22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೈತರ ಕೃಷಿ ಪಂಪು ಸೆಟ್ ಸ್ಥಾವರಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಶಾಸಕ ಹರೀಶ್ ಪೂಂಜರಿಗೆ ಮನವಿ

ಬೆಳ್ತಂಗಡಿ: ಕರ್ನಾಟಕ ಸರಕಾರದ ವ್ಯಾಪ್ತಿಯಲ್ಲಿ ಮೆಸ್ಕಾಂ ಇಲಾಖೆಯು ರೈತರ ಕೃಷಿ ಪಂಪು ಸೆಟ್ ಸ್ಥಾವರಗಳಿಗೆ ಹೆಚ್ಚುವರಿ 15000/- ಠೇವಣಿ ವಿಧಿಸುವ ಯೋಜನೆ ಹಾಕಿಕೊಂಡಿದ್ದು, ಈಗಾಗಲೇ ಅಂದಾಜು ಪಟ್ಟಿ ತಯಾರಿಸಿ ಕಾರ್ಯದೇಶವಾದ ಯಾವುದೇ ಪಂಪು ಸೆಟ್ಟುಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುತ್ತಿಲ್ಲ. ಆದ್ದರಿಂದ ಬೆಳ್ತಂಗಡಿ ತಾಲೂಕಿನ ಕೃಷಿಕ ಬಂಧುಗಳು ಶಾಸಕ ಹರೀಶ್ ಪೂಂಜಾ ಅವರನ್ನು ಭೇಟಿಯಾಗಿ , ತಮ್ಮ ಮನವಿಯನ್ನು ಅರ್ಪಿಸಿದರು.

ಕೃಷಿಕರು ಈಗಾಗಲೇ ಬ್ಯಾಂಕುಗಳಿಂದ ಸಾಲ ಮಾಡಿ ಅಡಿಕೆ ಹಾಗೂ ತೆಂಗು ಇನ್ನಿತರ ಕೃಷಿ ಅಭಿವೃದ್ಧಿ ಮಾಡಿದ್ದು, ಕೃಷಿ ಪಂಪು ಸೆಟ್ಟುಗಳಿಗೆ ವಿದ್ಯುತ್ ಸಂಪರ್ಕ ಸಿಗದೇ ಬಸವಳಿದಿದ್ದಾರೆ. ಈ ಮೊದಲು ಇಲಾಖೆ ನೀಡಿದ ಇಂಟಿಮೇಶನ್ ಪ್ರಕಾರ ಠೇವಣಿ ಪಾವತಿಸಿದ್ದು, ಇದೀಗ ಹೆಚ್ಚುವರಿ 15 ಸಾವಿರ ಮೊತ್ತವನ್ನು ಪಾವತಿಸಲು ಮೆಸ್ಕಾಂ ಇಲಾಖೆ ತಿಳಿಸಿರುತ್ತದೆ. ಈ ಬಗ್ಗೆ ಇಲಾಖೆ ಹಾಗೂ ಸರಕಾರದ ಮಟ್ಟದಲ್ಲಿ ಆಗ್ರಹಿಸಿ ರೈತರ ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸಬೇಕಾಗಿ ಶಾಸಕರಿಗೆ ತಾಲೂಕಿನ ಕೃಷಿಕರ ಪರವಾಗಿ ಮನವಿ ಸಲ್ಲಿಸಲಾಯಿತು. ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಶಾಸಕರು ತಾಲೂಕಿನ ಕೃಷಿಕರಿಗೆ ಭರವಸೆ ನೀಡಿದರು.

Related posts

ಬೆಳ್ತಂಗಡಿ : ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ

Suddi Udaya

ಎಂಡಿಎಂಎ ಮಾದಕ ವಸ್ತು ಮಾರಾಟಕ್ಕೆ ಯತ್ನ ; ಓರ್ವ ಆರೋಪಿ ಬಂಧನ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನಾ ಸಮಾರಂಭ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ತಾಲೂಕಿನಲ್ಲಿ ಮಾಜಿ ಸೈನಿಕರ ಸಂಘ ಬೆಳ್ತಂಗಡಿ ಇದಕ್ಕೆ ಪರ್ಯಾಯವಾದ ಯಾವುದೇ ಮಾಜಿ ಸೈನಿಕರ ಸಂಘವಿರುವುದಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಮಹಮ್ಮದ್ ರಫೀ ಸ್ವಷ್ಟನೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಅಲ್ಪಸಂಖ್ಯಾತ ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ

Suddi Udaya
error: Content is protected !!