25.3 C
ಪುತ್ತೂರು, ಬೆಳ್ತಂಗಡಿ
June 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೈತರ ಕೃಷಿ ಪಂಪು ಸೆಟ್ ಸ್ಥಾವರಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಶಾಸಕ ಹರೀಶ್ ಪೂಂಜರಿಗೆ ಮನವಿ

ಬೆಳ್ತಂಗಡಿ: ಕರ್ನಾಟಕ ಸರಕಾರದ ವ್ಯಾಪ್ತಿಯಲ್ಲಿ ಮೆಸ್ಕಾಂ ಇಲಾಖೆಯು ರೈತರ ಕೃಷಿ ಪಂಪು ಸೆಟ್ ಸ್ಥಾವರಗಳಿಗೆ ಹೆಚ್ಚುವರಿ 15000/- ಠೇವಣಿ ವಿಧಿಸುವ ಯೋಜನೆ ಹಾಕಿಕೊಂಡಿದ್ದು, ಈಗಾಗಲೇ ಅಂದಾಜು ಪಟ್ಟಿ ತಯಾರಿಸಿ ಕಾರ್ಯದೇಶವಾದ ಯಾವುದೇ ಪಂಪು ಸೆಟ್ಟುಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುತ್ತಿಲ್ಲ. ಆದ್ದರಿಂದ ಬೆಳ್ತಂಗಡಿ ತಾಲೂಕಿನ ಕೃಷಿಕ ಬಂಧುಗಳು ಶಾಸಕ ಹರೀಶ್ ಪೂಂಜಾ ಅವರನ್ನು ಭೇಟಿಯಾಗಿ , ತಮ್ಮ ಮನವಿಯನ್ನು ಅರ್ಪಿಸಿದರು.

ಕೃಷಿಕರು ಈಗಾಗಲೇ ಬ್ಯಾಂಕುಗಳಿಂದ ಸಾಲ ಮಾಡಿ ಅಡಿಕೆ ಹಾಗೂ ತೆಂಗು ಇನ್ನಿತರ ಕೃಷಿ ಅಭಿವೃದ್ಧಿ ಮಾಡಿದ್ದು, ಕೃಷಿ ಪಂಪು ಸೆಟ್ಟುಗಳಿಗೆ ವಿದ್ಯುತ್ ಸಂಪರ್ಕ ಸಿಗದೇ ಬಸವಳಿದಿದ್ದಾರೆ. ಈ ಮೊದಲು ಇಲಾಖೆ ನೀಡಿದ ಇಂಟಿಮೇಶನ್ ಪ್ರಕಾರ ಠೇವಣಿ ಪಾವತಿಸಿದ್ದು, ಇದೀಗ ಹೆಚ್ಚುವರಿ 15 ಸಾವಿರ ಮೊತ್ತವನ್ನು ಪಾವತಿಸಲು ಮೆಸ್ಕಾಂ ಇಲಾಖೆ ತಿಳಿಸಿರುತ್ತದೆ. ಈ ಬಗ್ಗೆ ಇಲಾಖೆ ಹಾಗೂ ಸರಕಾರದ ಮಟ್ಟದಲ್ಲಿ ಆಗ್ರಹಿಸಿ ರೈತರ ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸಬೇಕಾಗಿ ಶಾಸಕರಿಗೆ ತಾಲೂಕಿನ ಕೃಷಿಕರ ಪರವಾಗಿ ಮನವಿ ಸಲ್ಲಿಸಲಾಯಿತು. ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಶಾಸಕರು ತಾಲೂಕಿನ ಕೃಷಿಕರಿಗೆ ಭರವಸೆ ನೀಡಿದರು.

Related posts

ಮಾಲಾಡಿ ಅಂಬೇಡ್ಕರ್ ಜನ್ಮ‌ದಿನಾಚರಣಾ ಸಮಿತಿ ಆಶ್ರಯದಲ್ಲಿ ಬುದ್ದ, ಬಸವ, ಮತ್ತು ಅಂಬೇಡ್ಕರ್ ಜನ್ಮ‌ದಿನಾಚರಣೆ

Suddi Udaya

ಧರ್ಮಸ್ಥಳ ಶಿವಶಕ್ತಿ ಅಯ್ಯಂಗಾರ್ ಬೇಕರಿ, ಉಜಿರೆಯ ಅಮರ್ಥ್ಯ ಬೇಕರಿಯಲ್ಲಿ ದೀಪಾವಳಿಯ ವಿಶೇಷ ಕೊಡುಗೆಗಳು

Suddi Udaya

ಬೆಳ್ತಂಗಡಿ ಹಳೆಕೋಟೆ ಸಮೀಪ ಧರೆಗುರುಳಿದ ಬೃಹತ್ ಮರ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಗುರುರಾಜ್ ಗುರಿಪಳ್ಳ, ಕಾರ್ಯದರ್ಶಿಯಾಗಿ ಮಧುರ ರಾಘವ ಆಯ್ಕೆ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಜನ್ಮ ದಿನಾಚರಣೆ

Suddi Udaya

ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಟೀಕಿಸಲು ನೈತಿಕತೆಯಿಲ್ಲ : ಸಂದೀಪ್ ಎಸ್ ನೀರಲ್ಕೆ ಅರ್ವ

Suddi Udaya
error: Content is protected !!