23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ರಾಷ್ಟ್ರೀಯ ತನಿಖಾ ತಂಡದಿಂದ ತನಿಖೆಯಾಗಬೇಕು : ಶಾಸಕ ಹರೀಶ್ ಪೂಂಜ ಆಗ್ರಹ

ಬೆಳ್ತಂಗಡಿ: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವುದನ್ನು ಖಂಡಿಸುತ್ತೇನೆ. ಈ ಕೃತ್ಯಕ್ಕೆ ನೇರ ಪೊಲೀಸ್ ಇಲಾಖೆ ಹಾಗೂ ಕಾಂಗ್ರೆಸ್ ಸರ್ಕಾರ ಕಾರಣ, ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ತಂಡದಿಂದ ತನಿಖೆ ನಡೆಸಿ, ಇದರ ಹಿಂದೆ ಯಾರಿದ್ದಾರೆ ಎಂಬುದನ್ನು ಪತ್ತೆ ಹಚ್ಚಬೇಕು ಎಂದು ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಒತ್ತಾಯಿಸಿದ್ದಾರೆ.


ಸುಹಾಸ್ ಮತ್ತು ಸಂಗಡಿಗರ ವಾಹನವನ್ನು ಪ್ರತೀ ನಿತ್ಯ ತಪಾಸಣೆಯನ್ನು ಮಾಡಿ, ಅವರಲ್ಲಿ ಯಾವುದೇ ರೀತಿಯಾದಂತಹ ಆತ್ಮ ರಕ್ಷಣೆಗಾಗಿ ಬೇಕಾದಂತಹ ವಸ್ತುವನ್ನು ಇಡದ ರೀತಿಯಲ್ಲಿ ಪೊಲೀಸ್ ಇಲಾಖೆ ಕಳೆದ ಒಂದು ತಿಂಗಳಿನಿಂದ ಬೆನ್ನು ಬಿದ್ದಿದೆ. ಇದರ ಹಿಂದೆ ಯಾವ ಯೋಚನೆ ಪೊಲೀಸ್ ಇಲಾಖೆಗೆ ಇದೆ ಎಂಬುವುದನ್ನು ಹರೀಶ್ ಪೂಂಜ ಪ್ರಶ್ನೆಸಿದ್ದಾರೆ.


ಒಂದು ಸಿನಿಮಾ ಮಾದರಿ ರೀತಿಯಲ್ಲಿ ದುಷ್ಕರ್ಮಿಗಳು ಸುಹಾಸ್ ಶೆಟ್ಟಿಯವರನ್ನು ಕೊಲೆ ನಡೆಸಿ, ಅಟ್ಟಹಾಸವನ್ನು ಮೆರೆದಿದ್ದಾರೆ. ಒಬ್ಬ ಕಾರ್ಯಕರ್ತನನ್ನು ವಿನಾಕಾರಣ ಹತ್ಯೆ ಮಾಡಿರುವಂತಹದ್ದು ಖಂಡಿತ ಹಿಂದೂ ಸಮಾಜ ಇದನ್ನು ಸಹಿಸಿಕೊಂಡು ಕುಳಿತುಕೊಳ್ಳುವುದಿಲ್ಲ. ಪೊಲೀಸ್ ಇಲಾಖೆ ಹಾಗೂ ರಾಜ್ಯದ ಕಾಂಗ್ರೆಸ್ ಸರ್ಕಾರ ಹಿಂದೂ ಕಾರ್ಯಕರ್ತನ ಹತ್ಯೆಗೆ ಸೂಚನೆ ಇದೇ ಎನ್ನುವಂತಹದ್ದನ್ನು ತಿಳಿದುಕೊಳ್ಳದಷ್ಟು, ಕಾನೂನು ಸುವ್ಯವಸ್ಥೆ ಈ ರಾಜ್ಯದಲ್ಲಿ ಹದಗೆಟ್ಟಿದೆ ಎಂಬುವುದು ಈ ಪ್ರಕರಣದ ಮೂಲಕ ಗಮನಕ್ಕೆ ಬಂದಿದೆ. ಹಿಂದೂ ಕಾರ್ಯಕರ್ತರ ರಕ್ಷಣೆಗೋಸ್ಕರ ನಾವು ಖಂಡಿತ ಬದ್ಧರಿದ್ದೇವೆ. ಈ ಹತ್ಯೆಗೆ ನೇರವಾಗಿ ಪೊಲೀಸ್ ಇಲಾಖೆ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕಾಗುತ್ತದೆ. ಪೊಲೀಸ್ ಇಲಾಖೆಗೆ ಮಾಹಿತಿ ಇದ್ದರೂ, ಈ ರೀತಿ ನಿರ್ಲಕ್ಯ ವಹಿಸಿರುವುದು ಈ ಕೃತ್ಯಕ್ಕೆ ಕಾರಣವಾಗಿದೆ. ರಾಜ್ಯ ಸರಕಾರದಿಂದ ನಡೆಯುವ ತನಿಖೆಯ ಮೇಲೆ ನಮಗೆ ವಿಶ್ವಾಸ ಇಲ್ಲ ಇದನ್ನು ರಾಷ್ಟ್ರೀಯ ತನಿಖಾ ತಂಡದಿಂದ ಸಮಗ್ರ ತನಿಖೆ ನಡೆಸಬೇಕು ಎಂದು ಹರೀಶ್ ಪೂಂಜ ಒತ್ತಾಯಿಸಿದ್ದಾರೆ.

Related posts

ಕಾಯರ್ತ್ತಡ್ಕ ಸ.ಹಿ.ಪ್ರಾ. ಶಾಲೆ ಇದರ ಶತಮಾನೋತ್ಸವದ ಅಂಗವಾಗಿ ಉಚಿತ ಆರೋಗ್ಯ ಶಿಬಿರ ಮತ್ತು ರಕ್ತದಾನ ಶಿಬಿರ

Suddi Udaya

ವೇಣೂರು: ಜೀರ್ಣೋದ್ಧಾರಗೊಳಿಸಿದ ತ್ಯಾಗಿಭವನ ಉದ್ಘಾಟನೆ

Suddi Udaya

ರಬ್ಬರ್ ಬೆಳೆಗಾರರಿಗೆ ಪ್ರೋತ್ಸಾಹ ಧನ ಅಥವಾ ಬೆಂಬಲ ಬೆಲೆ ನೀಡುವ ಕುರಿತು ಸಂಸದರ ಮೂಲಕ ಕೇಂದ್ರ ಕೃಷಿ ಸಚಿವರಿಗೆ ರಬ್ಬರ್ ಸೊಸೈಟಿಯಿಂದ ಮನವಿ

Suddi Udaya

ಎಸ್‌ಡಿಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಎಸ್‌ಡಿಎಂ ಕಾಲೇಜು ಆಫ್ ನ್ಯಾಚುರೋಪತಿ ಸಂಯುಕ್ತ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನದ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya

ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಭಾರಿ ಮತಗಳ ಅಂತರದಿಂದ ಗೆಲುವು

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವದ ಚಪ್ಪರ ಮೂಹೂರ್ತ

Suddi Udaya
error: Content is protected !!