26.1 C
ಪುತ್ತೂರು, ಬೆಳ್ತಂಗಡಿ
May 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ – ಉಪ್ಪಿನಂಗಡಿ ಮುಖ್ಯ ರಸ್ತೆಯ ಕುಲಾಲ ಮಂದಿರದ ಬಳಿ ಬೃಹತ್ ಮರಗಳು ರಸ್ತೆಯ ಅಂಚಿನಲ್ಲಿದ್ದು ತೆರವುಗೊಳಿಸುವಂತೆ ಹರೀಶ್ ಕಾರಿಂಜ ಒತ್ತಾಯ

ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಗುರುವಾಯನಕೆರೆ – ಉಪ್ಪಿನಂಗಡಿ ಮುಖ್ಯ ರಸ್ತೆಯ ಕುಲಾಲ ಮಂದಿರದ ಬಳಿ ಬ್ರಹತ್ ಮರಗಳು ರಸ್ತೆಯ ಅಂಚಿನಲ್ಲಿದ್ದು ರಸ್ತೆಗೆ ತಗುವ ರೀತಿಯಲ್ಲಿ ಇದೆ. ಗಾಳಿ ಮಳೆಗೆ ರಸ್ತೆಗೆ ಬೀಳುವ ಹಂತದಲ್ಲಿರುವ ಮರಗಳನ್ನು ಶೀಘ್ರದಲ್ಲಿ ಅರಣ್ಯ ಇಲಾಖೆ ತೆರವು ಮಾಡುವುದು ಸೂಕ್ತ ಎಂದು ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಅಧ್ಯಕ್ಷರಾದ ಹರೀಶ್ ಕಾರಿಂಜ ತಿಳಿಸಿದ್ದಾರೆ.

ಈ ರಸ್ತೆಯಲ್ಲಿ ಅಂಗನವಾಡಿ ಮಕ್ಕಳು ಶಾಲಾ ಕಾಲೇಜ್ ಮಕ್ಕಳು ಸಾರ್ವಜನಿಕರು ನಡೆದು ಕೊಂಡು ಹೋಗುತ್ತಿರುತ್ತಾರೆ. ಜೋರಾದ ಗಾಳಿ ಬೀಸಿದರೆ ರಸ್ತೆಯಲ್ಲಿ ಸಂಚಾರಿಸುವ ವಾಹನಗಳು ಮತ್ತು ಅದರಲ್ಲಿರುವ ಪ್ರಯಾಣಿಕರ ಜೀವಕ್ಕೆ ಅಪಾಯಕಾರಿ.

ಈಗಾಗಲೇ ವರ್ಷಗಳ ಹಿಂದೆಯೇ ಕುಲಾಲ ಮಂದಿರದ ಮೂಲಕ ಲಿಖಿತವಾಗಿ ಅರಣ್ಯ ಇಲಾಖೆ ಅರ್ಜಿ ಸಲ್ಲಿಸಿದ್ದು, ಮತ್ತು ತಾಲೂಕು ವಿಪತ್ತು ನಿರ್ವಹಣಾ ತಂಡಕ್ಕೆ ಕುವೆಟ್ಟು ಅಭಿವೃದ್ಧಿ ಅಧಿಕಾರಿಗಳ ಮೂಲಕ ಮಾಹಿತಿಯನ್ನು ರವನಿಸಲಾಗಿದೆ. ಈ ಬಗ್ಗೆ ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ತಾಲೂಕು ಆಡಳಿತ ಎಚ್ಚೆತ್ತುಕೊಂಡು ಮರಗಳನ್ನು ಶೀಘ್ರದಲ್ಲಿ ತೆರವು ಕಾರ್ಯ ಮಾಡಬೇಕು ಎಂದು ಸಾರ್ವಜನಿಕರ ಪರವಾಗಿ ಬೆಳ್ತಂಗಡಿ ಸುದ್ದಿ ಉದಯ ಪತ್ರಿಕೆಯ ಮೂಲಕ ಎಲ್ಲಾ ಅಧಿಕಾರಿಗಳಲ್ಲಿ ಹರೀಶ್ ಕಾರಿಂಜ ವಿನಂತಿಸಿದ್ದಾರೆ.

Related posts

ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದ ಸ್ವಾಗತ ಗೋಪುರ ಉದ್ಘಾಟನೆ

Suddi Udaya

ಓಡಿಲ್ನಾಳ ನಿವಾಸಿ ಲಕ್ಷ್ಮಿ ನಿಧನ

Suddi Udaya

ದೇವಿಕಿರಣ್ ಕಲಾನಿಕೇತನ ಸಂಸ್ಥೆಗೆ ಭರತನಾಟ್ಯ ಜೂನಿಯರ್ ಹಾಗೂ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಲಾಯಿಲ ಪ್ರಸನ್ನ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಉಜಿರೆಯಲ್ಲಿ ಗಾಳಿ- ಮಳೆಗೆ ವಾಹನಗಳ ಮೇಲೆ ಬಿದ್ದ ಮರ, ಒರ್ವರಿಗೆ ಗಾಯ, ಸಂಚಾರ ಅಸ್ತವ್ಯಸ್ಥ

Suddi Udaya
error: Content is protected !!