27.1 C
ಪುತ್ತೂರು, ಬೆಳ್ತಂಗಡಿ
June 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ – ಉಪ್ಪಿನಂಗಡಿ ಮುಖ್ಯ ರಸ್ತೆಯ ಕುಲಾಲ ಮಂದಿರದ ಬಳಿ ಬೃಹತ್ ಮರಗಳು ರಸ್ತೆಯ ಅಂಚಿನಲ್ಲಿದ್ದು ತೆರವುಗೊಳಿಸುವಂತೆ ಹರೀಶ್ ಕಾರಿಂಜ ಒತ್ತಾಯ

ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಗುರುವಾಯನಕೆರೆ – ಉಪ್ಪಿನಂಗಡಿ ಮುಖ್ಯ ರಸ್ತೆಯ ಕುಲಾಲ ಮಂದಿರದ ಬಳಿ ಬ್ರಹತ್ ಮರಗಳು ರಸ್ತೆಯ ಅಂಚಿನಲ್ಲಿದ್ದು ರಸ್ತೆಗೆ ತಗುವ ರೀತಿಯಲ್ಲಿ ಇದೆ. ಗಾಳಿ ಮಳೆಗೆ ರಸ್ತೆಗೆ ಬೀಳುವ ಹಂತದಲ್ಲಿರುವ ಮರಗಳನ್ನು ಶೀಘ್ರದಲ್ಲಿ ಅರಣ್ಯ ಇಲಾಖೆ ತೆರವು ಮಾಡುವುದು ಸೂಕ್ತ ಎಂದು ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಅಧ್ಯಕ್ಷರಾದ ಹರೀಶ್ ಕಾರಿಂಜ ತಿಳಿಸಿದ್ದಾರೆ.

ಈ ರಸ್ತೆಯಲ್ಲಿ ಅಂಗನವಾಡಿ ಮಕ್ಕಳು ಶಾಲಾ ಕಾಲೇಜ್ ಮಕ್ಕಳು ಸಾರ್ವಜನಿಕರು ನಡೆದು ಕೊಂಡು ಹೋಗುತ್ತಿರುತ್ತಾರೆ. ಜೋರಾದ ಗಾಳಿ ಬೀಸಿದರೆ ರಸ್ತೆಯಲ್ಲಿ ಸಂಚಾರಿಸುವ ವಾಹನಗಳು ಮತ್ತು ಅದರಲ್ಲಿರುವ ಪ್ರಯಾಣಿಕರ ಜೀವಕ್ಕೆ ಅಪಾಯಕಾರಿ.

ಈಗಾಗಲೇ ವರ್ಷಗಳ ಹಿಂದೆಯೇ ಕುಲಾಲ ಮಂದಿರದ ಮೂಲಕ ಲಿಖಿತವಾಗಿ ಅರಣ್ಯ ಇಲಾಖೆ ಅರ್ಜಿ ಸಲ್ಲಿಸಿದ್ದು, ಮತ್ತು ತಾಲೂಕು ವಿಪತ್ತು ನಿರ್ವಹಣಾ ತಂಡಕ್ಕೆ ಕುವೆಟ್ಟು ಅಭಿವೃದ್ಧಿ ಅಧಿಕಾರಿಗಳ ಮೂಲಕ ಮಾಹಿತಿಯನ್ನು ರವನಿಸಲಾಗಿದೆ. ಈ ಬಗ್ಗೆ ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ತಾಲೂಕು ಆಡಳಿತ ಎಚ್ಚೆತ್ತುಕೊಂಡು ಮರಗಳನ್ನು ಶೀಘ್ರದಲ್ಲಿ ತೆರವು ಕಾರ್ಯ ಮಾಡಬೇಕು ಎಂದು ಸಾರ್ವಜನಿಕರ ಪರವಾಗಿ ಬೆಳ್ತಂಗಡಿ ಸುದ್ದಿ ಉದಯ ಪತ್ರಿಕೆಯ ಮೂಲಕ ಎಲ್ಲಾ ಅಧಿಕಾರಿಗಳಲ್ಲಿ ಹರೀಶ್ ಕಾರಿಂಜ ವಿನಂತಿಸಿದ್ದಾರೆ.

Related posts

ಶ್ರೀ ಮಹಮ್ಮಾಯಿ ಮರಾಟಿ ಆರಾಧನಾ ಸೇವಾ ಸಮಿತಿ ವಾರ್ಷಿಕ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ಕಳೆಂಜ ನಡುಜಾರು ಸ.ಕಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಉಜಿರೆ  : ಎಸ್.ಡಿ.ಎಂ ಪ.ಪೂ. ವಸತಿ ಕಾಲೇಜಿನಲ್ಲಿ ‘ಕಾರ್ಗಿಲ್ ವಿಜಯ ದಿವಸ ಆಚರಣೆ’

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ: ಪಾದಯಾತ್ರಿಗಳಿಗೆ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ಕೋಲ್ಕತ್ತಾದಲ್ಲಿ ಮೆಡಿಕಲ್ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಉಜಿರೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಮೌನ ಆಚರಣೆ ಹಾಗೂ ಶ್ರದ್ಧಾಂಜಲಿ ಸಭೆ

Suddi Udaya

ಆ. 12: ಪ್ರಾಥಮಿಕ ಶಾಲಾ ಶಿಕ್ಷಕರಿಂದ ಬೆಂಗಳೂರು ಚಲೋ: ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಹಸೀಲ್ದಾರ್ ಮತ್ತು ಶಾಸಕರು, ವಿಧಾನಪರಿಷತ್ ಸದಸ್ಯರ ಮೂಲಕ ಸರಕಾರಕ್ಕೆ ಮನವಿ

Suddi Udaya
error: Content is protected !!