25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಧರ್ಮಿಗಳ ಅಟ್ಟಹಾಸ ಅಂತ್ಯವಾಗಬೇಕು: ಅನಿಲ್ ಕುಮಾರ್ ಯು

ಬೆಳ್ತಂಗಡಿ: ತುಳುನಾಡಿನ ಈ ಪವಿತ್ರ ಭೂಮಿಯಲ್ಲಿ ಅಧರ್ಮಿಗಳ ಈ ರೀತಿಯ ಅಟ್ಟಹಾಸವನ್ನು ಅವರವರು ನಂಬುವ ದೇವರು ಕೂಡ ಕ್ಷಮಿಸಲ್ಲ, ಅಂತಹ ಅಧರ್ಮಿಗಳಿಗೆ ಶಿಕ್ಷೆ ತಪ್ಪಿದ್ದಲ್ಲ. ಈ ರೀತಿಯ ದುಷ್ಟರನ್ನು ದೇವರು ಶಿಕ್ಷಿಸದೇ ಬಿಡಲ್ಲ. ತುಳುನಾಡಿನಲ್ಲಿ ಧರ್ಮದ ಸಂಸ್ಥಾಪನೆಗೆ ದುಷ್ಟರ ಸಂಹಾರ ಅಗತ್ಯವಾಗಿ ಆಗಬೇಕಾಗಿದೆ.

ಧರ್ಮ ನಿಷ್ಠರ ಪರವಾಗಿ, ಅಧರ್ಮಿಗಳ ನಾಶಕ್ಕಾಗಿ, ಧರ್ಮಿಗಳ ಉಳುವಿಗಾಗಿ ಧರ್ಮನಿಷ್ಠರು ಒಂದಾಗಬೇಕಾಗಿದೆ. ಅಧರ್ಮದತೆಯ ಮನಸ್ಥಿತಿ ಇರುವ ಇಂತಹ ವ್ಯಕ್ತಿಗಳನ್ನು, ಬೆಂಬಲವಾಗಿ ಇರುವ ಸಂಘಟನೆಗಳನ್ನು, ಬೇರು ಸಹಿತ ಕಿತ್ತು ಬಿಸಾಡಬೇಕಾದ ಸಮಯ ಬಂದಿದೆ, ಇಲ್ಲದೇ ಹೋದರೆ ಇದೇ ರೀತಿ ಧರ್ಮ ನಿಷ್ಟರು ಬಲಿಯಾಗಬೇಕಾದ ಪರಿಸ್ಥಿತಿ ಬರುತ್ತದೆ, ಇಂತಹ ಅಧರ್ಮಿಗಳಿಗೆ ಬೆಂಬಲ ನೀಡುವ ರಾಜಕೀಯ ಪಕ್ಷಗಳಿಗೆ, ಸಂಘಟನೆಗಳಿಗೆ ನನ್ನ ದಿಕ್ಕಾರ, ತಕ್ಷಣ ಸಂಬಂಧ ಪಟ್ಟ ಸರಕಾರಗಳು, ಆಡಳಿತ ವರ್ಗ, ಅಧಿಕಾರಿ ವರ್ಗದವರು ಯಾವುದೇ ಮುಲಾಜಿಲ್ಲದೆ ತಮ್ಮ ರಾಜಕೀಯದ ಹಿತಾಸಕ್ತಿಯನ್ನು ಇದರಲ್ಲಿ ತರದೇ ಕ್ರಮ ತೆಗೆದು ಕೊಳ್ಳಬೇಕು, ಆ ಮೂಲಕ ಅಧರ್ಮಿಗಳಿಗೆ ತಕ್ಕ ಪಾಠ ಕಲಿಸಬೇಕು ಎಂದು ಆಗ್ರಹಿಸುತ್ತೇನೆ. ಧರ್ಮ ನಿಷ್ಠ ಮೃತ ಸುಹಾಸ್ ಶೆಟ್ಟಿ ಆತ್ಮಕ್ಕೆ ಶ್ರದ್ಧಾಂಜಲಿ ಅರ್ಪಿಸುತ್ತೇನೆ. ಮತ್ತೋರ್ವ ಕಾರ್ಯಕರ್ತನಿಗೂ ಹಲ್ಲೆಯಾಗಿದ್ದು ಶೀಘ್ರ ಗುಣಮುಖವಾಗಲೆಂದು ದೇವರಲ್ಲಿ ಪ್ರಾಥಿಸುತ್ತೇನೆ ಎಂದು ಭಾರತೀಯ ಮಜ್ದೂರು ಸಂಘ ದ.ಕ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ:ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ: ರೂ. 123 ಕೋಟಿ ವ್ಯವಹಾರ, ರೂ. 50 ಲಕ್ಷ ಲಾಭ, ಶೇ.12 ಡಿವಿಡೆಂಡ್

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣ ಮುಹೂರ್ತ

Suddi Udaya

ಗುರುವಾಯನಕೆರೆ: ಜ್ಞಾನ ವಿಕಾಸ ಕೇಂದ್ರಗಳ ಸದಸ್ಯರ ಅಧ್ಯಯನ ಪ್ರವಾಸ

Suddi Udaya

ನಿಡ್ಲೆ ಬೂತ್ ಗೆ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಭೇಟಿ

Suddi Udaya

ತಣ್ಣೀರುಪಂತ ಗ್ರಾ.ಪಂ. ಅಧ್ಯಕ್ಷರಾಗಿ ಹೇಮಾವತಿ, ಉಪಾಧ್ಯಕ್ಷರಾಗಿ ಪ್ರಿಯಾ ಆಯ್ಕೆ

Suddi Udaya

ಉಜಿರೆಯ ಸಿದ್ಧವನದಲ್ಲಿ ಶಂಕರ ಜಯಂತಿ

Suddi Udaya
error: Content is protected !!