23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ – ಉಪ್ಪಿನಂಗಡಿ ಮುಖ್ಯ ರಸ್ತೆಯ ಕುಲಾಲ ಮಂದಿರದ ಬಳಿ ಬೃಹತ್ ಮರಗಳು ರಸ್ತೆಯ ಅಂಚಿನಲ್ಲಿದ್ದು ತೆರವುಗೊಳಿಸುವಂತೆ ಹರೀಶ್ ಕಾರಿಂಜ ಒತ್ತಾಯ

ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಗುರುವಾಯನಕೆರೆ – ಉಪ್ಪಿನಂಗಡಿ ಮುಖ್ಯ ರಸ್ತೆಯ ಕುಲಾಲ ಮಂದಿರದ ಬಳಿ ಬ್ರಹತ್ ಮರಗಳು ರಸ್ತೆಯ ಅಂಚಿನಲ್ಲಿದ್ದು ರಸ್ತೆಗೆ ತಗುವ ರೀತಿಯಲ್ಲಿ ಇದೆ. ಗಾಳಿ ಮಳೆಗೆ ರಸ್ತೆಗೆ ಬೀಳುವ ಹಂತದಲ್ಲಿರುವ ಮರಗಳನ್ನು ಶೀಘ್ರದಲ್ಲಿ ಅರಣ್ಯ ಇಲಾಖೆ ತೆರವು ಮಾಡುವುದು ಸೂಕ್ತ ಎಂದು ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಅಧ್ಯಕ್ಷರಾದ ಹರೀಶ್ ಕಾರಿಂಜ ತಿಳಿಸಿದ್ದಾರೆ.

ಈ ರಸ್ತೆಯಲ್ಲಿ ಅಂಗನವಾಡಿ ಮಕ್ಕಳು ಶಾಲಾ ಕಾಲೇಜ್ ಮಕ್ಕಳು ಸಾರ್ವಜನಿಕರು ನಡೆದು ಕೊಂಡು ಹೋಗುತ್ತಿರುತ್ತಾರೆ. ಜೋರಾದ ಗಾಳಿ ಬೀಸಿದರೆ ರಸ್ತೆಯಲ್ಲಿ ಸಂಚಾರಿಸುವ ವಾಹನಗಳು ಮತ್ತು ಅದರಲ್ಲಿರುವ ಪ್ರಯಾಣಿಕರ ಜೀವಕ್ಕೆ ಅಪಾಯಕಾರಿ.

ಈಗಾಗಲೇ ವರ್ಷಗಳ ಹಿಂದೆಯೇ ಕುಲಾಲ ಮಂದಿರದ ಮೂಲಕ ಲಿಖಿತವಾಗಿ ಅರಣ್ಯ ಇಲಾಖೆ ಅರ್ಜಿ ಸಲ್ಲಿಸಿದ್ದು, ಮತ್ತು ತಾಲೂಕು ವಿಪತ್ತು ನಿರ್ವಹಣಾ ತಂಡಕ್ಕೆ ಕುವೆಟ್ಟು ಅಭಿವೃದ್ಧಿ ಅಧಿಕಾರಿಗಳ ಮೂಲಕ ಮಾಹಿತಿಯನ್ನು ರವನಿಸಲಾಗಿದೆ. ಈ ಬಗ್ಗೆ ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ತಾಲೂಕು ಆಡಳಿತ ಎಚ್ಚೆತ್ತುಕೊಂಡು ಮರಗಳನ್ನು ಶೀಘ್ರದಲ್ಲಿ ತೆರವು ಕಾರ್ಯ ಮಾಡಬೇಕು ಎಂದು ಸಾರ್ವಜನಿಕರ ಪರವಾಗಿ ಬೆಳ್ತಂಗಡಿ ಸುದ್ದಿ ಉದಯ ಪತ್ರಿಕೆಯ ಮೂಲಕ ಎಲ್ಲಾ ಅಧಿಕಾರಿಗಳಲ್ಲಿ ಹರೀಶ್ ಕಾರಿಂಜ ವಿನಂತಿಸಿದ್ದಾರೆ.

Related posts

ಡಾ. ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅಮಿತ್ ಷಾ ವಿವಾದಾತ್ಮಕ ಹೇಳಿಕೆ ಹಾಗೂ ಸಚಿವೆ ವಿರುದ್ಧ ಸಿ.ಟಿ ರವಿ ಹೇಳಿಕೆ ವಿರೋಧಿಸಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

Suddi Udaya

ಸಿದ್ಧಕಟ್ಟೆಯಲ್ಲಿ ರಸ್ತೆ ದಾಟುತ್ತಿದ್ದ ಗುಂಡೂರಿ ಗ್ರಾಮದ ಮಹಿಳೆಗೆ ಬೈಕ್ ಡಿಕ್ಕಿ; ಗಂಭೀರ ಗಾಯಗೊಂಡು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲು

Suddi Udaya

ಉಜಿರೆ: ಎಸ್. ಡಿ. ಎಂ ಅಂತರ್ ಕಾಲೇಜು ಗೂಡುದೀಪ ಸ್ಪರ್ಧೆ

Suddi Udaya

ಬೆಳ್ತಂಗಡಿ ಪ.ಪಂ. ನಾಲ್ಕನೇ ವಾರ್ಡಿನ ಹಿಂದೂ ರುದ್ರ ಭೂಮಿಗೆ ರೂ 40 ಲಕ್ಷ ವೆಚ್ಚದಲ್ಲಿ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ದ್ವಿಸಹಸ್ರ ಮದ್ಯವರ್ಜನ ಶಿಬಿರದ ಸಹಸ್ರಾರು ಮದ್ಯವರ್ಜಿತರ ಸಮಾವೇಶ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ವತಿಯಿಂದ ಡಾ. ಯು.ಸಿ. ಪೌಲೋಸ್ ಅವರಿಗೆ ‘ಕೀರ್ತಿಶೇಷ ಜಿ.ಎನ್. ಭಿಡೆ’ ಪ್ರಶಸ್ತಿ

Suddi Udaya
error: Content is protected !!