25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೇಂದ್ರದ ಜನ ಗಣತಿಯ ಜೊತೆ ಜಾತಿ ಗಣತಿ ಸ್ವಾಗತಾರ್ಹ : ರಕ್ಷಿತ್ ಶಿವರಾಂ

ಬೆಳ್ತಂಗಡಿ: ಬಿಜೆಪಿಗರು ಅರ್ಥವಿಲ್ಲದ ಟೀಕೆಗಳನ್ನು ಮಾಡುತ್ತಲೇ ನಮ್ಮ ಕರ್ನಾಟಕ ಕಾಂಗ್ರೆಸ್ ಪಕ್ಷವು ಘೋಷಣೆ ಮಾಡಿದ್ದ ಗ್ಯಾರಂಟಿ ಯೋಜನೆಗಳನ್ನು ಅನುಸರಿಸಿದರು. ಈಗ ಅದೇ ರೀತಿಯಲ್ಲಿ ಜಾತಿ ಗಣತಿಯನ್ನು ವಿರೋಧಿಸುತ್ತಿದ್ದ ಇವರು ಈಗ ಜಾತಿ ಗಣತಿಯನ್ನು ಮಾಡುವುದಾಗಿ ಘೋಷಿಸಿದ್ದಾರೆ.

ಅಂದಹಾಗೆ ಜಾತಿ ಗಣತಿಯು ಜಾತಿಗಳ ನಡುವೆ ಒಡಕು ಮೂಡಿಸುತ್ತದೆ ಎಂಬ ಬಾಲಿಷವಾದ ಹೇಳಿಕೆ ನೀಡಿದ್ದ ರಾಜ್ಯ ಬಿಜೆಪಿಯ ನಾಯಕರು ಮತ್ತು ಅವರ ಮಿತ್ರ ಪಕ್ಷ ಈಗ ಏನು ಹೇಳುತ್ತದೆ ಎಂಬ ಕುತೂಹಲ.

ಇನ್ನೊಂದು ಪ್ರಮುಖ ಅಂಶವೆಂದರೆ ಕಾಂಗ್ರೆಸ್ ಪಕ್ಷದ ಹಲವು ಯೋಜನೆ ಮತ್ತು ಯೋಚನೆಗಳನ್ನು ಬಿಜೆಪಿಗರು ಅನುಸರಿಸಿದ್ದಾರೆ.

ಪ್ರಧಾನಿಗಳು ಜಾತಿ ಗಣತಿ ಘೋಷಣೆಯನ್ನು ಬಿಹಾರದ ಚುನಾವಣೆಯ ಆಚೆಗೂ ತೆಗೆದುಕೊಂಡು ಹೋಗಿ ಅದಕ್ಕೆ ತಾರ್ಕಿಕ ಅಂತ್ಯ ಒದಗಿಸಬೇಕು ಮತ್ತು ಜನ ಸಮುದಾಯಗಳ ಸಾಮಾಜಿಕ ಮತ್ತು ಆರ್ಥಿಕ ಪರಿಸ್ಥಿತಿಯ ಆಧಾರದಲ್ಲಿ ಅವರಿಗೆ ನ್ಯಾಯ ಹಂಚಿಕೆ ಮಾಡಬೇಕೆಂದು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

Related posts

ಕನ್ನಡದಲ್ಲಿ ಬರಲಿದೆ ದಸ್ಕತ್ ತುಳು ಚಿತ್ರ

Suddi Udaya

ಚೆಸ್ ಪಂದ್ಯಾಟದಲ್ಲಿ ಉಜಿರೆಯ ನ್ಯಾಚುರೋಪತಿ ಕಾಲೇಜಿಗೆ ಪ್ರಶಸ್ತಿ

Suddi Udaya

ಉಜಿರೆ: ಜೆಸಿಐ ಬೆಳ್ತಂಗಡಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಭೇಟಿ

Suddi Udaya

ಹೊರ ರಾಜ್ಯ ಹಾಗೂ ಅಂತರ್ ಜಿಲ್ಲೆಗಳಲ್ಲಿ ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿ “ಇತ್ತೆ ಬರ್ಪೆ ಅಬುಬಕ್ಕರ್” ಬಂಧನ: ಆರೋಪಿತನಿಂದ ರೂ 5‌.65 ಲಕ್ಷ ಮೌಲ್ಯದ 56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನ ವಶ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ ಇ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್ ಶಿಪ್

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ )ಬೆಳ್ತಂಗಡಿ ತಾಲೂಕು ಇವರ ವತಿಯಿಂದ ಆಟಿ ಅಮಾವಾಸ್ಯೆ ಪ್ರಯುಕ್ತ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿಆಟಿದ ಕಷಾಯ.. ವಿತರಣಾ ಕಾರ್ಯಕ್ರಮ

Suddi Udaya
error: Content is protected !!