25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ – ಉಪ್ಪಿನಂಗಡಿ ಮುಖ್ಯ ರಸ್ತೆಯ ಕುಲಾಲ ಮಂದಿರದ ಬಳಿ ಬೃಹತ್ ಮರಗಳು ರಸ್ತೆಯ ಅಂಚಿನಲ್ಲಿದ್ದು ತೆರವುಗೊಳಿಸುವಂತೆ ಹರೀಶ್ ಕಾರಿಂಜ ಒತ್ತಾಯ

ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಗುರುವಾಯನಕೆರೆ – ಉಪ್ಪಿನಂಗಡಿ ಮುಖ್ಯ ರಸ್ತೆಯ ಕುಲಾಲ ಮಂದಿರದ ಬಳಿ ಬ್ರಹತ್ ಮರಗಳು ರಸ್ತೆಯ ಅಂಚಿನಲ್ಲಿದ್ದು ರಸ್ತೆಗೆ ತಗುವ ರೀತಿಯಲ್ಲಿ ಇದೆ. ಗಾಳಿ ಮಳೆಗೆ ರಸ್ತೆಗೆ ಬೀಳುವ ಹಂತದಲ್ಲಿರುವ ಮರಗಳನ್ನು ಶೀಘ್ರದಲ್ಲಿ ಅರಣ್ಯ ಇಲಾಖೆ ತೆರವು ಮಾಡುವುದು ಸೂಕ್ತ ಎಂದು ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಅಧ್ಯಕ್ಷರಾದ ಹರೀಶ್ ಕಾರಿಂಜ ತಿಳಿಸಿದ್ದಾರೆ.

ಈ ರಸ್ತೆಯಲ್ಲಿ ಅಂಗನವಾಡಿ ಮಕ್ಕಳು ಶಾಲಾ ಕಾಲೇಜ್ ಮಕ್ಕಳು ಸಾರ್ವಜನಿಕರು ನಡೆದು ಕೊಂಡು ಹೋಗುತ್ತಿರುತ್ತಾರೆ. ಜೋರಾದ ಗಾಳಿ ಬೀಸಿದರೆ ರಸ್ತೆಯಲ್ಲಿ ಸಂಚಾರಿಸುವ ವಾಹನಗಳು ಮತ್ತು ಅದರಲ್ಲಿರುವ ಪ್ರಯಾಣಿಕರ ಜೀವಕ್ಕೆ ಅಪಾಯಕಾರಿ.

ಈಗಾಗಲೇ ವರ್ಷಗಳ ಹಿಂದೆಯೇ ಕುಲಾಲ ಮಂದಿರದ ಮೂಲಕ ಲಿಖಿತವಾಗಿ ಅರಣ್ಯ ಇಲಾಖೆ ಅರ್ಜಿ ಸಲ್ಲಿಸಿದ್ದು, ಮತ್ತು ತಾಲೂಕು ವಿಪತ್ತು ನಿರ್ವಹಣಾ ತಂಡಕ್ಕೆ ಕುವೆಟ್ಟು ಅಭಿವೃದ್ಧಿ ಅಧಿಕಾರಿಗಳ ಮೂಲಕ ಮಾಹಿತಿಯನ್ನು ರವನಿಸಲಾಗಿದೆ. ಈ ಬಗ್ಗೆ ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ತಾಲೂಕು ಆಡಳಿತ ಎಚ್ಚೆತ್ತುಕೊಂಡು ಮರಗಳನ್ನು ಶೀಘ್ರದಲ್ಲಿ ತೆರವು ಕಾರ್ಯ ಮಾಡಬೇಕು ಎಂದು ಸಾರ್ವಜನಿಕರ ಪರವಾಗಿ ಬೆಳ್ತಂಗಡಿ ಸುದ್ದಿ ಉದಯ ಪತ್ರಿಕೆಯ ಮೂಲಕ ಎಲ್ಲಾ ಅಧಿಕಾರಿಗಳಲ್ಲಿ ಹರೀಶ್ ಕಾರಿಂಜ ವಿನಂತಿಸಿದ್ದಾರೆ.

Related posts

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಪುತ್ತಿಲ ನಿವಾಸಿ ಸುನಂದಾರಿಗೆ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ಧನಸಹಾಯ ಹಸ್ತಾಂತರ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ರಾಷ್ಟ್ರೀಯ ತನಿಖಾ ತಂಡದಿಂದ ತನಿಖೆಯಾಗಬೇಕು : ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಸೌತಡ್ಕ ದೇವಳದ ಸಮೀಪದಿಂದ ದನ ಕಳವು

Suddi Udaya

ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿಯನ್ನು ಅಪಹರಣಕ್ಕೆ ಯತ್ನಿಸಿದ ಮುಸುಕುಧಾರಿಗಳು: ಚೂರಿಯಿಂದ ಇರಿದು ಹಲ್ಲೆ: ಗಾಯಗೊಂಡ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲು

Suddi Udaya

ನಡ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಜನಾರ್ದನ ಗೌಡ, ಉಪಾಧ್ಯಕ್ಷರಾಗಿ ಹೇಮಾವತಿ ಆಯ್ಕೆ

Suddi Udaya
error: Content is protected !!