25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆಯಲ್ಲಿ “ಆರ್ವಿಕ್” ಜ್ಯುವೆಲ್ಲರ್ಸ್ & ವರ್ಕ್ಸ್ ಶುಭಾರಂಭ

ಗುರುವಾಯನಕೆರೆ: ಇಲ್ಲಿಯ ನಿಸರ್ಗ ಆರ್ಕೇಡ್ ಕಾಂಪ್ಲೆಕ್ಸ್ನಲ್ಲಿ ಪ್ರಭಾಕರ್ ಆಚಾರ್ಯರವರ ಮಾಲಕತ್ವದ “ಆರ್ವಿಕ್” ಜ್ಯುವೆಲ್ಲರ್ಸ್ & ವರ್ಕ್ಸ್ ನೂತನ ಮಳಿಗೆ ಮೇ 1ರಂದು ಶುಭಾರಂಭಗೊಂಡಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳಾಲು ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ರವರು ಉದ್ಘಾಟಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಹೆಜಮಾಡಿ ದುರ್ಗಶ್ರೀ ಜುವೆಲ್ಲರ್‍ಸ್ ನ ಮಾಲಕ ಸುಂದರ ಬಿ., ಉಜಿರೆ ಶ್ರೀ ಶಾರದ ಮತ್ತು ಶಾಂತರಾಮ ಜುವೆಲ್ಲರ್‍ಸ್ ಮಾಲಕ ಆನಂದ ಆಚಾರ್ಯ , ಗುರುವಾಯನಕೆರೆ ನಿಸರ್ಗ ಕರ್ಟನ್ & ವಾಲ್ ಪೇಪರ್ ಮಾಲಕ ನಾಗೇಶ್ ಕೋಟ್ಯಾನ್ ಬರಾಯ ಉಪಸ್ಥಿತರಿದ್ದು, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಸಹೋದರರಾದ ಉಜಿರೆ ಶುಭ ಜುವೆಲ್ಲರ್‍ಸ್ ನ ಮಾಲಕ ಸುಧಾಕರ ಆಚಾರ್ಯ, ದಿವಾಕರ ಆಚಾರ್ಯ, ತಾಯಿ ಲಲಿತಾ ಈಶ್ವರಪ್ಪ ಆಚಾರ್ಯ ಹಾಗೂ ಬಂಧು ಮಿತ್ರರು ಉಪಸ್ಥಿತರಿದ್ದರು. ಬಂದಂತಹ ಅತಿಥಿ ಗಣ್ಯರನ್ನು ಮಾಲಕ ಪ್ರಭಾಕರ ಆಚಾರ್ಯ ಹಾಗೂ ಶ್ರೀಮತಿ ಉಮಾ ಪ್ರಭಾಕರ ಆಚಾರ್ಯ ಸ್ವಾಗತಿಸಿ ಸತ್ಕರಿಸಿದರು.


916 ಹಾಲ್‌ಮಾರ್ಕ್ ಚಿನ್ನ-ಬೆಳ್ಳಿ ಆಭರಣ ತಯಾರಕರು ಮತ್ತು ಮಾರಾಟಗಾರರು ಆಭರಣಗಳ ಒಪ್ಪ, ಗಿಫ್ಟ್ ಐಟಂಗಳು, ದೈವ ದೇವರುಗಳ ಮೂರ್ತಿಗಳು, ಹರಕೆಯ ಸಾಧನಗಳು ಹಾಗೂ ಇತರ ಎಲ್ಲಾ ರೀತಿಯ ಚಿನ್ನ-ಬೆಳ್ಳಿಯ ಆಭರಣಗಳು ಮಳಿಗೆಯಲ್ಲಿ ಲಭ್ಯವಿರುತ್ತದೆ ಎಂದು ಮಾಲಕ ಪ್ರಭಾಕರ ಆಚಾರ್ಯ ತಿಳಿಸಿರುತ್ತಾರೆ.

Related posts

ನಾಪತ್ತೆಯಾಗಿದ್ದ ಕೊಯ್ಯೂರು ನಿವಾಸಿ ಮುಹಮ್ಮದ್ ಯಾಸಿರ್ ಬೆಂಗಳೂರಿನಲ್ಲಿ ಪತ್ತೆ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ ಎಸೋಸಿಯೇಷನ್ ಅಳದಂಗಡಿ ವಲಯದ ವಾರ್ಷಿಕ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಟ್ರಸ್ಟ್ ಸಭೆ

Suddi Udaya

ಬೆಳ್ತಂಗಡಿ ಸುಳ್ಳಿನ ಸರದಾರ, ಆಮದು ನಾಯಕ ರಕ್ಷಿತ್ ಶಿವರಾಮ್‌ಗೆ ರಾಜಕೀಯ ಪ್ರಬುದ್ಧತೆ ಇಲ್ಲ. ನಿಮ್ಮ ಸುಳ್ಳನ್ನು ಬೆಳ್ತಂಗಡಿಯ ಪ್ರಬುದ್ದ ಜನರು ಒಪ್ಪಿಕೊಳ್ಳುವುದಿಲ್ಲ, ಪತ್ರಿಕಾಗೋಷ್ಠಿಯಲ್ಲಿ ಶಾಸಕ ಹರೀಶ್ ಪೂಂಜ ತಿರುಗೇಟು

Suddi Udaya

ಜು.12: ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣ: ಚಿನ್ನಯ್ಯನಿಗೆ ಜೀವ ಬೆದರಿಕೆ ಹಿನ್ನೆಲೆ ರಕ್ಷಣೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ

Suddi Udaya
error: Content is protected !!