September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ – ಉಪ್ಪಿನಂಗಡಿ ಮುಖ್ಯ ರಸ್ತೆಯ ಕುಲಾಲ ಮಂದಿರದ ಬಳಿ ಬೃಹತ್ ಮರಗಳು ರಸ್ತೆಯ ಅಂಚಿನಲ್ಲಿದ್ದು ತೆರವುಗೊಳಿಸುವಂತೆ ಹರೀಶ್ ಕಾರಿಂಜ ಒತ್ತಾಯ

ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಗುರುವಾಯನಕೆರೆ – ಉಪ್ಪಿನಂಗಡಿ ಮುಖ್ಯ ರಸ್ತೆಯ ಕುಲಾಲ ಮಂದಿರದ ಬಳಿ ಬ್ರಹತ್ ಮರಗಳು ರಸ್ತೆಯ ಅಂಚಿನಲ್ಲಿದ್ದು ರಸ್ತೆಗೆ ತಗುವ ರೀತಿಯಲ್ಲಿ ಇದೆ. ಗಾಳಿ ಮಳೆಗೆ ರಸ್ತೆಗೆ ಬೀಳುವ ಹಂತದಲ್ಲಿರುವ ಮರಗಳನ್ನು ಶೀಘ್ರದಲ್ಲಿ ಅರಣ್ಯ ಇಲಾಖೆ ತೆರವು ಮಾಡುವುದು ಸೂಕ್ತ ಎಂದು ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಅಧ್ಯಕ್ಷರಾದ ಹರೀಶ್ ಕಾರಿಂಜ ತಿಳಿಸಿದ್ದಾರೆ.

ಈ ರಸ್ತೆಯಲ್ಲಿ ಅಂಗನವಾಡಿ ಮಕ್ಕಳು ಶಾಲಾ ಕಾಲೇಜ್ ಮಕ್ಕಳು ಸಾರ್ವಜನಿಕರು ನಡೆದು ಕೊಂಡು ಹೋಗುತ್ತಿರುತ್ತಾರೆ. ಜೋರಾದ ಗಾಳಿ ಬೀಸಿದರೆ ರಸ್ತೆಯಲ್ಲಿ ಸಂಚಾರಿಸುವ ವಾಹನಗಳು ಮತ್ತು ಅದರಲ್ಲಿರುವ ಪ್ರಯಾಣಿಕರ ಜೀವಕ್ಕೆ ಅಪಾಯಕಾರಿ.

ಈಗಾಗಲೇ ವರ್ಷಗಳ ಹಿಂದೆಯೇ ಕುಲಾಲ ಮಂದಿರದ ಮೂಲಕ ಲಿಖಿತವಾಗಿ ಅರಣ್ಯ ಇಲಾಖೆ ಅರ್ಜಿ ಸಲ್ಲಿಸಿದ್ದು, ಮತ್ತು ತಾಲೂಕು ವಿಪತ್ತು ನಿರ್ವಹಣಾ ತಂಡಕ್ಕೆ ಕುವೆಟ್ಟು ಅಭಿವೃದ್ಧಿ ಅಧಿಕಾರಿಗಳ ಮೂಲಕ ಮಾಹಿತಿಯನ್ನು ರವನಿಸಲಾಗಿದೆ. ಈ ಬಗ್ಗೆ ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ತಾಲೂಕು ಆಡಳಿತ ಎಚ್ಚೆತ್ತುಕೊಂಡು ಮರಗಳನ್ನು ಶೀಘ್ರದಲ್ಲಿ ತೆರವು ಕಾರ್ಯ ಮಾಡಬೇಕು ಎಂದು ಸಾರ್ವಜನಿಕರ ಪರವಾಗಿ ಬೆಳ್ತಂಗಡಿ ಸುದ್ದಿ ಉದಯ ಪತ್ರಿಕೆಯ ಮೂಲಕ ಎಲ್ಲಾ ಅಧಿಕಾರಿಗಳಲ್ಲಿ ಹರೀಶ್ ಕಾರಿಂಜ ವಿನಂತಿಸಿದ್ದಾರೆ.

Related posts

ಚೈತನ್ಯ ಕಲಾವಿದರು ಬೈಲೂರು ವತಿಯಿಂದ ದಯಾ ವಿಶೇಷ ಶಾಲೆಯ ಫಾ. ವಿನೋದ್ ಮಸ್ಕರೇನ್ಹಸ್ ರವರಿಗೆ ಸನ್ಮಾನ

Suddi Udaya

ಕೊಯ್ಯುರು : ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಹಲವಾರು ಶವಗಳನ್ನು ಹೂತಿದ್ದೆ ಎಂಬ ದೂರು ಪ್ರಕರಣ: ಎಸ್.ಐ.ಟಿ. ತನಿಖಾ ತಂಡದಿಂದ ಸತ್ಯಾಂಶ ಅತಿ ಶೀಘ್ರವಾಗಿ ಬಹಿರಂಗ ಪಡಿಸಲಿ: ಕೆ. ಪಾರ್ಶ್ವನಾಥ್ ಜೈನ್

Suddi Udaya

ವಿಶ್ವಕರ್ಮ ಸಹಕಾರ ಬ್ಯಾಂಕಿನ ಉಜಿರೆ ಶಾಖೆಯ ವತಿಯಿಂದ “ಸ್ವಚ್ಛತಾ ಹೀ ಸೇವಾ” : ದೇಶಾದ್ಯಂತ ಹೆಚ್ಚುತ್ತಿದೆ ಸ್ವಚ್ಛತೆಯ ಜಾಗೃತಿ: ಪ್ರತಾಪಸಿಂಹ ನಾಯಕ್‌

Suddi Udaya

ನೂಜೋಡಿ ಮನೆಗೆ ಕಾಂಗ್ರೇಸ್ ಮುಖಂಡ ಪದ್ಮರಾಜ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

Suddi Udaya

ಉಜಿರೆಯಲ್ಲಿ ಸಾಕು ನಾಯಿ, ಬೆಕ್ಕುಗಳಿಗೆ ರೇಬಿಸ್ ಲಸಿಕೆ ಶಿಬಿರ

Suddi Udaya
error: Content is protected !!