22.6 C
ಪುತ್ತೂರು, ಬೆಳ್ತಂಗಡಿ
July 23, 2026
ಕ್ರೀಡಾ ಸುದ್ದಿಚಿತ್ರ ವರದಿವರದಿ

44ನೇ ರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -2025ಶಿಕ್ಷಕಿ ಸೌಮ್ಯಾ ಕೆ. ಬಂಗಾಡಿ ಅವರಿಗೆ ಹಲವು ಬಹುಮಾನಗಳು

ಬೆಳ್ತಂಗಡಿ; ಏ.21ರಿಂದ 23ರವರೆಗೆ ಮೈಸೂರು ಚಾಮುಂಡಿ ವಿಹಾರ ಸ್ಟೇಡಿಯಂನಲ್ಲಿ ಜರುಗಿದ 44ನೇ ರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ 2025 ಇದರಲ್ಲಿ ಸರಕಾರಿ ಪ್ರೌಢ ಶಾಲೆ ಕಾಶಿಪಟ್ಣ ಸಮಾಜ ವಿಜ್ಞಾನ ಶಿಕ್ಷಕಿ ಸೌಮ್ಯ. ಕೆ ಅವರು ಭಾಗವಹಿಸಿ ಹಲವು ವಿಭಾಗಗಳಲ್ಲಿ ಬಹುಮಾನಗಳನ್ನು ಗೆದ್ದುಕೊಂಡಿದ್ದಾರೆ.

ಪಂದ್ಯಾಕೂಟದ 40 ರಿಂದ 45 ವರ್ಷ ವಯೋಮಾನದವರ ಸ್ಪರ್ಧೆಯ 200ಮೀ ಹರ್ಡಲ್ಸ್ ಪ್ರಥಮ, ಉದ್ದಜಿಗಿತ ಪ್ರಥಮ, 400 ಮೀ ದ್ವೀತಿಯ, 200 ಮೀ ದ್ವೀತಿಯ, 4*400 ರಿಲೇ ಪ್ರಥಮ, 4*100 ರಿಲೇ ಪ್ರಥಮ, 4*100 ಮಿಕ್ಸೆಡ್ ರಿಲೇ ತೃತೀಯ ಸ್ಥಾನ ಪಡೆಯುವ ಮೂಲಕ ಅಪೂರ್ವ ಕ್ರೀಡಾ ಸಾಧನೆ ಮೆರೆದಿದ್ದಾರೆ.

ಇವರ ಈ ಸ್ಪೂರ್ತಿದಾಯಕ‌ ಕ್ರೀಡಾ ಭಾಗವಹಿಸುವಿಕೆ ಕ್ರೀಡಾ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಇವರು ಬಂಗಾಡಿ ಸಹಕಾರಿ ಬ್ಯಾಂಕ್ ಮಾಜಿ ಅಧ್ಯಕ್ಷ ಎನ್ ಲಕ್ಷ್ಮಣ ಗೌಡ ಅವರ ಪುತ್ರಿ.

Related posts

ಬೆಳ್ತಂಗಡಿ : ಅಕ್ರಮ ಮರಳು ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸ್ ದಾಳಿ

Suddi Udaya

ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಕೃತಜ್ಞತಾ ಸಮಾರಂಭ

Suddi Udaya

ಸಬರಬೈಲು ಶಾಲಾ ಬಳಿ ಚರಂಡಿಯ ವ್ಯವಸ್ಥೆ ಇಲ್ಲದೆ ಮಾರ್ಗದಲ್ಲಿ ಹರಿಯುತ್ತಿರುವ ನೀರು: ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಅಗ್ರಹ

Suddi Udaya

ನಾರಾವಿ ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘ ಹಾಗೂ ಬೆಸ್ಟ್ ಫೌಂಡೇಶನ್ ಜಂಟಿ ಆಶ್ರಯದಲ್ಲಿ ಉಚಿತ ಪುಸ್ತಕ ವಿತರಣೆ

Suddi Udaya

ಕೊಯ್ಯೂರು ಸರಕಾರಿ ಪದವಿಪೂರ್ವ ಕಾಲೇಜು ಅಭಿವೃದ್ಧಿ ಬಗ್ಗೆ ಸಮಾಲೋಚನೆ ಸಭೆ

Suddi Udaya

ಹತ್ಯಡ್ಕ: ಕೊಡಂಗೆ ನಿವಾಸಿ ಹರಿಹರ ಹೆಬ್ಬಾರ್ ಗೋಖಲೆ ನಿಧನ

Suddi Udaya
error: Content is protected !!