25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆಯಲ್ಲಿ “ಆರ್ವಿಕ್” ಜ್ಯುವೆಲ್ಲರ್ಸ್ & ವರ್ಕ್ಸ್ ಶುಭಾರಂಭ

ಗುರುವಾಯನಕೆರೆ: ಇಲ್ಲಿಯ ನಿಸರ್ಗ ಆರ್ಕೇಡ್ ಕಾಂಪ್ಲೆಕ್ಸ್ನಲ್ಲಿ ಪ್ರಭಾಕರ್ ಆಚಾರ್ಯರವರ ಮಾಲಕತ್ವದ “ಆರ್ವಿಕ್” ಜ್ಯುವೆಲ್ಲರ್ಸ್ & ವರ್ಕ್ಸ್ ನೂತನ ಮಳಿಗೆ ಮೇ 1ರಂದು ಶುಭಾರಂಭಗೊಂಡಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳಾಲು ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ರವರು ಉದ್ಘಾಟಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಹೆಜಮಾಡಿ ದುರ್ಗಶ್ರೀ ಜುವೆಲ್ಲರ್‍ಸ್ ನ ಮಾಲಕ ಸುಂದರ ಬಿ., ಉಜಿರೆ ಶ್ರೀ ಶಾರದ ಮತ್ತು ಶಾಂತರಾಮ ಜುವೆಲ್ಲರ್‍ಸ್ ಮಾಲಕ ಆನಂದ ಆಚಾರ್ಯ , ಗುರುವಾಯನಕೆರೆ ನಿಸರ್ಗ ಕರ್ಟನ್ & ವಾಲ್ ಪೇಪರ್ ಮಾಲಕ ನಾಗೇಶ್ ಕೋಟ್ಯಾನ್ ಬರಾಯ ಉಪಸ್ಥಿತರಿದ್ದು, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಸಹೋದರರಾದ ಉಜಿರೆ ಶುಭ ಜುವೆಲ್ಲರ್‍ಸ್ ನ ಮಾಲಕ ಸುಧಾಕರ ಆಚಾರ್ಯ, ದಿವಾಕರ ಆಚಾರ್ಯ, ತಾಯಿ ಲಲಿತಾ ಈಶ್ವರಪ್ಪ ಆಚಾರ್ಯ ಹಾಗೂ ಬಂಧು ಮಿತ್ರರು ಉಪಸ್ಥಿತರಿದ್ದರು. ಬಂದಂತಹ ಅತಿಥಿ ಗಣ್ಯರನ್ನು ಮಾಲಕ ಪ್ರಭಾಕರ ಆಚಾರ್ಯ ಹಾಗೂ ಶ್ರೀಮತಿ ಉಮಾ ಪ್ರಭಾಕರ ಆಚಾರ್ಯ ಸ್ವಾಗತಿಸಿ ಸತ್ಕರಿಸಿದರು.


916 ಹಾಲ್‌ಮಾರ್ಕ್ ಚಿನ್ನ-ಬೆಳ್ಳಿ ಆಭರಣ ತಯಾರಕರು ಮತ್ತು ಮಾರಾಟಗಾರರು ಆಭರಣಗಳ ಒಪ್ಪ, ಗಿಫ್ಟ್ ಐಟಂಗಳು, ದೈವ ದೇವರುಗಳ ಮೂರ್ತಿಗಳು, ಹರಕೆಯ ಸಾಧನಗಳು ಹಾಗೂ ಇತರ ಎಲ್ಲಾ ರೀತಿಯ ಚಿನ್ನ-ಬೆಳ್ಳಿಯ ಆಭರಣಗಳು ಮಳಿಗೆಯಲ್ಲಿ ಲಭ್ಯವಿರುತ್ತದೆ ಎಂದು ಮಾಲಕ ಪ್ರಭಾಕರ ಆಚಾರ್ಯ ತಿಳಿಸಿರುತ್ತಾರೆ.

Related posts

ಸವಣಾಲು ಶ್ರೀ ಪಿಲಿಚಾಮುಂಡಿ ಕೊಡಮಣಿತ್ತಾಯಿ ನೂತನ ದೈವಸ್ಥಾನದ ನಿರ್ಮಾಣಕ್ಕೆ ಶ್ರೀ ಕೊಡಮಣಿತ್ತಾಯ ಯಂಗ್ ಚಾಲೆಂಜರ್ಸ್ ಸಮಿತಿಯಿಂದ ದೇಣಿಗೆ ಹಸ್ತಾಂತರ

Suddi Udaya

ಕುಡ್ಲ ನನ್ನ ಹೃದಯದಲ್ಲಿದೆ: ಮುಲ್ಲೈ ಮುಹಿಲನ್

Suddi Udaya

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಟ್ರಸ್ಟ್ ಸಭೆ

Suddi Udaya

ಯಕ್ಷಭಾರತಿ ಕನ್ಯಾಡಿ ವತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಉಜಿರೆ:ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಕಲಾ ಸಿಂಧು ಸಾಂಸ್ಕೃತಿಕ ಸಂಘದ ವತಿಯಿಂದ ‘ವೃಕ್ಷಾಬಂಧನ’ ಕಾರ್ಯಕ್ರಮ

Suddi Udaya

ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟ: ಗೇರುಕಟ್ಟೆಯ ಅದೀಲ್ ರವರಿಗೆ ಕುಮಿತೆಯಲ್ಲಿ ಚಿನ್ನದ ಪದಕ

Suddi Udaya
error: Content is protected !!