22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ – ಉಪ್ಪಿನಂಗಡಿ ಮುಖ್ಯ ರಸ್ತೆಯ ಕುಲಾಲ ಮಂದಿರದ ಬಳಿ ಬೃಹತ್ ಮರಗಳು ರಸ್ತೆಯ ಅಂಚಿನಲ್ಲಿದ್ದು ತೆರವುಗೊಳಿಸುವಂತೆ ಹರೀಶ್ ಕಾರಿಂಜ ಒತ್ತಾಯ

ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಗುರುವಾಯನಕೆರೆ – ಉಪ್ಪಿನಂಗಡಿ ಮುಖ್ಯ ರಸ್ತೆಯ ಕುಲಾಲ ಮಂದಿರದ ಬಳಿ ಬ್ರಹತ್ ಮರಗಳು ರಸ್ತೆಯ ಅಂಚಿನಲ್ಲಿದ್ದು ರಸ್ತೆಗೆ ತಗುವ ರೀತಿಯಲ್ಲಿ ಇದೆ. ಗಾಳಿ ಮಳೆಗೆ ರಸ್ತೆಗೆ ಬೀಳುವ ಹಂತದಲ್ಲಿರುವ ಮರಗಳನ್ನು ಶೀಘ್ರದಲ್ಲಿ ಅರಣ್ಯ ಇಲಾಖೆ ತೆರವು ಮಾಡುವುದು ಸೂಕ್ತ ಎಂದು ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಅಧ್ಯಕ್ಷರಾದ ಹರೀಶ್ ಕಾರಿಂಜ ತಿಳಿಸಿದ್ದಾರೆ.

ಈ ರಸ್ತೆಯಲ್ಲಿ ಅಂಗನವಾಡಿ ಮಕ್ಕಳು ಶಾಲಾ ಕಾಲೇಜ್ ಮಕ್ಕಳು ಸಾರ್ವಜನಿಕರು ನಡೆದು ಕೊಂಡು ಹೋಗುತ್ತಿರುತ್ತಾರೆ. ಜೋರಾದ ಗಾಳಿ ಬೀಸಿದರೆ ರಸ್ತೆಯಲ್ಲಿ ಸಂಚಾರಿಸುವ ವಾಹನಗಳು ಮತ್ತು ಅದರಲ್ಲಿರುವ ಪ್ರಯಾಣಿಕರ ಜೀವಕ್ಕೆ ಅಪಾಯಕಾರಿ.

ಈಗಾಗಲೇ ವರ್ಷಗಳ ಹಿಂದೆಯೇ ಕುಲಾಲ ಮಂದಿರದ ಮೂಲಕ ಲಿಖಿತವಾಗಿ ಅರಣ್ಯ ಇಲಾಖೆ ಅರ್ಜಿ ಸಲ್ಲಿಸಿದ್ದು, ಮತ್ತು ತಾಲೂಕು ವಿಪತ್ತು ನಿರ್ವಹಣಾ ತಂಡಕ್ಕೆ ಕುವೆಟ್ಟು ಅಭಿವೃದ್ಧಿ ಅಧಿಕಾರಿಗಳ ಮೂಲಕ ಮಾಹಿತಿಯನ್ನು ರವನಿಸಲಾಗಿದೆ. ಈ ಬಗ್ಗೆ ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ತಾಲೂಕು ಆಡಳಿತ ಎಚ್ಚೆತ್ತುಕೊಂಡು ಮರಗಳನ್ನು ಶೀಘ್ರದಲ್ಲಿ ತೆರವು ಕಾರ್ಯ ಮಾಡಬೇಕು ಎಂದು ಸಾರ್ವಜನಿಕರ ಪರವಾಗಿ ಬೆಳ್ತಂಗಡಿ ಸುದ್ದಿ ಉದಯ ಪತ್ರಿಕೆಯ ಮೂಲಕ ಎಲ್ಲಾ ಅಧಿಕಾರಿಗಳಲ್ಲಿ ಹರೀಶ್ ಕಾರಿಂಜ ವಿನಂತಿಸಿದ್ದಾರೆ.

Related posts

ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಜಿನ ಭಜನಾ ಸ್ಪರ್ಧೆಯ ಸಮಾಲೋಚನಾ ಸಭೆ

Suddi Udaya

ಮಚ್ಚಿನ: ಹಿಂದೂ ರುದ್ರ ಭೂಮಿಯ ಕಾಮಗಾರಿಗೆ ಮಂಜೂರಾದ ಅನುದಾನವನ್ನು ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡರಿಂದ ರೂ 2.5 ಲಕ್ಷ ಹಸ್ತಾಂತರ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಗುರುವಾಯನಕೆರೆ ‌: ಬೈಕ್ ಗಳೇರಡರ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯ

Suddi Udaya

ಉಜಿರೆಯಲ್ಲಿ ಸುಗಂಧಿ’ ಸ್ ಗಲ್ಲಿ ಕಿಚನ್ ಹೋಟೆಲ್ ಉದ್ಘಾಟನೆ

Suddi Udaya

ಗಡಾಯಿಕಲ್ಲಿಗೆ ಸಿಡಿಲು ಬಡಿದು ಕಾಣಿಸಿಕೊಂಡ ಬೆಂಕಿ

Suddi Udaya
error: Content is protected !!