July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ – ಉಪ್ಪಿನಂಗಡಿ ಮುಖ್ಯ ರಸ್ತೆಯ ಕುಲಾಲ ಮಂದಿರದ ಬಳಿ ಬೃಹತ್ ಮರಗಳು ರಸ್ತೆಯ ಅಂಚಿನಲ್ಲಿದ್ದು ತೆರವುಗೊಳಿಸುವಂತೆ ಹರೀಶ್ ಕಾರಿಂಜ ಒತ್ತಾಯ

ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಗುರುವಾಯನಕೆರೆ – ಉಪ್ಪಿನಂಗಡಿ ಮುಖ್ಯ ರಸ್ತೆಯ ಕುಲಾಲ ಮಂದಿರದ ಬಳಿ ಬ್ರಹತ್ ಮರಗಳು ರಸ್ತೆಯ ಅಂಚಿನಲ್ಲಿದ್ದು ರಸ್ತೆಗೆ ತಗುವ ರೀತಿಯಲ್ಲಿ ಇದೆ. ಗಾಳಿ ಮಳೆಗೆ ರಸ್ತೆಗೆ ಬೀಳುವ ಹಂತದಲ್ಲಿರುವ ಮರಗಳನ್ನು ಶೀಘ್ರದಲ್ಲಿ ಅರಣ್ಯ ಇಲಾಖೆ ತೆರವು ಮಾಡುವುದು ಸೂಕ್ತ ಎಂದು ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಅಧ್ಯಕ್ಷರಾದ ಹರೀಶ್ ಕಾರಿಂಜ ತಿಳಿಸಿದ್ದಾರೆ.

ಈ ರಸ್ತೆಯಲ್ಲಿ ಅಂಗನವಾಡಿ ಮಕ್ಕಳು ಶಾಲಾ ಕಾಲೇಜ್ ಮಕ್ಕಳು ಸಾರ್ವಜನಿಕರು ನಡೆದು ಕೊಂಡು ಹೋಗುತ್ತಿರುತ್ತಾರೆ. ಜೋರಾದ ಗಾಳಿ ಬೀಸಿದರೆ ರಸ್ತೆಯಲ್ಲಿ ಸಂಚಾರಿಸುವ ವಾಹನಗಳು ಮತ್ತು ಅದರಲ್ಲಿರುವ ಪ್ರಯಾಣಿಕರ ಜೀವಕ್ಕೆ ಅಪಾಯಕಾರಿ.

ಈಗಾಗಲೇ ವರ್ಷಗಳ ಹಿಂದೆಯೇ ಕುಲಾಲ ಮಂದಿರದ ಮೂಲಕ ಲಿಖಿತವಾಗಿ ಅರಣ್ಯ ಇಲಾಖೆ ಅರ್ಜಿ ಸಲ್ಲಿಸಿದ್ದು, ಮತ್ತು ತಾಲೂಕು ವಿಪತ್ತು ನಿರ್ವಹಣಾ ತಂಡಕ್ಕೆ ಕುವೆಟ್ಟು ಅಭಿವೃದ್ಧಿ ಅಧಿಕಾರಿಗಳ ಮೂಲಕ ಮಾಹಿತಿಯನ್ನು ರವನಿಸಲಾಗಿದೆ. ಈ ಬಗ್ಗೆ ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ತಾಲೂಕು ಆಡಳಿತ ಎಚ್ಚೆತ್ತುಕೊಂಡು ಮರಗಳನ್ನು ಶೀಘ್ರದಲ್ಲಿ ತೆರವು ಕಾರ್ಯ ಮಾಡಬೇಕು ಎಂದು ಸಾರ್ವಜನಿಕರ ಪರವಾಗಿ ಬೆಳ್ತಂಗಡಿ ಸುದ್ದಿ ಉದಯ ಪತ್ರಿಕೆಯ ಮೂಲಕ ಎಲ್ಲಾ ಅಧಿಕಾರಿಗಳಲ್ಲಿ ಹರೀಶ್ ಕಾರಿಂಜ ವಿನಂತಿಸಿದ್ದಾರೆ.

Related posts

ಕಡಿರುದ್ಯಾವರ ಗ್ರಾ.ಪಂ.ನಲ್ಲಿ ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ಕಾಪು ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕೆ.ಡಿ.ಪಿ ಸದಸ್ಯರ ನೇಮಕ

Suddi Udaya

ಜ.14: ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ನೂತನ ಶಾಖೆ ಉಪ್ಪಿನಂಗಡಿಯಲ್ಲಿ ಶುಭಾರಂಭ

Suddi Udaya

ಕಡಿರುದ್ಯಾವರ : ಕಾನರ್ಪ ಒಕ್ಕೂಟ ಅನ್ನಪೂರ್ಣೇಶ್ವರಿ ಸಂಘದ ಸದಸ್ಯೆಯ ಮನೆ ದುರಸ್ತಿ ಕಾರ್ಯ ನಡೆಸಿದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು

Suddi Udaya

ಬೆಳ್ತಂಗಡಿಯ ಮೂರು ವಕೀಲರ ಕಚೇರಿಗೆ, ಒಂದು ಇಂಜಿನಿಯರ್ ಆಫೀಸ್‌ಗೆ ಕುಂಕುಮ ?

Suddi Udaya
error: Content is protected !!