July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆಯಲ್ಲಿ “ಆರ್ವಿಕ್” ಜ್ಯುವೆಲ್ಲರ್ಸ್ & ವರ್ಕ್ಸ್ ಶುಭಾರಂಭ

ಗುರುವಾಯನಕೆರೆ: ಇಲ್ಲಿಯ ನಿಸರ್ಗ ಆರ್ಕೇಡ್ ಕಾಂಪ್ಲೆಕ್ಸ್ನಲ್ಲಿ ಪ್ರಭಾಕರ್ ಆಚಾರ್ಯರವರ ಮಾಲಕತ್ವದ “ಆರ್ವಿಕ್” ಜ್ಯುವೆಲ್ಲರ್ಸ್ & ವರ್ಕ್ಸ್ ನೂತನ ಮಳಿಗೆ ಮೇ 1ರಂದು ಶುಭಾರಂಭಗೊಂಡಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳಾಲು ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ರವರು ಉದ್ಘಾಟಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಹೆಜಮಾಡಿ ದುರ್ಗಶ್ರೀ ಜುವೆಲ್ಲರ್‍ಸ್ ನ ಮಾಲಕ ಸುಂದರ ಬಿ., ಉಜಿರೆ ಶ್ರೀ ಶಾರದ ಮತ್ತು ಶಾಂತರಾಮ ಜುವೆಲ್ಲರ್‍ಸ್ ಮಾಲಕ ಆನಂದ ಆಚಾರ್ಯ , ಗುರುವಾಯನಕೆರೆ ನಿಸರ್ಗ ಕರ್ಟನ್ & ವಾಲ್ ಪೇಪರ್ ಮಾಲಕ ನಾಗೇಶ್ ಕೋಟ್ಯಾನ್ ಬರಾಯ ಉಪಸ್ಥಿತರಿದ್ದು, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಸಹೋದರರಾದ ಉಜಿರೆ ಶುಭ ಜುವೆಲ್ಲರ್‍ಸ್ ನ ಮಾಲಕ ಸುಧಾಕರ ಆಚಾರ್ಯ, ದಿವಾಕರ ಆಚಾರ್ಯ, ತಾಯಿ ಲಲಿತಾ ಈಶ್ವರಪ್ಪ ಆಚಾರ್ಯ ಹಾಗೂ ಬಂಧು ಮಿತ್ರರು ಉಪಸ್ಥಿತರಿದ್ದರು. ಬಂದಂತಹ ಅತಿಥಿ ಗಣ್ಯರನ್ನು ಮಾಲಕ ಪ್ರಭಾಕರ ಆಚಾರ್ಯ ಹಾಗೂ ಶ್ರೀಮತಿ ಉಮಾ ಪ್ರಭಾಕರ ಆಚಾರ್ಯ ಸ್ವಾಗತಿಸಿ ಸತ್ಕರಿಸಿದರು.


916 ಹಾಲ್‌ಮಾರ್ಕ್ ಚಿನ್ನ-ಬೆಳ್ಳಿ ಆಭರಣ ತಯಾರಕರು ಮತ್ತು ಮಾರಾಟಗಾರರು ಆಭರಣಗಳ ಒಪ್ಪ, ಗಿಫ್ಟ್ ಐಟಂಗಳು, ದೈವ ದೇವರುಗಳ ಮೂರ್ತಿಗಳು, ಹರಕೆಯ ಸಾಧನಗಳು ಹಾಗೂ ಇತರ ಎಲ್ಲಾ ರೀತಿಯ ಚಿನ್ನ-ಬೆಳ್ಳಿಯ ಆಭರಣಗಳು ಮಳಿಗೆಯಲ್ಲಿ ಲಭ್ಯವಿರುತ್ತದೆ ಎಂದು ಮಾಲಕ ಪ್ರಭಾಕರ ಆಚಾರ್ಯ ತಿಳಿಸಿರುತ್ತಾರೆ.

Related posts

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎನ್‌ಡಿಎ ದಿಗ್ದರ್ಶನ ಕಾರ್ಯಕ್ರಮ: ಜವಾಬ್ದಾರಿಯುತ ಪ್ರಜೆಯಾಗಿ ದೇಶಸೇವೆ ಮಾಡಲು ಲೆ.ಕ. ರೋಹಿತ್ ಪ್ರಕಾಶ್ ರೈ ಕರೆ

Suddi Udaya

ಗಿನ್ನಿಸ್ ವಿಶ್ವ ದಾಖಲೆ ಮಾಡಿದ ಶೌರ್ಯ ಎಸ್ ವಿ ರವರಿಗೆ ಮತ್ತೊಂದು ಪ್ರಶಸ್ತಿಯ ಗರಿ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ ಡಾ. ಶ್ಯಾಮ್ ಪ್ರಸಾದ ಮುಖರ್ಜಿ ಯವರ ಪುಣ್ಯಸ್ಮರಣೆ

Suddi Udaya

ಧರ್ಮಸ್ಥಳ: ನೇತ್ರಾವತಿ ಸೇತುವೆಯ ಕೆಳಭಾಗದ ನದಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ಸಾಮಾನ್ಯ ಸಭೆ: ರೂ. 3.74 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ 10% ಡಿವಿಡೆಂಡ್

Suddi Udaya

ಗೇರುಕಟ್ಟೆ: ಸ್ನೇಹ ಸಂಗಮ ಆಟೋ-ಚಾಲಕ ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!