25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ – ಉಪ್ಪಿನಂಗಡಿ ಮುಖ್ಯ ರಸ್ತೆಯ ಕುಲಾಲ ಮಂದಿರದ ಬಳಿ ಬೃಹತ್ ಮರಗಳು ರಸ್ತೆಯ ಅಂಚಿನಲ್ಲಿದ್ದು ತೆರವುಗೊಳಿಸುವಂತೆ ಹರೀಶ್ ಕಾರಿಂಜ ಒತ್ತಾಯ

ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಗುರುವಾಯನಕೆರೆ – ಉಪ್ಪಿನಂಗಡಿ ಮುಖ್ಯ ರಸ್ತೆಯ ಕುಲಾಲ ಮಂದಿರದ ಬಳಿ ಬ್ರಹತ್ ಮರಗಳು ರಸ್ತೆಯ ಅಂಚಿನಲ್ಲಿದ್ದು ರಸ್ತೆಗೆ ತಗುವ ರೀತಿಯಲ್ಲಿ ಇದೆ. ಗಾಳಿ ಮಳೆಗೆ ರಸ್ತೆಗೆ ಬೀಳುವ ಹಂತದಲ್ಲಿರುವ ಮರಗಳನ್ನು ಶೀಘ್ರದಲ್ಲಿ ಅರಣ್ಯ ಇಲಾಖೆ ತೆರವು ಮಾಡುವುದು ಸೂಕ್ತ ಎಂದು ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಅಧ್ಯಕ್ಷರಾದ ಹರೀಶ್ ಕಾರಿಂಜ ತಿಳಿಸಿದ್ದಾರೆ.

ಈ ರಸ್ತೆಯಲ್ಲಿ ಅಂಗನವಾಡಿ ಮಕ್ಕಳು ಶಾಲಾ ಕಾಲೇಜ್ ಮಕ್ಕಳು ಸಾರ್ವಜನಿಕರು ನಡೆದು ಕೊಂಡು ಹೋಗುತ್ತಿರುತ್ತಾರೆ. ಜೋರಾದ ಗಾಳಿ ಬೀಸಿದರೆ ರಸ್ತೆಯಲ್ಲಿ ಸಂಚಾರಿಸುವ ವಾಹನಗಳು ಮತ್ತು ಅದರಲ್ಲಿರುವ ಪ್ರಯಾಣಿಕರ ಜೀವಕ್ಕೆ ಅಪಾಯಕಾರಿ.

ಈಗಾಗಲೇ ವರ್ಷಗಳ ಹಿಂದೆಯೇ ಕುಲಾಲ ಮಂದಿರದ ಮೂಲಕ ಲಿಖಿತವಾಗಿ ಅರಣ್ಯ ಇಲಾಖೆ ಅರ್ಜಿ ಸಲ್ಲಿಸಿದ್ದು, ಮತ್ತು ತಾಲೂಕು ವಿಪತ್ತು ನಿರ್ವಹಣಾ ತಂಡಕ್ಕೆ ಕುವೆಟ್ಟು ಅಭಿವೃದ್ಧಿ ಅಧಿಕಾರಿಗಳ ಮೂಲಕ ಮಾಹಿತಿಯನ್ನು ರವನಿಸಲಾಗಿದೆ. ಈ ಬಗ್ಗೆ ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ತಾಲೂಕು ಆಡಳಿತ ಎಚ್ಚೆತ್ತುಕೊಂಡು ಮರಗಳನ್ನು ಶೀಘ್ರದಲ್ಲಿ ತೆರವು ಕಾರ್ಯ ಮಾಡಬೇಕು ಎಂದು ಸಾರ್ವಜನಿಕರ ಪರವಾಗಿ ಬೆಳ್ತಂಗಡಿ ಸುದ್ದಿ ಉದಯ ಪತ್ರಿಕೆಯ ಮೂಲಕ ಎಲ್ಲಾ ಅಧಿಕಾರಿಗಳಲ್ಲಿ ಹರೀಶ್ ಕಾರಿಂಜ ವಿನಂತಿಸಿದ್ದಾರೆ.

Related posts

ಶಿಶಿಲ ಗಿರಿಜನ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ನಂದಿನಿ ಹಾಗೂ ನಿರ್ಮಲ ಸ್ತ್ರೀ ಶಕ್ತಿ ಸದಸ್ಯರಿಂದ ಶ್ರಮದಾನ ಹಾಗೂ ಪೌಷ್ಟಿಕ ಕೈತೋಟ ನಿರ್ಮಾಣ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶ: ಹೊರೆಕಾಣಿಕೆ ಸಮರ್ಪಣೆ, ಜಮಾ ಉಗ್ರಾಣ ಉದ್ಘಾಟನೆ

Suddi Udaya

ಗುರುವಾಯನಕೆರೆ ಪಾಲಡ್ಕ ಒಕ್ಕೂಟದ ಬೆಳ್ಳಿ ಹಬ್ಬ ಕಾರ್ಯಕ್ರಮ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣು ಯಕ್ಷಗಾನ ತಂಡದಿಂದ ಯಕ್ಷಗಾನ ಮಕ್ಕಳಿಗೆ ಸಮವಸ್ತ್ರ ವಿತರಣೆ

Suddi Udaya

ಕೊಕ್ಕಡ: ಸೌತಡ್ಕದಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷ: ನಡೆದು ಕೊಂಡು ಹೋಗುವ ಸಂದರ್ಭದಲ್ಲಿ ಆನೆ ತಿವಿದು; ಬಾಲಕೃಷ್ಣ ಶೆಟ್ಟಿ ಸ್ಥಳದಲ್ಲೇ ಸಾವು

Suddi Udaya

ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ದೆಹಲಿಯಲ್ಲಿ ಭೇಟಿಯಾದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ

Suddi Udaya
error: Content is protected !!