25 C
ಪುತ್ತೂರು, ಬೆಳ್ತಂಗಡಿ
May 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೇಂದ್ರದ ಜನ ಗಣತಿಯ ಜೊತೆ ಜಾತಿ ಗಣತಿ ಸ್ವಾಗತಾರ್ಹ : ರಕ್ಷಿತ್ ಶಿವರಾಂ

ಬೆಳ್ತಂಗಡಿ: ಬಿಜೆಪಿಗರು ಅರ್ಥವಿಲ್ಲದ ಟೀಕೆಗಳನ್ನು ಮಾಡುತ್ತಲೇ ನಮ್ಮ ಕರ್ನಾಟಕ ಕಾಂಗ್ರೆಸ್ ಪಕ್ಷವು ಘೋಷಣೆ ಮಾಡಿದ್ದ ಗ್ಯಾರಂಟಿ ಯೋಜನೆಗಳನ್ನು ಅನುಸರಿಸಿದರು. ಈಗ ಅದೇ ರೀತಿಯಲ್ಲಿ ಜಾತಿ ಗಣತಿಯನ್ನು ವಿರೋಧಿಸುತ್ತಿದ್ದ ಇವರು ಈಗ ಜಾತಿ ಗಣತಿಯನ್ನು ಮಾಡುವುದಾಗಿ ಘೋಷಿಸಿದ್ದಾರೆ.

ಅಂದಹಾಗೆ ಜಾತಿ ಗಣತಿಯು ಜಾತಿಗಳ ನಡುವೆ ಒಡಕು ಮೂಡಿಸುತ್ತದೆ ಎಂಬ ಬಾಲಿಷವಾದ ಹೇಳಿಕೆ ನೀಡಿದ್ದ ರಾಜ್ಯ ಬಿಜೆಪಿಯ ನಾಯಕರು ಮತ್ತು ಅವರ ಮಿತ್ರ ಪಕ್ಷ ಈಗ ಏನು ಹೇಳುತ್ತದೆ ಎಂಬ ಕುತೂಹಲ.

ಇನ್ನೊಂದು ಪ್ರಮುಖ ಅಂಶವೆಂದರೆ ಕಾಂಗ್ರೆಸ್ ಪಕ್ಷದ ಹಲವು ಯೋಜನೆ ಮತ್ತು ಯೋಚನೆಗಳನ್ನು ಬಿಜೆಪಿಗರು ಅನುಸರಿಸಿದ್ದಾರೆ.

ಪ್ರಧಾನಿಗಳು ಜಾತಿ ಗಣತಿ ಘೋಷಣೆಯನ್ನು ಬಿಹಾರದ ಚುನಾವಣೆಯ ಆಚೆಗೂ ತೆಗೆದುಕೊಂಡು ಹೋಗಿ ಅದಕ್ಕೆ ತಾರ್ಕಿಕ ಅಂತ್ಯ ಒದಗಿಸಬೇಕು ಮತ್ತು ಜನ ಸಮುದಾಯಗಳ ಸಾಮಾಜಿಕ ಮತ್ತು ಆರ್ಥಿಕ ಪರಿಸ್ಥಿತಿಯ ಆಧಾರದಲ್ಲಿ ಅವರಿಗೆ ನ್ಯಾಯ ಹಂಚಿಕೆ ಮಾಡಬೇಕೆಂದು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

Related posts

ಕೊಕ್ಕಡ: ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya

ರುಪ್ಸಾ ನೀಡುವ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ವಾಣಿ ಆಂ.ಮಾ. ಪ್ರೌಢಶಾಲಾ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ. ಆಯ್ಕೆ

Suddi Udaya

ಬೆಳ್ತಂಗಡಿ ಅಂಬುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳ ಮೇಳದ ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಯಾಘಾತದಿಂದ ನಿಧನ

Suddi Udaya

ಮುಂಡೂರುಪಳಿಕೆ ಸುಗ್ಗಿ ಪುರುಷರ ಕೂಟದ ಸಮಿತಿ ರಚನೆ

Suddi Udaya
error: Content is protected !!