September 6, 2026
ಕ್ರೀಡಾ ಸುದ್ದಿಚಿತ್ರ ವರದಿವರದಿ

44ನೇ ರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -2025ಶಿಕ್ಷಕಿ ಸೌಮ್ಯಾ ಕೆ. ಬಂಗಾಡಿ ಅವರಿಗೆ ಹಲವು ಬಹುಮಾನಗಳು

ಬೆಳ್ತಂಗಡಿ; ಏ.21ರಿಂದ 23ರವರೆಗೆ ಮೈಸೂರು ಚಾಮುಂಡಿ ವಿಹಾರ ಸ್ಟೇಡಿಯಂನಲ್ಲಿ ಜರುಗಿದ 44ನೇ ರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ 2025 ಇದರಲ್ಲಿ ಸರಕಾರಿ ಪ್ರೌಢ ಶಾಲೆ ಕಾಶಿಪಟ್ಣ ಸಮಾಜ ವಿಜ್ಞಾನ ಶಿಕ್ಷಕಿ ಸೌಮ್ಯ. ಕೆ ಅವರು ಭಾಗವಹಿಸಿ ಹಲವು ವಿಭಾಗಗಳಲ್ಲಿ ಬಹುಮಾನಗಳನ್ನು ಗೆದ್ದುಕೊಂಡಿದ್ದಾರೆ.

ಪಂದ್ಯಾಕೂಟದ 40 ರಿಂದ 45 ವರ್ಷ ವಯೋಮಾನದವರ ಸ್ಪರ್ಧೆಯ 200ಮೀ ಹರ್ಡಲ್ಸ್ ಪ್ರಥಮ, ಉದ್ದಜಿಗಿತ ಪ್ರಥಮ, 400 ಮೀ ದ್ವೀತಿಯ, 200 ಮೀ ದ್ವೀತಿಯ, 4*400 ರಿಲೇ ಪ್ರಥಮ, 4*100 ರಿಲೇ ಪ್ರಥಮ, 4*100 ಮಿಕ್ಸೆಡ್ ರಿಲೇ ತೃತೀಯ ಸ್ಥಾನ ಪಡೆಯುವ ಮೂಲಕ ಅಪೂರ್ವ ಕ್ರೀಡಾ ಸಾಧನೆ ಮೆರೆದಿದ್ದಾರೆ.

ಇವರ ಈ ಸ್ಪೂರ್ತಿದಾಯಕ‌ ಕ್ರೀಡಾ ಭಾಗವಹಿಸುವಿಕೆ ಕ್ರೀಡಾ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಇವರು ಬಂಗಾಡಿ ಸಹಕಾರಿ ಬ್ಯಾಂಕ್ ಮಾಜಿ ಅಧ್ಯಕ್ಷ ಎನ್ ಲಕ್ಷ್ಮಣ ಗೌಡ ಅವರ ಪುತ್ರಿ.

Related posts

ಹೊಸಪಟ್ಣ: ಶ್ರೀ ಸತ್ಯನಾರಾಯಣ ರಂಗ ಮಂದಿರದ ವಠಾರದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya

​ವಿದ್ಯಾಮಾತಾ ಅಕಾಡೆಮಿ, ಪುತ್ತೂರು: GPSTR, PSTR ಹಾಗೂ HSTR ಸರಕಾರಿ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಚಿತ ತರಬೇತಿ ಕಾರ್ಯಾಗಾರ!

Suddi Udaya

ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಪ್ರಮೋದ್ ಕುಮಾರ್ ರವರಿಗೆ ‘ಪಣಿಕ್ಕರ್’ ಬಿರುದು

Suddi Udaya

ಇಂದಬೆಟ್ಟು ಗ್ರಾ.ಪಂ. ಸಿಬ್ಬಂದಿ ಗೋಪಾಲ. ಕೆ ನಿಧನ

Suddi Udaya

ಉಜಿರೆ:ಎಸ್.ಡಿ.ಎಂ ಮಹಿಳಾ ಐ.ಟಿ.ಐ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!