27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ – ಉಪ್ಪಿನಂಗಡಿ ಮುಖ್ಯ ರಸ್ತೆಯ ಕುಲಾಲ ಮಂದಿರದ ಬಳಿ ಬೃಹತ್ ಮರಗಳು ರಸ್ತೆಯ ಅಂಚಿನಲ್ಲಿದ್ದು ತೆರವುಗೊಳಿಸುವಂತೆ ಹರೀಶ್ ಕಾರಿಂಜ ಒತ್ತಾಯ

ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಗುರುವಾಯನಕೆರೆ – ಉಪ್ಪಿನಂಗಡಿ ಮುಖ್ಯ ರಸ್ತೆಯ ಕುಲಾಲ ಮಂದಿರದ ಬಳಿ ಬ್ರಹತ್ ಮರಗಳು ರಸ್ತೆಯ ಅಂಚಿನಲ್ಲಿದ್ದು ರಸ್ತೆಗೆ ತಗುವ ರೀತಿಯಲ್ಲಿ ಇದೆ. ಗಾಳಿ ಮಳೆಗೆ ರಸ್ತೆಗೆ ಬೀಳುವ ಹಂತದಲ್ಲಿರುವ ಮರಗಳನ್ನು ಶೀಘ್ರದಲ್ಲಿ ಅರಣ್ಯ ಇಲಾಖೆ ತೆರವು ಮಾಡುವುದು ಸೂಕ್ತ ಎಂದು ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಅಧ್ಯಕ್ಷರಾದ ಹರೀಶ್ ಕಾರಿಂಜ ತಿಳಿಸಿದ್ದಾರೆ.

ಈ ರಸ್ತೆಯಲ್ಲಿ ಅಂಗನವಾಡಿ ಮಕ್ಕಳು ಶಾಲಾ ಕಾಲೇಜ್ ಮಕ್ಕಳು ಸಾರ್ವಜನಿಕರು ನಡೆದು ಕೊಂಡು ಹೋಗುತ್ತಿರುತ್ತಾರೆ. ಜೋರಾದ ಗಾಳಿ ಬೀಸಿದರೆ ರಸ್ತೆಯಲ್ಲಿ ಸಂಚಾರಿಸುವ ವಾಹನಗಳು ಮತ್ತು ಅದರಲ್ಲಿರುವ ಪ್ರಯಾಣಿಕರ ಜೀವಕ್ಕೆ ಅಪಾಯಕಾರಿ.

ಈಗಾಗಲೇ ವರ್ಷಗಳ ಹಿಂದೆಯೇ ಕುಲಾಲ ಮಂದಿರದ ಮೂಲಕ ಲಿಖಿತವಾಗಿ ಅರಣ್ಯ ಇಲಾಖೆ ಅರ್ಜಿ ಸಲ್ಲಿಸಿದ್ದು, ಮತ್ತು ತಾಲೂಕು ವಿಪತ್ತು ನಿರ್ವಹಣಾ ತಂಡಕ್ಕೆ ಕುವೆಟ್ಟು ಅಭಿವೃದ್ಧಿ ಅಧಿಕಾರಿಗಳ ಮೂಲಕ ಮಾಹಿತಿಯನ್ನು ರವನಿಸಲಾಗಿದೆ. ಈ ಬಗ್ಗೆ ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ತಾಲೂಕು ಆಡಳಿತ ಎಚ್ಚೆತ್ತುಕೊಂಡು ಮರಗಳನ್ನು ಶೀಘ್ರದಲ್ಲಿ ತೆರವು ಕಾರ್ಯ ಮಾಡಬೇಕು ಎಂದು ಸಾರ್ವಜನಿಕರ ಪರವಾಗಿ ಬೆಳ್ತಂಗಡಿ ಸುದ್ದಿ ಉದಯ ಪತ್ರಿಕೆಯ ಮೂಲಕ ಎಲ್ಲಾ ಅಧಿಕಾರಿಗಳಲ್ಲಿ ಹರೀಶ್ ಕಾರಿಂಜ ವಿನಂತಿಸಿದ್ದಾರೆ.

Related posts

ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಧನ ಸಂಗ್ರಹ, ಹಸ್ತಾಂತರ

Suddi Udaya

ಅ.15-22: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

Suddi Udaya

ಆರಂಬೋಡಿ: ಕುಂಟಾಲ ಪಲ್ಕೆ ಯುವತಿ ನಾಪತ್ತೆ

Suddi Udaya

ಜ.6: ಮಿತ್ತಬಾಗಿಲು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya

ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ, ಶ್ರೀ ಆದಿನಾಗ ಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಶ್ರಿ ಕ್ಷೇತ್ರ ಎರ್ನೋಡಿ :78 ನೇ ಸ್ವಾತಂತ್ರೋತ್ಸವ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಅಭಿವಂದನಾ ಕಾರ್ಯಕ್ರಮ: ಚಲನಚಿತ್ರ ನಟ ವಿಜಯ ರಾಘವೇಂದ್ರ ಭಾಗಿ

Suddi Udaya
error: Content is protected !!