22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆಯಲ್ಲಿ “ಆರ್ವಿಕ್” ಜ್ಯುವೆಲ್ಲರ್ಸ್ & ವರ್ಕ್ಸ್ ಶುಭಾರಂಭ

ಗುರುವಾಯನಕೆರೆ: ಇಲ್ಲಿಯ ನಿಸರ್ಗ ಆರ್ಕೇಡ್ ಕಾಂಪ್ಲೆಕ್ಸ್ನಲ್ಲಿ ಪ್ರಭಾಕರ್ ಆಚಾರ್ಯರವರ ಮಾಲಕತ್ವದ “ಆರ್ವಿಕ್” ಜ್ಯುವೆಲ್ಲರ್ಸ್ & ವರ್ಕ್ಸ್ ನೂತನ ಮಳಿಗೆ ಮೇ 1ರಂದು ಶುಭಾರಂಭಗೊಂಡಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳಾಲು ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ರವರು ಉದ್ಘಾಟಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಹೆಜಮಾಡಿ ದುರ್ಗಶ್ರೀ ಜುವೆಲ್ಲರ್‍ಸ್ ನ ಮಾಲಕ ಸುಂದರ ಬಿ., ಉಜಿರೆ ಶ್ರೀ ಶಾರದ ಮತ್ತು ಶಾಂತರಾಮ ಜುವೆಲ್ಲರ್‍ಸ್ ಮಾಲಕ ಆನಂದ ಆಚಾರ್ಯ , ಗುರುವಾಯನಕೆರೆ ನಿಸರ್ಗ ಕರ್ಟನ್ & ವಾಲ್ ಪೇಪರ್ ಮಾಲಕ ನಾಗೇಶ್ ಕೋಟ್ಯಾನ್ ಬರಾಯ ಉಪಸ್ಥಿತರಿದ್ದು, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಸಹೋದರರಾದ ಉಜಿರೆ ಶುಭ ಜುವೆಲ್ಲರ್‍ಸ್ ನ ಮಾಲಕ ಸುಧಾಕರ ಆಚಾರ್ಯ, ದಿವಾಕರ ಆಚಾರ್ಯ, ತಾಯಿ ಲಲಿತಾ ಈಶ್ವರಪ್ಪ ಆಚಾರ್ಯ ಹಾಗೂ ಬಂಧು ಮಿತ್ರರು ಉಪಸ್ಥಿತರಿದ್ದರು. ಬಂದಂತಹ ಅತಿಥಿ ಗಣ್ಯರನ್ನು ಮಾಲಕ ಪ್ರಭಾಕರ ಆಚಾರ್ಯ ಹಾಗೂ ಶ್ರೀಮತಿ ಉಮಾ ಪ್ರಭಾಕರ ಆಚಾರ್ಯ ಸ್ವಾಗತಿಸಿ ಸತ್ಕರಿಸಿದರು.


916 ಹಾಲ್‌ಮಾರ್ಕ್ ಚಿನ್ನ-ಬೆಳ್ಳಿ ಆಭರಣ ತಯಾರಕರು ಮತ್ತು ಮಾರಾಟಗಾರರು ಆಭರಣಗಳ ಒಪ್ಪ, ಗಿಫ್ಟ್ ಐಟಂಗಳು, ದೈವ ದೇವರುಗಳ ಮೂರ್ತಿಗಳು, ಹರಕೆಯ ಸಾಧನಗಳು ಹಾಗೂ ಇತರ ಎಲ್ಲಾ ರೀತಿಯ ಚಿನ್ನ-ಬೆಳ್ಳಿಯ ಆಭರಣಗಳು ಮಳಿಗೆಯಲ್ಲಿ ಲಭ್ಯವಿರುತ್ತದೆ ಎಂದು ಮಾಲಕ ಪ್ರಭಾಕರ ಆಚಾರ್ಯ ತಿಳಿಸಿರುತ್ತಾರೆ.

Related posts

ಧರ್ಮಸ್ಥಳ: ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಅವರ ಕುಟುಂಬಸ್ಥರೊಂದಿಗೆ ಮತದಾನ

Suddi Udaya

ಉಜಿರೆ: ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ಬಿ.ಸಿ ಟ್ರಸ್ಟ್ ಸಿಡ್ಬಿ ಪ್ರಯಾಸ ಸ್ವ ಉದ್ಯೋಗ ಕ್ಕೆ 1ಕೋಟಿ ಪ್ರಗತಿ ನಿಧಿ ಮಜೂರಾತಿ ವಿತರಣೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಸಮಾಲೋಚನಾ ಸಭೆ: ಅಧ್ಯಕ್ಷರಾಗಿ ಶಶಿಧರ ಶೆಟ್ಟಿ , ಸಂಚಾಲಕರಾಗಿ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ವಿಶ್ವ ಸ್ಕಾರ್ಪ್ ದಿನಾಚರಣೆ ಹಾಗೂ ಸನ್ ರೈಸ್ ದಿನಾಚರಣೆ

Suddi Udaya

ಗೇರುಕಟ್ಟೆ: ಕಬಕದ ಇನೋವ ಕಾರು ಡಿಕ್ಕಿ: ಜೀವ ಉಳಿಸಿದ ಮಣ್ಣಿನ ದಿಣ್ಣೆ

Suddi Udaya
error: Content is protected !!