September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೈತರ ಕೃಷಿ ಪಂಪು ಸೆಟ್ ಸ್ಥಾವರಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಶಾಸಕ ಹರೀಶ್ ಪೂಂಜರಿಗೆ ಮನವಿ

ಬೆಳ್ತಂಗಡಿ: ಕರ್ನಾಟಕ ಸರಕಾರದ ವ್ಯಾಪ್ತಿಯಲ್ಲಿ ಮೆಸ್ಕಾಂ ಇಲಾಖೆಯು ರೈತರ ಕೃಷಿ ಪಂಪು ಸೆಟ್ ಸ್ಥಾವರಗಳಿಗೆ ಹೆಚ್ಚುವರಿ 15000/- ಠೇವಣಿ ವಿಧಿಸುವ ಯೋಜನೆ ಹಾಕಿಕೊಂಡಿದ್ದು, ಈಗಾಗಲೇ ಅಂದಾಜು ಪಟ್ಟಿ ತಯಾರಿಸಿ ಕಾರ್ಯದೇಶವಾದ ಯಾವುದೇ ಪಂಪು ಸೆಟ್ಟುಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುತ್ತಿಲ್ಲ. ಆದ್ದರಿಂದ ಬೆಳ್ತಂಗಡಿ ತಾಲೂಕಿನ ಕೃಷಿಕ ಬಂಧುಗಳು ಶಾಸಕ ಹರೀಶ್ ಪೂಂಜಾ ಅವರನ್ನು ಭೇಟಿಯಾಗಿ , ತಮ್ಮ ಮನವಿಯನ್ನು ಅರ್ಪಿಸಿದರು.

ಕೃಷಿಕರು ಈಗಾಗಲೇ ಬ್ಯಾಂಕುಗಳಿಂದ ಸಾಲ ಮಾಡಿ ಅಡಿಕೆ ಹಾಗೂ ತೆಂಗು ಇನ್ನಿತರ ಕೃಷಿ ಅಭಿವೃದ್ಧಿ ಮಾಡಿದ್ದು, ಕೃಷಿ ಪಂಪು ಸೆಟ್ಟುಗಳಿಗೆ ವಿದ್ಯುತ್ ಸಂಪರ್ಕ ಸಿಗದೇ ಬಸವಳಿದಿದ್ದಾರೆ. ಈ ಮೊದಲು ಇಲಾಖೆ ನೀಡಿದ ಇಂಟಿಮೇಶನ್ ಪ್ರಕಾರ ಠೇವಣಿ ಪಾವತಿಸಿದ್ದು, ಇದೀಗ ಹೆಚ್ಚುವರಿ 15 ಸಾವಿರ ಮೊತ್ತವನ್ನು ಪಾವತಿಸಲು ಮೆಸ್ಕಾಂ ಇಲಾಖೆ ತಿಳಿಸಿರುತ್ತದೆ. ಈ ಬಗ್ಗೆ ಇಲಾಖೆ ಹಾಗೂ ಸರಕಾರದ ಮಟ್ಟದಲ್ಲಿ ಆಗ್ರಹಿಸಿ ರೈತರ ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸಬೇಕಾಗಿ ಶಾಸಕರಿಗೆ ತಾಲೂಕಿನ ಕೃಷಿಕರ ಪರವಾಗಿ ಮನವಿ ಸಲ್ಲಿಸಲಾಯಿತು. ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಶಾಸಕರು ತಾಲೂಕಿನ ಕೃಷಿಕರಿಗೆ ಭರವಸೆ ನೀಡಿದರು.

Related posts

ಬೆಳ್ತಂಗಡಿ ತಹಶೀಲ್ದಾರ್ ಆಗಿ ಮತ್ತೆ ಪೃಥ್ವಿ ಸಾನಿಕಂ ನೇಮಕ

Suddi Udaya

ಜೂ. 27: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿಯಿಂದ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಹಸಿರು ಹೊರೆಕಾಣಿಕೆ: ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಶಿಶಿಲ: ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಹೊರೆಕಾಣಿಕೆ ಸಮರ್ಪಣೆ; ಚಂಡಿಕಾಹೋಮ

Suddi Udaya

ಬಂದಾರು: ಸಂವಿಧಾನ ಜಾಗೃತಿ ಜಾಥ

Suddi Udaya

ಇಂದಬೆಟ್ಟು : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೊಲೆರೋ

Suddi Udaya
error: Content is protected !!