25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೇಂದ್ರದ ಜನ ಗಣತಿಯ ಜೊತೆ ಜಾತಿ ಗಣತಿ ಸ್ವಾಗತಾರ್ಹ : ರಕ್ಷಿತ್ ಶಿವರಾಂ

ಬೆಳ್ತಂಗಡಿ: ಬಿಜೆಪಿಗರು ಅರ್ಥವಿಲ್ಲದ ಟೀಕೆಗಳನ್ನು ಮಾಡುತ್ತಲೇ ನಮ್ಮ ಕರ್ನಾಟಕ ಕಾಂಗ್ರೆಸ್ ಪಕ್ಷವು ಘೋಷಣೆ ಮಾಡಿದ್ದ ಗ್ಯಾರಂಟಿ ಯೋಜನೆಗಳನ್ನು ಅನುಸರಿಸಿದರು. ಈಗ ಅದೇ ರೀತಿಯಲ್ಲಿ ಜಾತಿ ಗಣತಿಯನ್ನು ವಿರೋಧಿಸುತ್ತಿದ್ದ ಇವರು ಈಗ ಜಾತಿ ಗಣತಿಯನ್ನು ಮಾಡುವುದಾಗಿ ಘೋಷಿಸಿದ್ದಾರೆ.

ಅಂದಹಾಗೆ ಜಾತಿ ಗಣತಿಯು ಜಾತಿಗಳ ನಡುವೆ ಒಡಕು ಮೂಡಿಸುತ್ತದೆ ಎಂಬ ಬಾಲಿಷವಾದ ಹೇಳಿಕೆ ನೀಡಿದ್ದ ರಾಜ್ಯ ಬಿಜೆಪಿಯ ನಾಯಕರು ಮತ್ತು ಅವರ ಮಿತ್ರ ಪಕ್ಷ ಈಗ ಏನು ಹೇಳುತ್ತದೆ ಎಂಬ ಕುತೂಹಲ.

ಇನ್ನೊಂದು ಪ್ರಮುಖ ಅಂಶವೆಂದರೆ ಕಾಂಗ್ರೆಸ್ ಪಕ್ಷದ ಹಲವು ಯೋಜನೆ ಮತ್ತು ಯೋಚನೆಗಳನ್ನು ಬಿಜೆಪಿಗರು ಅನುಸರಿಸಿದ್ದಾರೆ.

ಪ್ರಧಾನಿಗಳು ಜಾತಿ ಗಣತಿ ಘೋಷಣೆಯನ್ನು ಬಿಹಾರದ ಚುನಾವಣೆಯ ಆಚೆಗೂ ತೆಗೆದುಕೊಂಡು ಹೋಗಿ ಅದಕ್ಕೆ ತಾರ್ಕಿಕ ಅಂತ್ಯ ಒದಗಿಸಬೇಕು ಮತ್ತು ಜನ ಸಮುದಾಯಗಳ ಸಾಮಾಜಿಕ ಮತ್ತು ಆರ್ಥಿಕ ಪರಿಸ್ಥಿತಿಯ ಆಧಾರದಲ್ಲಿ ಅವರಿಗೆ ನ್ಯಾಯ ಹಂಚಿಕೆ ಮಾಡಬೇಕೆಂದು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

Related posts

ನಾರಾವಿ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಔಷಧಿ ವನ ಕಾರ್ಯಕ್ರಮ

Suddi Udaya

ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅವರಿಗೆ ನಡ ನಿವಾಸಿಗಳಿಂದ ಅಭಿನಂದನೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಂಘದ ಸಭೆ

Suddi Udaya

ಬೆಳ್ತಂಗಡಿ: ಗಸ್ತು ಅರಣ್ಯ ಪಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ರಾಘವೇಂದ್ರ ಪ್ರಸಾದ್ ರವರು ಪದೋನ್ನತಿಗೊಂಡು ಉಪ ವಲಯ ಅರಣ್ಯ ಅಧಿಕಾರಿಯಾಗಿ ಬಂಟ್ವಾಳ ವಲಯದ ಐಸಿಟಿ ಶಾಖೆಗೆ ವರ್ಗಾವಣೆ

Suddi Udaya

ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ: ಕೈಯಿಂದ ಕಾರಿನ ಗಾಜು ಒಡೆದ ವಿವಾದ – ಐವರ‌ ವಿಚಾರಣೆ ಪರಸ್ಪರ ಪ್ರಕರಣ ದಾಖಲು

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya
error: Content is protected !!