25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೈತರ ಕೃಷಿ ಪಂಪು ಸೆಟ್ ಸ್ಥಾವರಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಶಾಸಕ ಹರೀಶ್ ಪೂಂಜರಿಗೆ ಮನವಿ

ಬೆಳ್ತಂಗಡಿ: ಕರ್ನಾಟಕ ಸರಕಾರದ ವ್ಯಾಪ್ತಿಯಲ್ಲಿ ಮೆಸ್ಕಾಂ ಇಲಾಖೆಯು ರೈತರ ಕೃಷಿ ಪಂಪು ಸೆಟ್ ಸ್ಥಾವರಗಳಿಗೆ ಹೆಚ್ಚುವರಿ 15000/- ಠೇವಣಿ ವಿಧಿಸುವ ಯೋಜನೆ ಹಾಕಿಕೊಂಡಿದ್ದು, ಈಗಾಗಲೇ ಅಂದಾಜು ಪಟ್ಟಿ ತಯಾರಿಸಿ ಕಾರ್ಯದೇಶವಾದ ಯಾವುದೇ ಪಂಪು ಸೆಟ್ಟುಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುತ್ತಿಲ್ಲ. ಆದ್ದರಿಂದ ಬೆಳ್ತಂಗಡಿ ತಾಲೂಕಿನ ಕೃಷಿಕ ಬಂಧುಗಳು ಶಾಸಕ ಹರೀಶ್ ಪೂಂಜಾ ಅವರನ್ನು ಭೇಟಿಯಾಗಿ , ತಮ್ಮ ಮನವಿಯನ್ನು ಅರ್ಪಿಸಿದರು.

ಕೃಷಿಕರು ಈಗಾಗಲೇ ಬ್ಯಾಂಕುಗಳಿಂದ ಸಾಲ ಮಾಡಿ ಅಡಿಕೆ ಹಾಗೂ ತೆಂಗು ಇನ್ನಿತರ ಕೃಷಿ ಅಭಿವೃದ್ಧಿ ಮಾಡಿದ್ದು, ಕೃಷಿ ಪಂಪು ಸೆಟ್ಟುಗಳಿಗೆ ವಿದ್ಯುತ್ ಸಂಪರ್ಕ ಸಿಗದೇ ಬಸವಳಿದಿದ್ದಾರೆ. ಈ ಮೊದಲು ಇಲಾಖೆ ನೀಡಿದ ಇಂಟಿಮೇಶನ್ ಪ್ರಕಾರ ಠೇವಣಿ ಪಾವತಿಸಿದ್ದು, ಇದೀಗ ಹೆಚ್ಚುವರಿ 15 ಸಾವಿರ ಮೊತ್ತವನ್ನು ಪಾವತಿಸಲು ಮೆಸ್ಕಾಂ ಇಲಾಖೆ ತಿಳಿಸಿರುತ್ತದೆ. ಈ ಬಗ್ಗೆ ಇಲಾಖೆ ಹಾಗೂ ಸರಕಾರದ ಮಟ್ಟದಲ್ಲಿ ಆಗ್ರಹಿಸಿ ರೈತರ ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸಬೇಕಾಗಿ ಶಾಸಕರಿಗೆ ತಾಲೂಕಿನ ಕೃಷಿಕರ ಪರವಾಗಿ ಮನವಿ ಸಲ್ಲಿಸಲಾಯಿತು. ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಶಾಸಕರು ತಾಲೂಕಿನ ಕೃಷಿಕರಿಗೆ ಭರವಸೆ ನೀಡಿದರು.

Related posts

ಕಣಿಯೂರು ಮಹಾಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಚುನಾವಣಾ ಪ್ರಚಾರ

Suddi Udaya

ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘ ಉದ್ಘಾಟನೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮುಂದೂಡಿಕೆ

Suddi Udaya

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಕಾರ್ಯಕ್ರಮ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಹುಣ್ಸೆಕಟ್ಟೆ ಶಾಲೆಯ ಶೌಚಾಲಯ ಸ್ವಚ್ಛತೆ

Suddi Udaya

ಪಟ್ರಮೆ : ರೂ. 40 ಲಕ್ಷ ವೆಚ್ಚದ ಉಳಿಯ ಬೀಡಿನ ಕಾಲು ಸೇತುವೆಗೆ ಶಿಲಾನ್ಯಾಸ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಲಾಯಿಲ ಸೋಮವತಿ ಸೇತುವೆಯಲ್ಲಿ ಸಿಲುಕಿಕೊಂಡ ಮರಗಳ ತೆರವು ಕಾರ್ಯಾಚರಣೆ

Suddi Udaya
error: Content is protected !!