂಕಿನ ಕೃಷಿಕರ ಪರವಾಗಿ ಮನವಿ ಸಲ್ಲಿಸಲಾಯಿತು. ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಶಾಸಕರು ತಾಲೂಕಿನ ಕೃಷಿಕರಿಗೆ ಭರವಸೆ ನೀಡಿದರು.

Related posts

ಬಳಂಜ: ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಕ್ಬಬ್ ನಿಂದ ಆಟೋಟ ಸ್ಪರ್ದೆ, ಸಾಧಕರಿಗೆ ಸನ್ಮಾನ, ನೂತನ ಮನೆಗೆ ಚಾಲನೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಅಳದಂಗಡಿ ಮಹಾಶಕ್ತಿಕೇಂದ್ರದ ಸಭೆ

Suddi Udaya

ಮೊಗ್ರು; ಶ್ರೀ ರಾಮ ಶಿಶು ಮಂದಿರದ ನಾಲ್ಕನೇ ವರ್ಷದ ವಾರ್ಷಿಕೋತ್ಸವ, ಭಾರತ್ ಮಾತಾ ಪೂಜಾನ ಕಾರ್ಯಕ್ರಮ

Suddi Udaya

ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಮುಂಡಾಜೆ ಪ.ಪೂ. ಕಾಲೇಜು ವಿದ್ಯಾರ್ಥಿ ಕೆ.ಎನ್. ಧನುಷ್ ಆಯ್ಕೆ

Suddi Udaya

ಕೊಲ್ಲೂರಿನಿಂದ-ನಾಡಿನ ಪ್ರಸಿದ್ದ ಶ್ರದ್ದಾಕೇಂದ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ಯಾತ್ರೆ: ಉಜಿರೆಯಲ್ಲಿ ಧರ್ಮ ಸಂರಕ್ಷಣಾ ರಥಯಾತ್ರೆಗೆ ಅದ್ದೂರಿ ಚಾಲನೆ,

Suddi Udaya

ರಾಜ್ಯಮಟ್ಟದ ವಿಜ್ಞಾನ ಸಮಾವೇಶ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿಗಳ ಎರಡು ತಂಡಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya
error: Content is protected !!